ಬ್ರೇಕಿಂಗ್ ನ್ಯೂಸ್
28-01-25 04:40 pm Mangalore Correspondent ಕರಾವಳಿ
ಮಂಗಳೂರು, ಜ.28: ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಇಂಡಿಗೋ ವಿಮಾನದಲ್ಲಿ ತೆರಳುತ್ತಿದ್ದಾಗ ಮಹಿಳೆಯ ಜೊತೆಗಿದ್ದ ಮಗುವಿನ ಚಿನ್ನದ ಸರ ಬಿದ್ದು ಹೋಗಿದ್ದು, ಅದನ್ನು ಸಿಐಎಸ್ಎಫ್ ಸಿಬಂದಿ ಸಕಾಲಿಕ ಪ್ರಯತ್ನದಿಂದ ಮತ್ತೆ ವಾಪಸ್ ಮಾಡಿಸಿದ ಘಟನೆ ನಡೆದಿದೆ.
ಜ.26ರಂದು ಬೆಳಗ್ಗೆ 8.30ಕ್ಕೆ ರಚನಾ ಮಾರ್ಲ ಎಂಬ ಮಹಿಳೆ ತನ್ನ ಮಗುವಿನ ಜೊತೆಗೆ ಏರ್ಪೋರ್ಟ್ ನಲ್ಲಿ ಚೆಕ್ಕಿಂಗ್ ಆಗಿ ವಿಮಾನದ ಬಳಿ ತಲುಪುತ್ತಿದ್ದಂತೆ ಮಗುವಿನ ಸರ ಇಲ್ಲದಿರುವುದು ಗಮನಕ್ಕೆ ಬಂದಿತ್ತು. ಆನಂತರ, ಹೊರಗೆ ಬಂದು ಸರ ಬಿದ್ದು ಹೋಗಿದೆಯೇ ಎಂದು ಪರಿಶೀಲನೆ ಮಾಡುವುದಕ್ಕೆ ಸಮಯ ಇರಲಿಲ್ಲ. ಹೀಗಾಗಿ ಏರ್ಪೋರ್ಟಿನ ಸಿಐಎಸ್ಎಫ್ ಭದ್ರತಾ ಸಿಬಂದಿಗೆ ಸರ ಬಿದ್ದುಹೋಗಿರುವ ಬಗ್ಗೆ ದೂರು ಕೊಟ್ಟು ಬೆಂಗಳೂರಿಗೆ ತೆರಳಿದ್ದರು.
ಆನಂತರ, ಸಿಐಎಸ್ಎಫ್ ಭದ್ರತಾ ಸಿಬಂದಿ ತಪಾಸಣೆ ನಡೆಸಿದಾಗ ಏರ್ಪೋರ್ಟ್ ಮೇಲಂತಸ್ತಿನಲ್ಲಿ ಕಾರಿನಿಂದ ಇಳಿದು ಒಳಗೆ ಬರುವಾಗಲೇ ಮಗುವಿನ ಸರ ಬಿದ್ದು ಹೋಗಿರುವುದು ಪತ್ತೆಯಾಗಿತ್ತು. ಅಲ್ಲದೆ, ಆ ಸರವನ್ನು ಇನ್ನೊಬ್ಬ ವಾಹನದ ಚಾಲಕ ಹೆಕ್ಕಿ ತನ್ನ ಜೊತೆಗೆ ತೆಗೆದುಕೊಂಡು ಹೋಗಿದ್ದು ದೃಶ್ಯದಲ್ಲಿತ್ತು. ಹೀಗಾಗಿ ಆ ವಾಹನದ ನಂಬರ್ ಮೂಲಕ ಚಾಲಕನ ಪತ್ತೆ ಮಾಡಿ ಪೊಲೀಸರು ಕರೆ ಮಾಡಿದ್ದರು. ಈ ವೇಳೆ, ಸರ ಬಿದ್ದು ಸಿಕ್ಕಿರುವುದನ್ನು ಒಪ್ಪಿಕೊಂಡ ಚಾಲಕ, ಅದನ್ನು ವಾರೀಸುದಾರರಿಗೆ ನೀಡಲು ರೆಡಿ ಇದ್ದೇನೆ ಎಂದೂ ಹೇಳಿದ್ದ.
ಸಿಐಎಸ್ಎಫ್ ಕಡೆಯಿಂದ ಮರಳಿ ಆ ಮಹಿಳೆಗೆ ಫೋನ್ ಕರೆ ಮಾಡಿ ವಿಷಯ ತಿಳಿಸಿದ್ದರು. ತನಗೆ ಸರ ಸಿಕ್ಕಿದರಾಯ್ತು, ಕಂಪ್ಲೇಂಟ್ ಕೊಡುವ ಆಸಕ್ತಿ ಇಲ್ಲ ಎಂದರು. ಅದರಂತೆ, ಸಿಐಎಸ್ಎಫ್ ಅಧಿಕಾರಿಗಳು ಚಾಲಕನನ್ನು ಕರೆಸಿ ವಿಮಾನ ನಿಲ್ದಾಣದ ಕಚೇರಿಯಲ್ಲಿ ತಪ್ಪೊಪ್ಪಿಗೆ ಪತ್ರ ಬರೆಸಿ ಚಿನ್ನದ ಸರವನ್ನು ಪಡೆದು ಬಿಟ್ಟು ಕಳಿಸಿದ್ದಾರೆ. ಮಹಿಳೆಯ ಕುಟುಂಬಸ್ಥರು ಬಳಿಕ ಏರ್ಪೋರ್ಟಿಗೆ ಬಂದು ಚಿನ್ನದ ಸರವನ್ನು ಪಡೆದುಕೊಂಡು ಹೋಗಿದ್ದಾರೆ. ಈ ಬಗ್ಗೆ ಸ್ವತಃ ಮಹಿಳೆ ರಚನಾ ಮಾರ್ಲ ವಿಡಿಯೋ ಮಾಡಿದ್ದು, ಸಿಐಎಸ್ಎಫ್ ಭದ್ರತಾ ಸಿಬಂದಿ ಒಂದೇ ದಿನದಲ್ಲಿ ಸಿಸಿಟಿವಿ ನೋಡಿ ಸರವನ್ನು ಪತ್ತೆ ಮಾಡಿದ್ದಲ್ಲದೆ, ಕುಟುಂಬಸ್ಥರನ್ನು ಕರೆಸಿ ಅವರ ಕೈಗೊಪ್ಪಿಸಿದ್ದಾರೆ. ಆ ಸರದ ಜೊತೆಗೆ ಭಾವನಾತ್ಮಕ ನಂಟಿದೆ. ಇದಕ್ಕಾಗಿ ಪತ್ತೆ ಮಾಡಿ ಸರ ಮರಳಿಸಿದ ಭದ್ರತಾ ಸಿಬಂದಿಗೆ ತುಂಬ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.
Mangalore CISF restore lost gold chain lost in the airport. Women who lost the chain also shared video of testimony about the CISF officala being prompt in their service.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm