ಬ್ರೇಕಿಂಗ್ ನ್ಯೂಸ್
01-02-25 02:32 pm Mangalore Correspondent ಕರಾವಳಿ
ಮಂಗಳೂರು, ಫೆ.1: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾಗ ಆರೋಪಿ ಮುರುಗನ್ ಡಿ ದೇವರ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ದರೋಡೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮುರುಗನ್ ದೇವರ್ ಮತ್ತು ಯೋಶುವಾ ರಾಜೇಂದ್ರನ್ ಅವರನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಲಾಗಿತ್ತು. ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಫೆ.3ರ ವರೆಗೆ ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ಸ್ಥಳ ಮಹಜರು ಉದ್ದೇಶಕ್ಕಾಗಿ ಕರೆದೊಯ್ದಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ, ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಫೈರಿಂಗ್ ಮಾಡಿದ್ದು ಕಾಲಿಗೆ ಗುಂಡೇಟು ಬಿದ್ದಿದೆ. ಸದ್ಯ ಗಾಯಾಳು ಆರೋಪಿಯನ್ನು ದೇರಳಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.



ಘಟನೆ ಯಲ್ಲಿ ಪೊಲೀಸ್ ಸಿಬ್ಬಂದಿ ಮಂಜುನಾಥ್ ಎಂಬವರಿಗೆ ಗಾಯವಾಗಿದೆ. ಮಂಜುನಾಥ್ ಮೇಲೆ ಹಲ್ಲೆ ನಡೆಸಿ ಮುರುಗನ್ ಪರಾರಿಯಾಗಲು ಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ನಾಲ್ಕೇ ದಿನದಲ್ಲಿ ಕಣ್ಣನ್ ಮಣಿಯನ್ನು ಬಂಧಿಸಿ, ಸ್ಥಳ ಮಹಜರು ಕರೆದೊಯ್ದಿದ್ದಾಗಲೂ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದರು. ಇದೀಗ ಎರಡನೇ ಬಾರಿಗೆ ಗುಂಡು ಹಾರಿಸಿದ್ದಾರೆ.
ಅಜ್ಜಿನಡ್ಕದಲ್ಲಿ ರಿವಾಲ್ವರ್ ಎಸೆದು ಹೋಗಿದ್ದರಂತೆ !
ಪೊಲೀಸ್ ಮಾಹಿತಿ ಪ್ರಕಾರ, ಆರೋಪಿಗಳು ದರೋಡೆ ಕೃತ್ಯದ ಮೊದಲು ಅಜ್ಜಿನಡ್ಕ ಎಂಬಲ್ಲಿ ತಮ್ಮ ರಿವಾಲ್ವರನ್ನು ಎಸೆದು ಹೋಗಿದ್ದರು. ರಿವಾಲ್ವರ್ ಪತ್ತೆ ಮಾಡಲು ಪ್ರಮುಖ ಆರೋಪಿ ಮುರುಗನ್ ದೇವರ್ ನನ್ನು ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ ಉಳ್ಳಾಲ ಠಾಣೆಯ ಪೇದೆ ಮಂಜುನಾಥ್ ಅವರ ಮರ್ಮಾಂಗಕ್ಕೆ ತುಳಿದು ಮುರುಗನ್ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ತಪ್ಪಿಸಲು ಯತ್ನಿಸಿದ ಆರೋಪಿ ಮುರುಗನ್ ಮೇಲೆ ಇನ್ಸ್ ಪೆಕ್ಟರ್ ಬಾಲಕೃಷ್ಣ ಫೈರಿಂಗ್ ಮಾಡಿದ್ದು ಕಾಲಿಗೆ ಗುಂಡೇಟು ಬಿದ್ದಿದೆ. ಸ್ಥಳದಲ್ಲಿ ರಿವಾಲ್ವರ್ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮೆಟಲ್ ಡಿಟೆಕ್ಟರ್ ತಂಡವನ್ನೂ ಸ್ಥಳಕ್ಕೆ ಕರೆಸಿದ್ದಾರೆ.
Mangalore Kotekar bank robbery case, main accused Murgan D shot to leg while trying to attack on police at Adyanadka while police took him to spot mahajar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm