ಬ್ರೇಕಿಂಗ್ ನ್ಯೂಸ್
22-01-25 12:39 pm Mangalore Correspondent ಕರಾವಳಿ
ಮಂಗಳೂರು, ಜ.22: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಮುರುಗಂಡಿ ದೇವರ್ ಮತ್ತು ಜೋಶುವಾ ರಾಜೇಂದ್ರನ್ ಅವರನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದು, ಅಲ್ಲಿನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುರುಗಂಡಿ ದೇವರ್ ತಿರುನಲ್ವೇಲಿ ಜಿಲ್ಲೆಯ ಪದ್ಮನೇರಿ ಗ್ರಾಮದ ಕಾಲಕ್ಕಾಡ್ ನಿವಾಸಿಯಾಗಿದ್ದು, ಜೋಶುವಾ ಅದೇ ಜಿಲ್ಲೆಯ ಕಲ್ಲಿಡೈಕುರುಚ್ಚಿ ನಿವಾಸಿಯಾಗಿದ್ದಾನೆ. ಸ್ಥಳೀಯ ಪೊಲೀಸರ ನೆರವು ಪಡೆದು ಮಂಗಳೂರು ಪೊಲೀಸರು ಬಂಧಿಸಿದ್ದು, ಸ್ಥಳೀಯ ಅಂಬಾಸಮುದ್ರಂ ಜುಡೀಶಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ಈ ವೇಳೆ, ಎರಡು ಕೇಜಿ ಚಿನ್ನಾಭರಣ ಮತ್ತು ಮೂರು ಲಕ್ಷ ನಗದು, ಒಂದು ರಿವಾಲ್ವರ್, ಮೂರು ಬುಲೆಟ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾಗಿ ಕೋರ್ಟಿಗೆ ಮಾಹಿತಿ ನೀಡಿದ್ದಾಗಿ ದಿ ಹಿಂದು ಪತ್ರಿಕೆ ತಿರುನಲ್ವೇಲಿಯಿಂದ ವರದಿ ಮಾಡಿದೆ.




ಮಂಗಳವಾರ ಸ್ಥಳೀಯ ಕೋರ್ಟಿಗೆ ಹಾಜರುಪಡಿಸಿ ಮುರುಗನ್ ಮತ್ತು ಜೋಶುವಾನನ್ನು ಮಂಗಳೂರು ಪೊಲೀಸರು ಬಾಡಿ ವಾರೆಂಟ್ ಪಡೆದು ಜೊತೆಗೆ ಕರೆತಂದಿದ್ದಾರೆ. ಇದಕ್ಕೂ ಮೊದಲೇ ಇನ್ನೊಬ್ಬ ಆರೋಪಿ ಕಣ್ಣನ್ ಮಣಿ ಮುಂಬೈನಲ್ಲಿ ಸೆರೆಸಿಕ್ಕಿದ್ದು, ಆತನನ್ನು ಮಂಗಳೂರಿಗೆ ಕರೆತಂದು ಎಸ್ಕೇಪ್ ಆಗಲು ಯತ್ನಿಸಿದ್ದಕ್ಕೆ ಗುಂಡಿನ ರುಚಿ ತೋರಿಸಿದ್ದಾರೆ. ಫೈರಿಂಗ್ ಆದ ಸ್ಥಳಕ್ಕೆ ಬಂದಿದ್ದ ಕೋಟೆಕಾರು ಸಹಕಾರಿ ಬ್ಯಾಂಕಿನ ಅಧ್ಯಕ್ಷ ಕೃಷ್ಣ ಶೆಟ್ಟಿ, ಬ್ಯಾಂಕಿನಲ್ಲಿ ಕಳವಾದ ಚಿನ್ನಾಭರಣದ ಬಗ್ಗೆ ಲೆಕ್ಕ ಆಗಿದ್ದು ಒಟ್ಟು 15 ಕೋಟಿಗೂ ಹೆಚ್ಚು ಮೊತ್ತದ ಚಿನ್ನ ದರೋಡೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೆ, ಎಫ್ಐಆರ್ ನಲ್ಲಿ ಅಂದಾಜು ಲೆಕ್ಕ ಕೊಡಲಾಗಿತ್ತು. ಅದನ್ನು ಮತ್ತೆ ಸೇರಿಸಲಾಗುವುದು ಎಂದು ಹೇಳಿದ್ದರು.
ಇದೀಗ ತಮಿಳುನಾಡಿನಲ್ಲಿ ವಶಕ್ಕೆ ಪಡೆದ ಇಬ್ಬರನ್ನು ಕೋರ್ಟಿಗೆ ಹಾಜರುಪಡಿಸಿದ ವೇಳೆ ಎರಡು ಕೇಜಿ ಚಿನ್ನಾಭರಣವೆಂದು ತೋರಿಸಲಾಗಿದೆ. ಮುಂಬೈನಲ್ಲಿ ಬಂಧಿಸಲ್ಪಟ್ಟ ಆರೋಪಿಯ ಬಳಿ ಎಷ್ಟು ಸಿಕ್ಕಿದೆಯೆಂದು ಪೊಲೀಸರು ಮಾಹಿತಿ ನೀಡಿಲ್ಲ. ಪ್ರಕರಣದಲ್ಲಿ ಇನ್ನೂ ಆರು ಮಂದಿ ಪರಾರಿಯಾಗಿದ್ದು, ಅವರು ತಮ್ಮೊಂದಿಗೆ ಚಿನ್ನಾಭರಣ ಇಟ್ಟುಕೊಂಡು ಹೋಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಮೊನ್ನೆ ಮಂಗಳೂರಿನಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಗೋಣಿ ಚೀಲದಲ್ಲಿ ಒಯ್ದಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದರು.
Kotekar bank robbery case, police seize 2 kilos of gold and cash worth 3 lakhs from accused murgan at Tirunelveli. The police also seized a revolver with three bullets from them. After producing them before Ambasamudram Judicial Magistrate Achuthan on Tuesday, the police took the duo to Mangalore.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm