ಬ್ರೇಕಿಂಗ್ ನ್ಯೂಸ್
27-01-25 08:36 pm Mangalore Correspondent ಕರಾವಳಿ
ಮಂಗಳೂರು, ಜ.27: ಮಂಗಳೂರು ನಗರ ವ್ಯಾಪ್ತಿಯ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.
ಪಾಂಡೇಶ್ವರ ಠಾಣೆ ವ್ಯಾಪ್ತಿಯ ಅತ್ತಾವರದ ಮಣಿಪಾಲ್ ಶಾಲೆ, ಜಪ್ಪಿನಮೊಗರು ಪ್ರೆಸಿಡೆನ್ಸಿ ಶಾಲೆ ಮತ್ತು ಪಿಯು ಕಾಲೇಜು ಹಾಗೂ ನೀರುಮಾರ್ಗ ಬಳಿಯ ಕೇಂಬ್ರಿಡ್ಜ್ ಶಾಲೆಗಳಿಗೆ ಆವರಣದಲ್ಲಿ ಐಇಡಿ ಬಾಂಬ್ ಗಳಿವೆ ಎಂದು ಬೆದರಿಕೆ ಇಮೇಲ್ಗಳು ಬಂದಿದ್ದವು. ಬಾಂಬ್ ಬೆದರಿಕೆ ಇಮೇಲ್ ತಿಳಿಯುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ತೆರಳಿ ತಪಾಸಣೆ ನಡೆಸಿದ್ದಾರೆ. ಅಲ್ಲದೆ, ಬಾಂಬ್ ನಿಷ್ಕ್ರಿಯ ದಳಗಳು ಸಂಪೂರ್ಣ ತಪಾಸಣೆ ನಡೆಸಿವೆ.
ಪರಿಶೀಲನೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಇದಲ್ಲದೆ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸುರಕ್ಷತೆಗಾಗಿ ಶಾಲೆಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಲನವಲನ ಕಂಡರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲು ಸೂಚಿಸಲಾಗಿದೆ. ಬೆದರಿಕೆ ಇಮೇಲ್ಗಳಿಗೆ ಸಂಬಂಧಿಸಿ ಪ್ರತ್ಯೇಕ ಪ್ರಕರಣ ದಾಖಲಿಸಿದ್ದು ವಿವರವಾದ ತನಿಖೆ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಉಡುಪಿ ಶಾಲೆಯಲ್ಲೂ ಬೆದರಿಕೆ ಇಮೇಲ್
ಉಡುಪಿ ನಗರದ ಶಾರದಾ ರೆಸಿಡೆನ್ಸಿ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಶಾಲೆಯ ಸಿಬ್ಬಂದಿ ಭಯಕ್ಕೀಡಾಗಿ ಮಕ್ಕಳನ್ನು ಹೊರಕ್ಕೆ ಕಳಿಸಿದ್ದಾರೆ. ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಮೈದಾನದ ಸಮೀಪದ ಖಾಸಗಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದೆ. ಶಾಲೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ, ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿ ಮೈದಾನದಲ್ಲಿ ಇರಿಸಿದ್ದಾರೆ. ಪೊಲೀಸರು ತಪಾಸಣೆ ಬಳಿಕ ಹುಸಿ ಬೆದರಿಕೆ ಎಂದು ಖಚಿತ ಪಡಿಸಿದ್ದಾರೆ.
Mangalore Udupi schools receive hoax bomb threat, police deployed for additional security. According to sources, the email claiming presence of explosive material was received by Manipal School in Attavar under the Pandeshwar Police Station limits, Presidency and Cambridge School in Neermarga under the Mangaluru Rural Police Station limits.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm