ಬ್ರೇಕಿಂಗ್ ನ್ಯೂಸ್
23-01-25 02:33 pm Mangalore Correspondent ಕರಾವಳಿ
ಮಂಗಳೂರು, ಜ.23: ನಗರದ ಕೆಎಸ್ಸಾರ್ಟಿಸಿ ಬಳಿಯ ಮಸಾಜ್ ಸೆಂಟರ್ ಒಂದಕ್ಕೆ ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದು, ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವುದಾಗಿ ಆರೋಪಿಸಿದ್ದಾರೆ. ಬಿಜೈ ಕೆಎಸ್ಸಾರ್ಟಿಸಿ ಬಳಿಯಿರುವ ಕಲರ್ಸ್ ಹೆಸರಿನ ಮಸಾಜ್ ಸೆಂಟರಿಗೆ ಇಂದು(ಜ.23) ಮಧ್ಯಾಹ್ನ ಹೊತ್ತಿಗೆ ಕೆಲವಾರು ಕಾರ್ಯಕರ್ತರು ಸೇರಿ ದಾಳಿ ನಡೆಸಿದ್ದಾರೆ. ಶ್ರೀರಾಮ ಸೇನೆ ಸಂಘಟನೆಯ ಪ್ರಸಾದ್ ಅತ್ತಾವರ ನೇತೃತ್ವದ ಹುಡುಗರು ದಾಳಿ ನಡೆಸಿದ್ದಾಗಿ ತಿಳಿದುಬಂದಿದೆ.
ಮಸಾಜ್ ಪಾರ್ಲರ್ ಒಳಗಿನ ಪೀಠೋಪಕರಣ, ಕಂಪ್ಯೂಟರ್ ಸೆಟ್, ಟೇಬಲ್ ಗಳನ್ನು ಪುಡಿಗಟ್ಟಿದ್ದು, ಅಲ್ಲಿದ್ದ ಹುಡುಗಿಯರಿಗೆ ನೀವು ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದೀರಾ ಎಂದು ಆವಾಜ್ ಹಾಕಿದ್ದಾರೆ. ಹುಡುಗಿಯರು ಕೈಮುಗಿದು ಹಲ್ಲೆ ಮಾಡಬೇಡಿ ಎಂದು ಬೇಡಿಕೊಳ್ಳುವ ವಿಡಿಯೋ ಇದೆ. ಕಾರ್ಯಕರ್ತರೇ ಜೊತೆಗೆ ಕ್ಯಾಮರಾಮನ್ ಒಬ್ಬನನ್ನು ಕರೆದೊಯ್ದು ದಾಳಿ ನಡೆಸಿರುವಂತೆ ತೋರುತ್ತಿದೆ. ಇದರ ವಿಡಿಯೋವನ್ನು ಕಾರ್ಯಕರ್ತರೇ ಬಿಡುಗಡೆ ಮಾಡಿದ್ದಾರೆ.
\
ಮಾಹಿತಿ ಪ್ರಕಾರ, ಈ ಮಸಾಜ್ ಪಾರ್ಲರನ್ನು ಒಂದು ವರ್ಷದಿಂದ ನಡೆಸುತ್ತಿದ್ದು, ಸುಧೀರ್ ಎಂಬವರಿಗೆ ಸೇರಿದ್ದಾಗಿದೆ. ಮಂಗಳೂರು ನಗರದಲ್ಲಿ ಈ ರೀತಿಯ 16 ಮಸಾಜ್ ಸೆಂಟರ್ ಗಳಿದ್ದು, ಕೆಲವು ಪರವಾನಗಿ ಹೊಂದಿಲ್ಲದೆಯೂ ನಡೆಯುತ್ತಿದೆ ಎಂಬ ಆರೋಪಗಳಿವೆ. ಇತ್ತೀಚೆಗೆ ಮಂಗಳೂರಿನ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಇದೇ ರೀತಿ ಕೇಂದ್ರವೊಂದಕ್ಕೆ ದಾಳಿ ನಡೆಸಿದ್ದು ವಿಡಿಯೋ ವೈರಲ್ ಆಗಿತ್ತು. ಆದರೆ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ. ಅಕ್ರಮ ಮಸಾಜ್ ಪಾರ್ಲರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದು ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದರೂ, ಕ್ರಮ ಜರುಗಿಸಿಲ್ಲ. ಇದೀಗ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದು, ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.
Mangalore Unisex saloon at Bejai vandalised by Prasad attavar ram sena members over illegal activities. The activist have vandalised the entire shop alleging of illegal activities in the name of spa. The video of this has gone viral on social media.
05-08-25 12:44 pm
HK News Desk
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm