ಬ್ರೇಕಿಂಗ್ ನ್ಯೂಸ್
17-01-25 10:50 pm Mangalore Correspondent ಕರಾವಳಿ
ಮಂಗಳೂರು, ಜ.17: ತನ್ನ ಕಟ್ಟಡದಲ್ಲಿ ಬಾಡಿಗೆ ಇರುವ ಮಹಿಳೆಯೊಬ್ಬರಿಗೆ ಮಾಲೀಕನೇ ಮಾನಸಿಕ ಕಿರುಕುಳ ಕೊಡುವುದಲ್ಲದೆ, ನೀರು, ವಿದ್ಯುತ್ ಕಡಿತಗೊಳಿಸಿ ವಿನಾಕಾರಣ ತೊಂದರೆ ಕೊಡುತ್ತಿರುವ ಆರೋಪ ಕೇಳಿಬಂದಿದೆ.
ಸೋಮೇಶ್ವರ ಗ್ರಾಮದ ಅಂಬಿಕಾ ರೋಡ್ ಬಳಿಯ ಸುಧಾಕರ ಭಂಡಾರಿ ಎಂಬವರ ಕಟ್ಟಡದಲ್ಲಿ ಮಹಿಳೆ ತನ್ನ ಮಕ್ಕಳೊಂದಿಗೆ ಬಾಡಿಗೆಗೆ ಇದ್ದಾರೆ. ಕಳೆದ ಡಿಸೆಂಬರ್ ತಿಂಗಳಿನಿಂದ ರಾತ್ರಿ ವೇಳೆ ಈ ವ್ಯಕ್ತಿ ಮನೆಯ ಬಾಗಿಲು ಬಡಿಯುವುದು, ನಾಯಿ ಬಿಟ್ಟು ಕಿರುಕುಳ ಕೊಡುವುದು ಮಾಡುತ್ತಿದ್ದಾರೆ. ತಿಂಗಳ ಬಾಡಿಗೆಯನ್ನು ಸರಿಯಾಗಿ ಕೊಟ್ಟರೂ, ವಿನಾಕಾರಣ ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ, ನೀರು ಪೂರೈಕೆ ಮಾಡದೆ ಸತಾಯಿಸುತ್ತಿದ್ದಾರೆಂದು ಮಹಿಳೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.



ಆದರೆ ಪೊಲೀಸರು ಆರೋಪಿ ವ್ಯಕ್ತಿಯನ್ನು ಕರೆಸಿ ಮುಚ್ಚಳಿಕೆ ಬರೆಸಿ ಕಳಿಸಿಕೊಟ್ಟಿದ್ದಾರೆ. ಹಾಗಿದ್ದರೂ ನೀರು ಕೊಡದೆ ಸತಾಯಿಸುವ ಚಾಳಿ ಮುಂದುವರಿದಿದೆ. ಇದರಿಂದಾಗಿ ಮಹಿಳೆ ತೀವ್ರ ನೊಂದುಕೊಂಡಿದ್ದು, ಮಹಿಳೆಯರ ಆಸರೆಯಾದ ಸಖೀ ಕೇಂದ್ರಕ್ಕೂ ದೂರು ನೀಡಿದ್ದಾರೆ. ಅಲ್ಲಿನ ಸಿಬಂದಿ ಬಂದು ಪರಿಶೀಲನೆ ನಡೆಸಿದ್ದು, ಬಿಟ್ಟಿ ಸಲಹೆ ಕೊಟ್ಟು ಹೋಗಿದ್ದಾರಂತೆ. ತನ್ನ ಕಿರುಕುಳದ ಬಗ್ಗೆ 112 ಸಂಖ್ಯೆಗೂ ಮಹಿಳೆ ದೂರು ನೀಡಿದ್ದು, ಕಟ್ಟಡ ಮಾಲೀಕನ ದುರ್ನಡತೆ ಬಗ್ಗೆ ಹೇಳಿಕೊಂಡಿದ್ದಾರೆ. ಆದರೂ ಪ್ರಯೋಜನ ಆಗಿಲ್ಲ ಎಂದು ಮಹಿಳೆ ದೂರಿದ್ದಾರೆ.
ಈ ಹಿಂದೆ ಸುಧಾಕರ ಭಂಡಾರಿ ತನ್ನ ನಾಯಿಯನ್ನು ಬಿಟ್ಟು ಕಚ್ಚುವಂತೆ ಮಾಡಿದ್ದು ಆನಂತರ ಮಹಿಳೆ ಲೇಡಿಗೋಶನ್ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದು ಸುಧಾರಿಸಿಕೊಂಡಿದ್ದರು. ಆದರೂ ತಾಯಿ, ಮಕ್ಕಳಿಗೆ ಕಿರುಕುಳ ಕೊಡುವುದು ಬಿಟ್ಟಿಲ್ಲ. ನೀರು, ವಿದ್ಯುತ್ ಮನುಷ್ಯನ ಮೂಲಭೂತ ಹಕ್ಕು. ಅದನ್ನು ಬಾಡಿಗೆದಾರ ನಿರಾಕರಿಸುವ ಹಾಗಿಲ್ಲ. ಅಲ್ಲದೆ, ಅಗ್ರಿಮೆಂಟ್ ಅವಧಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವುದು ಕರ್ತವ್ಯ ಆಗಿರುತ್ತದೆ. ಪೊಲೀಸರೇ ಈ ಬಗ್ಗೆ ಕಠಿಣ ಕ್ರಮ ಜರುಗಿಸಬೇಕಾಗಿದೆ.
Mangalore Mental torture to by house owner in ullal, case filed. The owner is alleged of disconnecting curent and water facility to the women who is staying for rent.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm