ಬ್ರೇಕಿಂಗ್ ನ್ಯೂಸ್
25-01-25 05:05 pm Mangalore Correspondent ಕರಾವಳಿ
ಮಂಗಳೂರು, ಜ.25: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳದ ಕಲಾವಿದ ಆನಂದ ಕಟೀಲು(47) 25 ದಿನಗಳ ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಜನವರಿ 1ರಂದು ಕಿನ್ನಿಗೋಳಿಯಲ್ಲಿ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದಾಗ ಪಲ್ಟಿಯಾಗಿ ಚಾಲನೆ ಮಾಡುತ್ತಿದ್ದ ಆನಂದ ತೀವ್ರ ಗಾಯಗೊಂಡಿದ್ದರು. ಆನಂತರ, ಕುತ್ತಿಗೆಯ ಭಾಗಕ್ಕೆ ಪೆಟ್ಟು ಬಿದ್ದ ಕಾರಣ ಮಂಗಳೂರಿನ ಸಿಟಿ ಹಾಸ್ಪಿಟಲ್ ಗೆ ದಾಖಲು ಮಾಡಲಾಗಿತ್ತು. ಆದರೆ ಶಸ್ತ್ರ ಚಿಕಿತ್ಸೆ ನಡೆಸಲು ಎಂಟು ಲಕ್ಷ ಖರ್ಚು ಆಗಬಹುದೆಂದು ವೈದ್ಯರು ಹೇಳಿದ್ದರಿಂದ ಅವರನ್ನು ಎರಡು ದಿನಗಳ ಬಳಿಕ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಎದ್ದು ಕುಳಿತುಕೊಳ್ಳುವುದಕ್ಕೆ ಆಗದೇ ಬಳಲುತ್ತಿದ್ದ ಅವರಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಲಭಿಸಿರಲಿಲ್ಲ. ಇದರಿಂದಾಗಿ 25 ದಿನಗಳ ಕಾಲ ನರಳಿದ ಅವರು ಜ.25ರ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಆಸ್ಪತ್ರೆ ಖರ್ಚು ನೋಡಿಕೊಳ್ಳುತ್ತೇವೆಂದು ಮೇಳದ ವ್ಯವಸ್ಥಾಪಕರು ಹೇಳಿದ್ದರೂ, ಹೆಚ್ಚಿನ ನೆರವು ನೀಡಿಲ್ಲ. ಈವರೆಗೆ 30 ಸಾವಿರ ಮಾತ್ರ ನೀಡಿದ್ದಾರೆ. 35 ವರ್ಷಗಳಿಂದ ಕಟೀಲು ಮೇಳದ ಕಲಾವಿದರಾಗಿದ್ದು, ಕೆಲವೊಮ್ಮೆ ಬಿಡುವು ಸಿಕ್ಕಾಗ ಆಟೋ ರಿಕ್ಷಾ ಚಲಾಯಿಸುತ್ತಿದ್ದರು ಎಂದು ಅವರ ಪತ್ನಿ ತಿಳಿಸಿದ್ದಾರೆ.
ಆನಂದ ಅವರು ಮೂಲತಃ ಕಾಸರಗೋಡು ಜಿಲ್ಲೆಯ ಜೋಡುಕಲ್ಲು ನಿವಾಸಿಯಾಗಿದ್ದು, ಮದುವೆಯಾದ ಬಳಿಕ ಕಟೀಲು ದೇವಸ್ಥಾನದ ಬಳಿಯಲ್ಲೇ ಮನೆ ಮಾಡಿ ಪತ್ನಿಯೊಂದಿಗೆ ನೆಲೆಸಿದ್ದರು. ಮದುವೆಯಾಗಿ 12 ವರ್ಷಗಳಾದರೂ ದಂಪತಿಗೆ ಮಕ್ಕಳು ಇರಲಿಲ್ಲ. ಈಗ ಅಪಘಾತಕ್ಕೀಡಾಗಿ ಮೃತಪಟ್ಟಿದ್ದು, ಮೇಳದ ಕಡೆಯವರ ನಿರ್ಲಕ್ಷ್ಯದಿಂದಲೇ ಸಾವಾಗಿದೆ. 25 ದಿನಗಳಲ್ಲಿ ಆಸ್ಪತ್ರೆಯಲ್ಲಿದ್ದರೂ, ಇಬ್ಬರು ಕಲಾವಿದರು ಮಾತ್ರ ಬಂದು ನೋಡಿದ್ದರು. ಇತರ ಯಾರು ಕೂಡ ಸಹಾಯ ಮಾಡಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ.
Mangalore 47 year old Yakshagana artist dies of road accident. The deceased has been identified as Anand Kateel.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm