ಬ್ರೇಕಿಂಗ್ ನ್ಯೂಸ್
25-01-25 05:05 pm Mangalore Correspondent ಕರಾವಳಿ
ಮಂಗಳೂರು, ಜ.25: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳದ ಕಲಾವಿದ ಆನಂದ ಕಟೀಲು(47) 25 ದಿನಗಳ ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಜನವರಿ 1ರಂದು ಕಿನ್ನಿಗೋಳಿಯಲ್ಲಿ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದಾಗ ಪಲ್ಟಿಯಾಗಿ ಚಾಲನೆ ಮಾಡುತ್ತಿದ್ದ ಆನಂದ ತೀವ್ರ ಗಾಯಗೊಂಡಿದ್ದರು. ಆನಂತರ, ಕುತ್ತಿಗೆಯ ಭಾಗಕ್ಕೆ ಪೆಟ್ಟು ಬಿದ್ದ ಕಾರಣ ಮಂಗಳೂರಿನ ಸಿಟಿ ಹಾಸ್ಪಿಟಲ್ ಗೆ ದಾಖಲು ಮಾಡಲಾಗಿತ್ತು. ಆದರೆ ಶಸ್ತ್ರ ಚಿಕಿತ್ಸೆ ನಡೆಸಲು ಎಂಟು ಲಕ್ಷ ಖರ್ಚು ಆಗಬಹುದೆಂದು ವೈದ್ಯರು ಹೇಳಿದ್ದರಿಂದ ಅವರನ್ನು ಎರಡು ದಿನಗಳ ಬಳಿಕ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಎದ್ದು ಕುಳಿತುಕೊಳ್ಳುವುದಕ್ಕೆ ಆಗದೇ ಬಳಲುತ್ತಿದ್ದ ಅವರಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಲಭಿಸಿರಲಿಲ್ಲ. ಇದರಿಂದಾಗಿ 25 ದಿನಗಳ ಕಾಲ ನರಳಿದ ಅವರು ಜ.25ರ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಆಸ್ಪತ್ರೆ ಖರ್ಚು ನೋಡಿಕೊಳ್ಳುತ್ತೇವೆಂದು ಮೇಳದ ವ್ಯವಸ್ಥಾಪಕರು ಹೇಳಿದ್ದರೂ, ಹೆಚ್ಚಿನ ನೆರವು ನೀಡಿಲ್ಲ. ಈವರೆಗೆ 30 ಸಾವಿರ ಮಾತ್ರ ನೀಡಿದ್ದಾರೆ. 35 ವರ್ಷಗಳಿಂದ ಕಟೀಲು ಮೇಳದ ಕಲಾವಿದರಾಗಿದ್ದು, ಕೆಲವೊಮ್ಮೆ ಬಿಡುವು ಸಿಕ್ಕಾಗ ಆಟೋ ರಿಕ್ಷಾ ಚಲಾಯಿಸುತ್ತಿದ್ದರು ಎಂದು ಅವರ ಪತ್ನಿ ತಿಳಿಸಿದ್ದಾರೆ.
ಆನಂದ ಅವರು ಮೂಲತಃ ಕಾಸರಗೋಡು ಜಿಲ್ಲೆಯ ಜೋಡುಕಲ್ಲು ನಿವಾಸಿಯಾಗಿದ್ದು, ಮದುವೆಯಾದ ಬಳಿಕ ಕಟೀಲು ದೇವಸ್ಥಾನದ ಬಳಿಯಲ್ಲೇ ಮನೆ ಮಾಡಿ ಪತ್ನಿಯೊಂದಿಗೆ ನೆಲೆಸಿದ್ದರು. ಮದುವೆಯಾಗಿ 12 ವರ್ಷಗಳಾದರೂ ದಂಪತಿಗೆ ಮಕ್ಕಳು ಇರಲಿಲ್ಲ. ಈಗ ಅಪಘಾತಕ್ಕೀಡಾಗಿ ಮೃತಪಟ್ಟಿದ್ದು, ಮೇಳದ ಕಡೆಯವರ ನಿರ್ಲಕ್ಷ್ಯದಿಂದಲೇ ಸಾವಾಗಿದೆ. 25 ದಿನಗಳಲ್ಲಿ ಆಸ್ಪತ್ರೆಯಲ್ಲಿದ್ದರೂ, ಇಬ್ಬರು ಕಲಾವಿದರು ಮಾತ್ರ ಬಂದು ನೋಡಿದ್ದರು. ಇತರ ಯಾರು ಕೂಡ ಸಹಾಯ ಮಾಡಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ.
Mangalore 47 year old Yakshagana artist dies of road accident. The deceased has been identified as Anand Kateel.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm