ಬ್ರೇಕಿಂಗ್ ನ್ಯೂಸ್
27-01-25 10:57 pm Mangalore Correspondent ಕರಾವಳಿ
ಮಂಗಳೂರು, ಜ.27: ಪ್ರಕರಣ ಒಂದರಲ್ಲಿ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದ ಸ್ಕೂಟರ್ ಅನ್ನು ಬಿಡುಗಡೆ ಮಾಡಲು ಕೋರ್ಟ್ ಆದೇಶ ಆಗಿದ್ದರೂ ಬಿಡುಗಡೆ ಮಾಡಬೇಕಿದ್ದರೆ 5 ಸಾವಿರ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹಮ್ಮದ್ ಶರೀಫ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಬಿಟ್ಟು ಕೊಡಬೇಕಿದ್ದರೆ 5 ಸಾವಿರ ರೂ. ಕೊಡಬೇಕೆಂದು ಮಹಮ್ಮದ್ ಶರೀಫ್ ಹೇಳಿದ್ದು, ಅವರು ಹಣ ಕಡಿಮೆ ಮಾಡುವಂತೆ ಕೇಳಿಕೊಂಡಾಗ ಠಾಣೆಯ ಬರಹಗಾರ್ತಿ ನಾಗರತ್ನ ಎಚ್.ಸಿ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಅದರಂತೆ, ನಾಗರತ್ನ ಬಳಿ ಹೋದಾಗ ಬೈದು 3 ಸಾವಿರ ಲಂಚ ನೀಡುವಂತೆ ಹೇಳಿದ್ದಾರೆ. ಕಾನೂನು ಪ್ರಕಾರ ಮಾಡಬೇಕಿದ್ದ ಸರ್ಕಾರಿ ಕೆಲಸಕ್ಕೆ ಲಂಚ ನೀಡಲು ಒಪ್ಪದ ಫಿರ್ಯಾದಿ ವ್ಯಕ್ತಿ ನೇರವಾಗಿ ಲೋಕಾಯುಕ್ತ ಗಮನಕ್ಕೆ ತಂದಿದ್ದಾರೆ.
ಲೋಕಾಯುಕ್ತ ಠಾಣೆಯಲ್ಲಿ ಮಹಮ್ಮದ್ ಶರೀಫ್ ಹಾಗೂ ನಾಗರತ್ನ ವಿರುದ್ಧ ಪ್ರಕರಣ ದಾಖಲಿಸಿದ ಅಧಿಕಾರಿಗಳು ಜ.27ರಂದು ಟ್ರಾಪ್ ಮಾಡಿದ್ದು, ಮಹಮ್ಮದ್ ಶರೀಫ್ ಹಾಗೂ ಸಿಬಂದಿ ಪ್ರವೀಣ್ ನಾಯ್ಕ ಮೂರು ಸಾವಿರ ರೂ. ಲಂಚದ ಹಣ ಸ್ವೀಕರಿಸುವಾಗಲೇ ಬಲೆಗೆ ಬಿದ್ದಿದ್ದಾರೆ. ಆರೋಪಿತ ಅಧಿಕಾರಿ ಮತ್ತು ಸಿಬಂದಿಯನ್ನು ಲೋಕಾಯುಕ್ತ ತಂಡ ವಶಕ್ಕೆ ಪಡೆದು ತನಿಖೆ ಕೈಗೊಂಡಿದೆ. ಲೋಕಾಯುಕ್ತ ಪ್ರಭಾರ ಎಸ್ಪಿ ಡಾ.ನಂದಿನಿ ಬಿ.ಎನ್, ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ, ಚಂದ್ರಶೇಖರ್ ಕೆ.ಎನ್, ಉಡುಪಿ ಪೊಲೀಸ್ ಠಾಣೆಯ ನಿರೀಕ್ಷಕ ಮಂಜುನಾಥ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.
Mangalore North police station traffic inspector Muhammad Sharief caught by lokayukta for taking bribe for releasing a two wheeler even after court order.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm