ಬ್ರೇಕಿಂಗ್ ನ್ಯೂಸ್
17-01-25 10:50 pm Mangalore Correspondent ಕರಾವಳಿ
ಮಂಗಳೂರು, ಜ.17: ತನ್ನ ಕಟ್ಟಡದಲ್ಲಿ ಬಾಡಿಗೆ ಇರುವ ಮಹಿಳೆಯೊಬ್ಬರಿಗೆ ಮಾಲೀಕನೇ ಮಾನಸಿಕ ಕಿರುಕುಳ ಕೊಡುವುದಲ್ಲದೆ, ನೀರು, ವಿದ್ಯುತ್ ಕಡಿತಗೊಳಿಸಿ ವಿನಾಕಾರಣ ತೊಂದರೆ ಕೊಡುತ್ತಿರುವ ಆರೋಪ ಕೇಳಿಬಂದಿದೆ.
ಸೋಮೇಶ್ವರ ಗ್ರಾಮದ ಅಂಬಿಕಾ ರೋಡ್ ಬಳಿಯ ಸುಧಾಕರ ಭಂಡಾರಿ ಎಂಬವರ ಕಟ್ಟಡದಲ್ಲಿ ಮಹಿಳೆ ತನ್ನ ಮಕ್ಕಳೊಂದಿಗೆ ಬಾಡಿಗೆಗೆ ಇದ್ದಾರೆ. ಕಳೆದ ಡಿಸೆಂಬರ್ ತಿಂಗಳಿನಿಂದ ರಾತ್ರಿ ವೇಳೆ ಈ ವ್ಯಕ್ತಿ ಮನೆಯ ಬಾಗಿಲು ಬಡಿಯುವುದು, ನಾಯಿ ಬಿಟ್ಟು ಕಿರುಕುಳ ಕೊಡುವುದು ಮಾಡುತ್ತಿದ್ದಾರೆ. ತಿಂಗಳ ಬಾಡಿಗೆಯನ್ನು ಸರಿಯಾಗಿ ಕೊಟ್ಟರೂ, ವಿನಾಕಾರಣ ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ, ನೀರು ಪೂರೈಕೆ ಮಾಡದೆ ಸತಾಯಿಸುತ್ತಿದ್ದಾರೆಂದು ಮಹಿಳೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.



ಆದರೆ ಪೊಲೀಸರು ಆರೋಪಿ ವ್ಯಕ್ತಿಯನ್ನು ಕರೆಸಿ ಮುಚ್ಚಳಿಕೆ ಬರೆಸಿ ಕಳಿಸಿಕೊಟ್ಟಿದ್ದಾರೆ. ಹಾಗಿದ್ದರೂ ನೀರು ಕೊಡದೆ ಸತಾಯಿಸುವ ಚಾಳಿ ಮುಂದುವರಿದಿದೆ. ಇದರಿಂದಾಗಿ ಮಹಿಳೆ ತೀವ್ರ ನೊಂದುಕೊಂಡಿದ್ದು, ಮಹಿಳೆಯರ ಆಸರೆಯಾದ ಸಖೀ ಕೇಂದ್ರಕ್ಕೂ ದೂರು ನೀಡಿದ್ದಾರೆ. ಅಲ್ಲಿನ ಸಿಬಂದಿ ಬಂದು ಪರಿಶೀಲನೆ ನಡೆಸಿದ್ದು, ಬಿಟ್ಟಿ ಸಲಹೆ ಕೊಟ್ಟು ಹೋಗಿದ್ದಾರಂತೆ. ತನ್ನ ಕಿರುಕುಳದ ಬಗ್ಗೆ 112 ಸಂಖ್ಯೆಗೂ ಮಹಿಳೆ ದೂರು ನೀಡಿದ್ದು, ಕಟ್ಟಡ ಮಾಲೀಕನ ದುರ್ನಡತೆ ಬಗ್ಗೆ ಹೇಳಿಕೊಂಡಿದ್ದಾರೆ. ಆದರೂ ಪ್ರಯೋಜನ ಆಗಿಲ್ಲ ಎಂದು ಮಹಿಳೆ ದೂರಿದ್ದಾರೆ.
ಈ ಹಿಂದೆ ಸುಧಾಕರ ಭಂಡಾರಿ ತನ್ನ ನಾಯಿಯನ್ನು ಬಿಟ್ಟು ಕಚ್ಚುವಂತೆ ಮಾಡಿದ್ದು ಆನಂತರ ಮಹಿಳೆ ಲೇಡಿಗೋಶನ್ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದು ಸುಧಾರಿಸಿಕೊಂಡಿದ್ದರು. ಆದರೂ ತಾಯಿ, ಮಕ್ಕಳಿಗೆ ಕಿರುಕುಳ ಕೊಡುವುದು ಬಿಟ್ಟಿಲ್ಲ. ನೀರು, ವಿದ್ಯುತ್ ಮನುಷ್ಯನ ಮೂಲಭೂತ ಹಕ್ಕು. ಅದನ್ನು ಬಾಡಿಗೆದಾರ ನಿರಾಕರಿಸುವ ಹಾಗಿಲ್ಲ. ಅಲ್ಲದೆ, ಅಗ್ರಿಮೆಂಟ್ ಅವಧಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವುದು ಕರ್ತವ್ಯ ಆಗಿರುತ್ತದೆ. ಪೊಲೀಸರೇ ಈ ಬಗ್ಗೆ ಕಠಿಣ ಕ್ರಮ ಜರುಗಿಸಬೇಕಾಗಿದೆ.
Mangalore Mental torture to by house owner in ullal, case filed. The owner is alleged of disconnecting curent and water facility to the women who is staying for rent.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm