ಬ್ರೇಕಿಂಗ್ ನ್ಯೂಸ್
23-01-25 05:43 pm Mangalore Correspondent ಕರಾವಳಿ
ಮಂಗಳೂರು, ಜ.23: ಮಸಾಜ್ ಪಾರ್ಲರ್ ಮೇಲೆ ರಾಮ ಸೇನೆಯ ಕಾರ್ಯಕರ್ತರು ದಾಳಿ ನಡೆಸಿದ್ದು ನೈತಿಕ ಪೊಲೀಸ್ ಗಿರಿ ಎನ್ನುವಂತೆ ತಿರುವು ಪಡೆದಿದೆ. ಯುವಕರು ಕಾನೂನು ಕೈಗೆತ್ತಿಕೊಂಡಿದ್ದಾರೆಂದು ಮಸಾಜ್ ಪಾರ್ಲರ್ ಮಾಲೀಕನ ದೂರಿನಂತೆ ಪೊಲೀಸರು ಕೇಸು ದಾಖಲಿಸಿದ್ದು, ದಾಳಿ ಹೊಣೆ ಹೊತ್ತುಕೊಂಡ ರಾಮ ಸೇನಾ ಮುಖಂಡ ಪ್ರಸಾದ್ ಅತ್ತಾವರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ದಾಳಿಯಾದ ಬೆನ್ನಲ್ಲೇ ಮಾಧ್ಯಮದವರು ಪ್ರಸಾದ್ ಅತ್ತಾವರ್ ಪ್ರತಿಕ್ರಿಯೆ ಪಡೆಯಲು ಕುಡುಪು ಬಳಿಯಿರುವ ಅವರ ನಿವಾಸಕ್ಕೆ ತೆರಳಿದ್ದರು. ಅಷ್ಟರಲ್ಲಿಯೇ ಪೊಲೀಸರು ಕೂಡ ಅಲ್ಲಿಗೆ ತಲುಪಿದ್ದರು. ಮಾಧ್ಯಮಕ್ಕೆ ಹೇಳಿಕೆ ನೀಡುತ್ತಿದ್ದಾಗಲೇ ಪೊಲೀಸರು ಪ್ರಸಾದ್ ಅವರನ್ನು ಮನೆಯಿಂದ ಹೊರಕ್ಕೆಳೆದುಕೊಂಡು ಬಂದಿದ್ದಾರೆ. ಆನಂತರ, ಪೊಲೀಸ್ ಕಾರಿನಲ್ಲಿ ಕೂರಿಸಿದ್ದಾರೆ.




ಇದರ ನಡುವೆಯೇ ಮಾಧ್ಯಮಕ್ಕೆ ಹೇಳಿಕೆ ನೀಡಿದ ಪ್ರಸಾದ್ ಅತ್ತಾವರ್, ನಮ್ಮ ಕಾರ್ಯಕರ್ತರೇ ದಾಳಿ ನಡೆಸಿರೋದು. ಸುಮ್ಮನೆ ದಾಳಿ ನಡೆಸಿದ್ದಲ್ಲ. ಅಲ್ಲಿ 15-16 ವರ್ಷದ ಕಾಲೇಜು ಹುಡುಗಿಯರನ್ನು ತಂದಿಟ್ಟು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದರು. ಇದರ ಬಗ್ಗೆ ಪೊಲೀಸರು ಕ್ರಮ ಜರುಗಿಸಿರಲಿಲ್ಲ ಎಂದು ಹೇಳಿದ್ದಾರೆ. ಪೊಲೀಸರು ಅವರನ್ನು ಬಂಧನ ಮಾಡಿದ್ದು, ಇತರೇ ಕಾರ್ಯಕರ್ತರ ಬಂಧನಕ್ಕೆ ಬಲೆ ಬೀಸಿದ್ದಾರೆ. ಬಿಜೈ ಕೆಎಸ್ಸಾರ್ಟಿಸಿ ಬಳಿಯ ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ 8-10 ಕಾರ್ಯಕರ್ತರು ಗುರುವಾರ ಮಧ್ಯಾಹ್ನ ದಾಳಿ ನಡೆಸಿ ಪೀಠೋಪಕರಣ ಧ್ವಂಸ ಮಾಡಿದ್ದರು.
Attack on saloon: Ram Sena Leader Prasad Attavar was arrested by CCB police in Mangalore while he was talking to media persons at his residence. Colours unisex saloon was vandalised by Ram Sena activists alleging illegal activity.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm