ಬ್ರೇಕಿಂಗ್ ನ್ಯೂಸ್
15-01-25 12:09 pm Mangaluru Correspondent ಕರಾವಳಿ
ಮಂಗಳೂರು, ಜ.15: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ತಪಾಸಣೆಗೆ ಮುಂದಾದ ಸಿಬ್ಬಂದಿಗಳಿಗೆ ವಿಚಾರಣಾಧೀನ ಕೈದಿಗಳು ಕೈಯಿಂದ ಹಲ್ಲೆಗೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು ಜೈಲು ಸಿಬಂದಿ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ.
ಜೈಲಿನ ಸೆಲ್ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯಲ್ಲಿ ಸೋಮವಾರ ರಾತ್ರಿ ಸಿಬ್ಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ, ಎ ಬ್ಲಾಕ್ ನಲ್ಲಿರುವ ವಿಚಾರಣಾಧೀನ ಕೈದಿಗಳು ಸಿಬಂದಿಗೆ ಒಳಗೆ ಬರದಂತೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಮಂಗಳೂರು ಜೈಲಿನಲ್ಲಿ ಎ ಮತ್ತು ಬಿ ಬ್ಲಾಕ್ ಎಂದು ಹಿಂದು- ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಇದೆ. ಎ ಬ್ಲಾಕ್ ನಲ್ಲಿ ಮುಸ್ಲಿಂ ಕೈದಿಗಳನ್ನು ತುಂಬಲಾಗಿದೆ. ಅದರೊಳಗೆ ತಪಾಸಣೆಗೆ ತೆರಳಿದ್ದಾಗ ಹಲ್ಲೆ ಯತ್ನ ಆಗಿದೆ. ಆನಂತರ, ಸಿಬಂದಿ ಸೆಲ್ ಒಳಗಡೆ ಹೋಗದೆ ಹಿಂದಕ್ಕೆ ಬಂದಿದ್ದಾರೆ. ರಾತ್ರಿ 7.30ಕ್ಕೆ ಎಂದಿನಂತೆ ಊಟ ಪೂರೈಕೆ ಮಾಡಿದ ಬಳಿಕ ಸೆಲ್ ಒಳಗೆ ತಪಾಸಣೆ ನಡೆಸಲು ಸಿಬಂದಿ ಮುಂದಾಗಿದ್ದರು.
ಜೈಲು ಸೆಲ್ ನಲ್ಲಿ ಮೊಬೈಲ್, ಗಾಂಜಾ ಇನ್ನಿತರ ನಿಷೇಧಿತ ಮಾದಕ ದ್ರವ್ಯಗಳಿರುವ ಶಂಕೆಯಲ್ಲಿ ಜೈಲು ಅಧೀಕ್ಷಕ ಎಂ.ಎಚ್. ಅಶೇಖಾನ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಗಿತ್ತು. ಆದರೆ ಎ ಬ್ಲಾಕ್ ಕೈದಿಗಳು ತಮ್ಮಲ್ಲಿದ್ದ ಪಾತ್ರೆ ಇನ್ನಿತರ ವಸ್ತುಗಳಿಂದ ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಒಡ್ಡಿದ್ದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಎ ಬ್ಲಾಕ್ ನಲ್ಲಿರುವ ಎಲ್ಲ ಕೈದಿಗಳ ಹೆಸರನ್ನೂ ಉಲ್ಲೇಖಿಸಿ ಪ್ರಕರಣ ದಾಖಲಿಸಲಾಗಿದೆ.
Mangalore Jail staff assaulted and threatened by A block jail inmates, case filed at barke police station
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm