ಬ್ರೇಕಿಂಗ್ ನ್ಯೂಸ್
17-01-25 12:59 pm Mangaluru Correspondent ಕರಾವಳಿ
ಮಂಗಳೂರು, ಜ.17: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ಪ್ರವಾಸ ಎರಡು ಗಂಟೆ ವಿಳಂಬವಾಗಿದೆ. ಹೀಗಾಗಿ ಸಿಎಂ ಕಾರ್ಯಕ್ರಮಕ್ಕಾಗಿ ಕಾದು ಕುಳಿತ ಅಧಿಕಾರಿಗಳು, ಮಾಧ್ಯಮದವರು, ಜನಸಾಮಾನ್ಯರು ಕಾದು ಕಾದು ಹೈರಾಣಾಗಿದ್ದಾರೆ.
ಮಂಗಳೂರಿನಲ್ಲಿ ಬೆಳಗ್ಗೆ 11 ಗಂಟೆಗೆ ಮೇರಿಹಿಲ್ ನಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ ಶಿಲಾನ್ಯಾಸ ನೆರವೇರಿಸಬೇಕಿತ್ತು. ಇದಕ್ಕಾಗಿ ರಾಜೀವ ಗಾಂಧಿ ಯೂನಿವರ್ಸಿಟಿ ಒಳಪಟ್ಟ ಮಂಗಳೂರಿನ ಹಲವು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳನ್ನು ಕರೆಸಲಾಗಿತ್ತು. ನೂರಾರು ವಿದ್ಯಾರ್ಥಿಗಳು ಸ್ಥಳದಲ್ಲಿ ಸೇರಿದ್ದು ಹಾಕಿರುವ ಶಾಮಿಯಾನ, ಕುರ್ಚಿ ಸಾಕಾಗದೆ ಹೊರಗಡೆಯೂ ನಿಂತಿದ್ದಾರೆ. ಇದಲ್ಲದೆ, ನರ್ಸಿಂಗ್ ಕಾಲೇಜುಗಳ ಉಪನ್ಯಾಸಕರು, ಯುನಿವರ್ಸಿಟಿ ಅಧಿಕಾರಿಗಳು ಕೂಡ ಸ್ಥಳದಲ್ಲಿದ್ದು ಮುಖ್ಯಮಂತ್ರಿ ಬರುವಿಕೆಯನ್ನು ಕಾಯುತ್ತಿದ್ದಾರೆ. ಇದಲ್ಲದೆ, ಈ ಕಾರ್ಯಕ್ರಮಕ್ಕಾಗಿ ವಾರ್ತಾ ಇಲಾಖೆಯಿಂದ ಮಾಧ್ಯಮದವರನ್ನೂ 11 ಗಂಟೆಗೆ ಸ್ಥಳಕ್ಕೆ ಕರೆದೊಯ್ಯಲಾಗಿತ್ತು.
ನರ್ಸಿಂಗ್ ವಿದ್ಯಾರ್ಥಿಗಳನ್ನು ಬೆಳಗ್ಗೆ 9 ಗಂಟೆಗೇ ಕರೆಸಲಾಗಿತ್ತು. ಉಡುಪಿಯಿಂದ ಆಗಮಿಸಿರುವ ವಿದ್ಯಾರ್ಥಿಗಳಿಗೆ ಕನಿಷ್ಠ ಉಪಾಹಾರ ವ್ಯವಸ್ಥೆಯನ್ನೂ ಮಾಡಿಲ್ಲ. ಕೆಲವು ವಿದ್ಯಾರ್ಥಿಗಳು, ಉಪನ್ಯಾಸಕರು ಹೊರಗಡೆ ಹೊಟೇಲ್ ಹೋಗಿ ಬಾಯಾರಿಕೆ ಕುಡಿಯುತ್ತಿದ್ದರು. ಅಧಿಕಾರಿಗಳ ಮಾಹಿತಿ ಪ್ರಕಾರ, ಸಿಎಂ ಸಿದ್ದರಾಮಯ್ಯ ಅವರು 12 ಗಂಟೆ ವೇಳೆಗೆ ಬೆಂಗಳೂರಿನಿಂದ ಹೊರಟಿದ್ದು 12.45 ರ ವೇಳೆಗೆ ಮಂಗಳೂರು ಏರ್ಪೋರ್ಟ್ ತಲುಪಬಹುದು. ಮೇರಿಹಿಲ್ ಕಾರ್ಯಕ್ರಮ ಸ್ಥಳಕ್ಕೆ ತಲುಪುವಾಗ 1.20 ಗಂಟೆ ಆಗಬಹುದು ಎನ್ನುತ್ತಿದ್ದಾರೆ. ಸ್ಥಳದಲ್ಲಿ ಸೇರಿದ ಜನರಿಗೆ ಬೋರ್ ಆಗುವುದನ್ನು ತಪ್ಪಿಸಲು ವಿದ್ಯಾರ್ಥಿಗಳನ್ನು ವೇದಿಕೆಗೆ ಕರೆಸಿ ಹಾಡುಗಳನ್ನು ಹಾಡಿಸುವ ಸ್ಥಿತಿಯಾಗಿದೆ. ವೇದಿಕೆ ಖಾಲಿ ಇದ್ದರೂ ಸ್ಪೀಕರ್ ಯುಟಿ ಖಾದರ್, ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಭಾಷಣ ಮಾಡಿ ಟೈಮ್ ಫಿಲ್ಲಿಂಗ್ ಮಾಡಿದ್ದಾರೆ.
ಇದೇ ವೇಳೆ, ಇತ್ತ ಮಂಗಳೂರು ಪುರಭವನದಲ್ಲಿ ಬಹು ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗಿದೆ. ತುಳು, ಬ್ಯಾರಿ, ಕೊಂಕಣಿ, ಕೊಡವ, ಯಕ್ಷಗಾನ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಜಂಟಿ ಸಹಭಾಗಿತ್ವದಲ್ಲಿ ಉತ್ಸವ ಹಮ್ಮಿಕೊಂಡಿದ್ದು 12 ಗಂಟೆ ವೇಳೆಗೆ ಸಿದ್ದರಾಮಯ್ಯ ಉದ್ಘಾಟನೆ ಮಾಡಬೇಕಿತ್ತು. ಕಾರ್ಯಕ್ರಮ ಸ್ಥಳದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಸ್ಕೃತಿ ಉತ್ಸವಕ್ಕಾಗಿ ಆಗಮಿಸಿದ ಸಾರ್ವಜನಿಕರು, ಶಾಲೆ- ಕಾಲೇಜು ವಿದ್ಯಾರ್ಥಿಗಳು ಸೇರಿದ್ದಾರೆ. ಎರಡು ಕಡೆಯೂ ಮುಖ್ಯಮಂತ್ರಿ ಬರುವಿಕೆಗಾಗಿ ನೂರಾರು ಜನರು ಕಾಯುತ್ತಿದ್ದಾರೆ.
ಕೊನೆಗೂ ಸ್ಥಳಕ್ಕೆ ತಲುಪಿದ ಸಿಎಂ ಸಿದ್ದರಾಮಯ್ಯ ;
ಅಂತೂ ಮೇರಿಹಿಲ್ ನಲ್ಲಿ ನಡೆದ ಕಾರ್ಯಕ್ರಮ ಸ್ಥಳಕ್ಕೆ ಮಧ್ಯಾಹ್ನ 1 ಗಂಟೆ 5 ನಿಮಿಷಕ್ಕೆ ಸಿಎಂ ಸಿದ್ದರಾಮಯ್ಯ ತಲುಪಿದ್ದಾರೆ. ರಾಜೀವ ಗಾಂಧಿ ವಿವಿಯ ಪ್ರಾದೇಶಿಕ ಕೇಂದ್ರಕ್ಕೆ ಸಿದ್ದರಾಮಯ್ಯ ಎರಡನೇ ಬಾರಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಈ ಹಿಂದೆ 2020ರಲ್ಲಿ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಇದೇ ಜಾಗದಲ್ಲಿ ರಾಜೀವ ಗಾಂಧಿ ವಿವಿಯ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಮಾಡಿದ್ದರು.
CM Siddaramaiah arrives two hours late to lay foundation stone for RGUHS regional headquarters in Mangalore. Chief Minister Siddaramaiah was to lay the foundation stone for the Mangalore regional headquarters of the Rajiv Gandhi University of Health Sciences (RGUHS), Bangalore, on January 17. The new center located in Maryhill.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 06:57 pm
Mangalore Correspondent
Mangalore, Suhas Shetty Murder, Anti Communia...
03-05-25 02:58 pm
Mangalore Suhas Shetty Murder, Instagram, Pol...
02-05-25 10:47 pm
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm