ಬ್ರೇಕಿಂಗ್ ನ್ಯೂಸ್
31-01-25 10:49 pm Mangalore Correspondent ಕರಾವಳಿ
ಮೈಸೂರು, ಜ.31: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಸೈಟ್ ವಿಚಾರದಲ್ಲಿ ಹೋರಾಟ ನಡೆಸುತ್ತಿರುವ ಸ್ನೇಹಮಯಿ ಕೃಷ್ಣ ಪರವಾಗಿ ಶಕ್ತಿ ತುಂಬಲು ದುಷ್ಟಶಕ್ತಿ ಪೂಜೆ ನಡೆಸಿದ್ದಾರೆಂದು ಹೇಳಲಾದ ಮಂಗಳೂರಿನ ಪ್ರಸಾದ್ ಅತ್ತಾವರ ಬಗ್ಗೆ ಸ್ವತಃ ಸ್ನೇಹಮಯಿ ಕಿಡಿ ನುಡಿಯಾಡಿದ್ದಾರೆ. ಯಾರೋ ಇಬ್ಬರು ನನ್ನಲ್ಲಿಗೆ ಬಂದು ಸಿಬಿಐ ಕೇಸ್ ಹಿಂಪಡೆಯಲು ಹೇಳಿ ಕೋಟಿ ಕೋಟಿ ಆಮಿಷ ಒಡ್ಡಿದ್ದರು. ನಮ್ಮ ಬಾಸ್ ಮಂಗಳೂರಿನಲ್ಲಿದ್ದಾರೆ ಎಂದಿದ್ದರು. ಅದು ಈಗ ನಿಜವಾಗಿದೆ ಎಂದು ಸ್ನೇಹಮಯಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಇತ್ತೀಚೆಗೆ ಮಸಾಜ್ ಪಾರ್ಲರ್ ದಾಳಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರಾಮಸೇನೆಯ ಮುಖಂಡ ಪ್ರಸಾದ್ ಅತ್ತಾವರ ಎಂಬವರ ಫೋನ್ ಪರಿಶೀಲಿಸಿದಾಗ ವಾಮಾಚಾರದ ಬಗ್ಗೆ ಪತ್ತೆಯಾಗಿತ್ತು. ಸ್ನೇಹಮಯಿ ಮತ್ತು ಗಂಗರಾಜು ಫೋಟೊ ಇಟ್ಟು ರಕ್ತತರ್ಪಣ ಮಾಡಿರುವ ಫೋಟೊ, ವಿಡಿಯೋ ಇದ್ದುದರಿಂದ ಸ್ನೇಹಮಯಿ ಪರವಾಗಿ ವಾಮಾಚಾರ ನಡೆಸಲಾಗಿದೆ ಎಂದು ಪೊಲೀಸರು ಕೇಸು ದಾಖಲಿಸಿದ್ದರು. ಈ ವಿಷಯ ಸುದ್ದಿಯಾಗುತ್ತಿದ್ದಂತೆ ಸ್ನೇಹಮಯಿ ಹೇಳಿಕೆ ನೀಡಿದ್ದಾರೆ.
"ನನ್ನ ಮತ್ತು ಗಂಗರಾಜು ಅವರ ಫೋಟೋ ಇಟ್ಟು, ಪ್ರಾಣಿಗಳ ಬಲಿಕೊಟ್ಟು ವಾಮಾಚಾರ ಮಾಡಿರುವುದು ಕಂಡುಬಂದಿದೆ. ಇದರ ಜೊತೆ ನನ್ನನ್ನು ಭೇಟಿ ಮಾಡಿ ಆಮಿಷವೊಡ್ಡಿದ್ದ ಹರ್ಷ ಮತ್ತು ಶ್ರೀನಿಧಿ ಅವರ ಹೆಸರನ್ನು ಚೀಟಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೆಲ್ಲ ನೋಡಿದಾಗ ಇದರ ಹಿಂದೆ ಏನೋ ದೊಡ್ಡ ಸಂಚು ರೂಪಿಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಡಿ.9ರಂದು ಆ ಪೂಜೆಗಳು ನಡೆದಿವೆ, ಡಿ.13ರಂದು ಹರ್ಷ ಮತ್ತು ಶ್ರೀನಿಧಿ ಅವರು ನನ್ನನ್ನು ಭೇಟಿ ಮಾಡಿದ್ದರು. ಮುಡಾ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಬೇಕು ಎಂದು ಸಲ್ಲಿಸಿರುವ ಅರ್ಜಿಯನ್ನು ದಯವಿಟ್ಟು ವಾಪಸ್ ತೆಗೆದುಕೊಳ್ಳಿ. ನಿಮಗೆ ಎಷ್ಟು ದುಡ್ಡು ಬೇಕೋ ಅಷ್ಟು ಕೊಡುತ್ತೇವೆ ಎಂದು ಅವರು ಹೇಳಿದ್ದರು.
ಇದರ ಜೊತೆಗೆ ನನ್ನ ಮಗನ ಜೊತೆ ಮಾತನಾಡಿ, ನಮ್ಮ ಬಾಸ್ ಮಂಗಳೂರಿನಲ್ಲಿದ್ದಾರೆ ಎಂದು ಅತ್ತಾವರ ಅವರ ಫೋಟೋ ತೋರಿಸಿ, ಇವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ. ಅವರೇ ನೀವು ಹೋಗಿ ಕೆಲಸ ಆಗುತ್ತದೆ ಎಂದು ಹೇಳಿ ಕಳುಹಿಸಿದ್ದರು ಎಂದು ಹೇಳಿದ್ದರು. ಇದರಲ್ಲಿ ಸಾಕಷ್ಟು ಅನುಮಾನಾಸ್ಪದ ಸಂಗತಿಗಳು ಕಂಡು ಬಂದಿರುವುದರಿಂದ ಈ ಬಗ್ಗೆ ಸಮಗ್ರ ತನಿಖೆ ನಡೆಸಿದರೆ ಇದರ ಹಿಂದೆ ಯಾರಿದ್ದಾರೆ, ಯಾವ ಕಾರಣಕ್ಕೆ ಈ ರೀತಿ ಮಾಡಿದ್ದಾರೆ ಎಂದು ಗೊತ್ತಾಗುತ್ತದೆ.
ಘಟನೆ ಸಂಬಂಧ ಈಗಾಗಲೇ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ನನ್ನ ಬಳಿ ಇರುವ ಸಾಕ್ಷಿಗಳನ್ನು ಪೊಲೀಸರಿಗೆ ನೀಡುತ್ತೇನೆ ಎಂದು ಸ್ನೇಹಮಯಿ ತಿಳಿಸಿದ್ದಾರೆ.
Mangalore Prasad attavar blackmagic case, RTI Snehamayi Krishna alleges of offering crores of money to take back muda case. Speaking to the media persons at Mysuru Snehamayi said two of prasad attavar aides forced him to return the case back. Videos of animal sacrifice have been found on the mobile phone of Ram Sene leader Prasad Attavar, who was arrested in connection with the vandalism at a unisex salon near KSRTC bus stop, Bejai in the city.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm