ಬ್ರೇಕಿಂಗ್ ನ್ಯೂಸ್
17-01-25 10:50 pm Mangalore Correspondent ಕರಾವಳಿ
ಮಂಗಳೂರು, ಜ.17: ತನ್ನ ಕಟ್ಟಡದಲ್ಲಿ ಬಾಡಿಗೆ ಇರುವ ಮಹಿಳೆಯೊಬ್ಬರಿಗೆ ಮಾಲೀಕನೇ ಮಾನಸಿಕ ಕಿರುಕುಳ ಕೊಡುವುದಲ್ಲದೆ, ನೀರು, ವಿದ್ಯುತ್ ಕಡಿತಗೊಳಿಸಿ ವಿನಾಕಾರಣ ತೊಂದರೆ ಕೊಡುತ್ತಿರುವ ಆರೋಪ ಕೇಳಿಬಂದಿದೆ.
ಸೋಮೇಶ್ವರ ಗ್ರಾಮದ ಅಂಬಿಕಾ ರೋಡ್ ಬಳಿಯ ಸುಧಾಕರ ಭಂಡಾರಿ ಎಂಬವರ ಕಟ್ಟಡದಲ್ಲಿ ಮಹಿಳೆ ತನ್ನ ಮಕ್ಕಳೊಂದಿಗೆ ಬಾಡಿಗೆಗೆ ಇದ್ದಾರೆ. ಕಳೆದ ಡಿಸೆಂಬರ್ ತಿಂಗಳಿನಿಂದ ರಾತ್ರಿ ವೇಳೆ ಈ ವ್ಯಕ್ತಿ ಮನೆಯ ಬಾಗಿಲು ಬಡಿಯುವುದು, ನಾಯಿ ಬಿಟ್ಟು ಕಿರುಕುಳ ಕೊಡುವುದು ಮಾಡುತ್ತಿದ್ದಾರೆ. ತಿಂಗಳ ಬಾಡಿಗೆಯನ್ನು ಸರಿಯಾಗಿ ಕೊಟ್ಟರೂ, ವಿನಾಕಾರಣ ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ, ನೀರು ಪೂರೈಕೆ ಮಾಡದೆ ಸತಾಯಿಸುತ್ತಿದ್ದಾರೆಂದು ಮಹಿಳೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.



ಆದರೆ ಪೊಲೀಸರು ಆರೋಪಿ ವ್ಯಕ್ತಿಯನ್ನು ಕರೆಸಿ ಮುಚ್ಚಳಿಕೆ ಬರೆಸಿ ಕಳಿಸಿಕೊಟ್ಟಿದ್ದಾರೆ. ಹಾಗಿದ್ದರೂ ನೀರು ಕೊಡದೆ ಸತಾಯಿಸುವ ಚಾಳಿ ಮುಂದುವರಿದಿದೆ. ಇದರಿಂದಾಗಿ ಮಹಿಳೆ ತೀವ್ರ ನೊಂದುಕೊಂಡಿದ್ದು, ಮಹಿಳೆಯರ ಆಸರೆಯಾದ ಸಖೀ ಕೇಂದ್ರಕ್ಕೂ ದೂರು ನೀಡಿದ್ದಾರೆ. ಅಲ್ಲಿನ ಸಿಬಂದಿ ಬಂದು ಪರಿಶೀಲನೆ ನಡೆಸಿದ್ದು, ಬಿಟ್ಟಿ ಸಲಹೆ ಕೊಟ್ಟು ಹೋಗಿದ್ದಾರಂತೆ. ತನ್ನ ಕಿರುಕುಳದ ಬಗ್ಗೆ 112 ಸಂಖ್ಯೆಗೂ ಮಹಿಳೆ ದೂರು ನೀಡಿದ್ದು, ಕಟ್ಟಡ ಮಾಲೀಕನ ದುರ್ನಡತೆ ಬಗ್ಗೆ ಹೇಳಿಕೊಂಡಿದ್ದಾರೆ. ಆದರೂ ಪ್ರಯೋಜನ ಆಗಿಲ್ಲ ಎಂದು ಮಹಿಳೆ ದೂರಿದ್ದಾರೆ.
ಈ ಹಿಂದೆ ಸುಧಾಕರ ಭಂಡಾರಿ ತನ್ನ ನಾಯಿಯನ್ನು ಬಿಟ್ಟು ಕಚ್ಚುವಂತೆ ಮಾಡಿದ್ದು ಆನಂತರ ಮಹಿಳೆ ಲೇಡಿಗೋಶನ್ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದು ಸುಧಾರಿಸಿಕೊಂಡಿದ್ದರು. ಆದರೂ ತಾಯಿ, ಮಕ್ಕಳಿಗೆ ಕಿರುಕುಳ ಕೊಡುವುದು ಬಿಟ್ಟಿಲ್ಲ. ನೀರು, ವಿದ್ಯುತ್ ಮನುಷ್ಯನ ಮೂಲಭೂತ ಹಕ್ಕು. ಅದನ್ನು ಬಾಡಿಗೆದಾರ ನಿರಾಕರಿಸುವ ಹಾಗಿಲ್ಲ. ಅಲ್ಲದೆ, ಅಗ್ರಿಮೆಂಟ್ ಅವಧಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವುದು ಕರ್ತವ್ಯ ಆಗಿರುತ್ತದೆ. ಪೊಲೀಸರೇ ಈ ಬಗ್ಗೆ ಕಠಿಣ ಕ್ರಮ ಜರುಗಿಸಬೇಕಾಗಿದೆ.
Mangalore Mental torture to by house owner in ullal, case filed. The owner is alleged of disconnecting curent and water facility to the women who is staying for rent.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
26-10-25 05:38 pm
HK News Desk
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm