ಬ್ರೇಕಿಂಗ್ ನ್ಯೂಸ್
28-01-25 04:40 pm Mangalore Correspondent ಕರಾವಳಿ
ಮಂಗಳೂರು, ಜ.28: ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಇಂಡಿಗೋ ವಿಮಾನದಲ್ಲಿ ತೆರಳುತ್ತಿದ್ದಾಗ ಮಹಿಳೆಯ ಜೊತೆಗಿದ್ದ ಮಗುವಿನ ಚಿನ್ನದ ಸರ ಬಿದ್ದು ಹೋಗಿದ್ದು, ಅದನ್ನು ಸಿಐಎಸ್ಎಫ್ ಸಿಬಂದಿ ಸಕಾಲಿಕ ಪ್ರಯತ್ನದಿಂದ ಮತ್ತೆ ವಾಪಸ್ ಮಾಡಿಸಿದ ಘಟನೆ ನಡೆದಿದೆ.
ಜ.26ರಂದು ಬೆಳಗ್ಗೆ 8.30ಕ್ಕೆ ರಚನಾ ಮಾರ್ಲ ಎಂಬ ಮಹಿಳೆ ತನ್ನ ಮಗುವಿನ ಜೊತೆಗೆ ಏರ್ಪೋರ್ಟ್ ನಲ್ಲಿ ಚೆಕ್ಕಿಂಗ್ ಆಗಿ ವಿಮಾನದ ಬಳಿ ತಲುಪುತ್ತಿದ್ದಂತೆ ಮಗುವಿನ ಸರ ಇಲ್ಲದಿರುವುದು ಗಮನಕ್ಕೆ ಬಂದಿತ್ತು. ಆನಂತರ, ಹೊರಗೆ ಬಂದು ಸರ ಬಿದ್ದು ಹೋಗಿದೆಯೇ ಎಂದು ಪರಿಶೀಲನೆ ಮಾಡುವುದಕ್ಕೆ ಸಮಯ ಇರಲಿಲ್ಲ. ಹೀಗಾಗಿ ಏರ್ಪೋರ್ಟಿನ ಸಿಐಎಸ್ಎಫ್ ಭದ್ರತಾ ಸಿಬಂದಿಗೆ ಸರ ಬಿದ್ದುಹೋಗಿರುವ ಬಗ್ಗೆ ದೂರು ಕೊಟ್ಟು ಬೆಂಗಳೂರಿಗೆ ತೆರಳಿದ್ದರು.
ಆನಂತರ, ಸಿಐಎಸ್ಎಫ್ ಭದ್ರತಾ ಸಿಬಂದಿ ತಪಾಸಣೆ ನಡೆಸಿದಾಗ ಏರ್ಪೋರ್ಟ್ ಮೇಲಂತಸ್ತಿನಲ್ಲಿ ಕಾರಿನಿಂದ ಇಳಿದು ಒಳಗೆ ಬರುವಾಗಲೇ ಮಗುವಿನ ಸರ ಬಿದ್ದು ಹೋಗಿರುವುದು ಪತ್ತೆಯಾಗಿತ್ತು. ಅಲ್ಲದೆ, ಆ ಸರವನ್ನು ಇನ್ನೊಬ್ಬ ವಾಹನದ ಚಾಲಕ ಹೆಕ್ಕಿ ತನ್ನ ಜೊತೆಗೆ ತೆಗೆದುಕೊಂಡು ಹೋಗಿದ್ದು ದೃಶ್ಯದಲ್ಲಿತ್ತು. ಹೀಗಾಗಿ ಆ ವಾಹನದ ನಂಬರ್ ಮೂಲಕ ಚಾಲಕನ ಪತ್ತೆ ಮಾಡಿ ಪೊಲೀಸರು ಕರೆ ಮಾಡಿದ್ದರು. ಈ ವೇಳೆ, ಸರ ಬಿದ್ದು ಸಿಕ್ಕಿರುವುದನ್ನು ಒಪ್ಪಿಕೊಂಡ ಚಾಲಕ, ಅದನ್ನು ವಾರೀಸುದಾರರಿಗೆ ನೀಡಲು ರೆಡಿ ಇದ್ದೇನೆ ಎಂದೂ ಹೇಳಿದ್ದ.
ಸಿಐಎಸ್ಎಫ್ ಕಡೆಯಿಂದ ಮರಳಿ ಆ ಮಹಿಳೆಗೆ ಫೋನ್ ಕರೆ ಮಾಡಿ ವಿಷಯ ತಿಳಿಸಿದ್ದರು. ತನಗೆ ಸರ ಸಿಕ್ಕಿದರಾಯ್ತು, ಕಂಪ್ಲೇಂಟ್ ಕೊಡುವ ಆಸಕ್ತಿ ಇಲ್ಲ ಎಂದರು. ಅದರಂತೆ, ಸಿಐಎಸ್ಎಫ್ ಅಧಿಕಾರಿಗಳು ಚಾಲಕನನ್ನು ಕರೆಸಿ ವಿಮಾನ ನಿಲ್ದಾಣದ ಕಚೇರಿಯಲ್ಲಿ ತಪ್ಪೊಪ್ಪಿಗೆ ಪತ್ರ ಬರೆಸಿ ಚಿನ್ನದ ಸರವನ್ನು ಪಡೆದು ಬಿಟ್ಟು ಕಳಿಸಿದ್ದಾರೆ. ಮಹಿಳೆಯ ಕುಟುಂಬಸ್ಥರು ಬಳಿಕ ಏರ್ಪೋರ್ಟಿಗೆ ಬಂದು ಚಿನ್ನದ ಸರವನ್ನು ಪಡೆದುಕೊಂಡು ಹೋಗಿದ್ದಾರೆ. ಈ ಬಗ್ಗೆ ಸ್ವತಃ ಮಹಿಳೆ ರಚನಾ ಮಾರ್ಲ ವಿಡಿಯೋ ಮಾಡಿದ್ದು, ಸಿಐಎಸ್ಎಫ್ ಭದ್ರತಾ ಸಿಬಂದಿ ಒಂದೇ ದಿನದಲ್ಲಿ ಸಿಸಿಟಿವಿ ನೋಡಿ ಸರವನ್ನು ಪತ್ತೆ ಮಾಡಿದ್ದಲ್ಲದೆ, ಕುಟುಂಬಸ್ಥರನ್ನು ಕರೆಸಿ ಅವರ ಕೈಗೊಪ್ಪಿಸಿದ್ದಾರೆ. ಆ ಸರದ ಜೊತೆಗೆ ಭಾವನಾತ್ಮಕ ನಂಟಿದೆ. ಇದಕ್ಕಾಗಿ ಪತ್ತೆ ಮಾಡಿ ಸರ ಮರಳಿಸಿದ ಭದ್ರತಾ ಸಿಬಂದಿಗೆ ತುಂಬ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.
Mangalore CISF restore lost gold chain lost in the airport. Women who lost the chain also shared video of testimony about the CISF officala being prompt in their service.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm