ಬ್ರೇಕಿಂಗ್ ನ್ಯೂಸ್
01-02-25 07:47 pm Mangalore Correspondent ಕರಾವಳಿ
ಮಂಗಳೂರು, ಫೆ.1: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಧಾನಿ ದೆಹಲಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಪ್ರತಿದಿನ ಸಂಚರಿಸಲಿದೆ. ಫೆ.1ರಿಂದಲೇ ಈ ವಿಮಾನ ಯಾನ ಆರಂಭಗೊಂಡಿದ್ದು, ಬೆಳಗ್ಗೆ 6.40ಕ್ಕೆ ಮಂಗಳೂರಿನಿಂದ ಹೊರಟು 9.35ಕ್ಕೆ ದೆಹಲಿಗೆ ತಲುಪಿದೆ. ಆಮೂಲಕ ಕರಾವಳಿಯಿಂದ ರಾಜಧಾನಿ ದೆಹಲಿಯನ್ನು ಏರ್ ಇಂಡಿಯಾ ಇನ್ನಷ್ಟು ಹತ್ತಿರವಾಗಿಸಿದೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ಐಎಕ್ಸ್ 1552 ಹೆಸರಿನ ವಿಮಾನವು ಮಂಗಳೂರಿನಿಂದ 167 ಪ್ರಯಾಣಿಕರನ್ನು ಹೊತ್ತು ದೆಹಲಿಗೆ ತಲುಪಿದೆ. ಇದೇ ವೇಳೆಗೆ ಪ್ರತಿಯಾಗಿ ದೆಹಲಿಯಿಂದಲೂ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ಮಂಗಳೂರಿಗೆ ವಿಮಾನ ಆಗಮಿಸಿದೆ. ದೆಹಲಿಯಿಂದ ಹೊರಟ ವಿಮಾನವನ್ನು ಕ್ಯಾಪ್ಟನ್ ವಿನೀತ್ ಕುಮಾರ್ ಮತ್ತು ಸಿಬಂದಿ ಮುನ್ನಡೆಸಿದ್ದಾರೆ. ದೆಹಲಿಯಿಂದ ಬಂದ ವಿಮಾನದಲ್ಲಿ 144 ಪ್ರಯಾಣಿಕರು ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರಿನಿಂದ ಹೊರಟ ವಿಮಾನಕ್ಕೆ ಏರೋ ಡ್ರೋಮ್ ರೆಸ್ಕ್ಯು ತಂಡದಿಂದ ನೀರು ಹಾಯಿಸುವ ಮೂಲಕ ಶುಭ ಹಾರೈಕೆ ನೀಡಲಾಯಿತು. ಕಳೆದ ಜನವರಿ 4ರಿಂದ ಪ್ರತಿ ಶನಿವಾರ ಮಂಗಳೂರಿನಿಂದ ಪುಣೆಗೆ ಹೊಸ ವಿಮಾನ ಸಂಚಾರ ಆರಂಭಿಸಿತ್ತು. ಇದರ ಬೆನ್ನಲ್ಲೇ ರಾಜಧಾನಿ ದೆಹಲಿಗೂ ಪ್ರತಿ ದಿನದ ವಿಮಾನ ಸಂಚಾರ ಆರಂಭಿಸಿದೆ. ನೇರ ವಿಮಾನ ಸಂಚಾರದಿಂದ ಮಂಗಳೂರಿನಿಂದ ಬಿಸಿನೆಸ್ ಇನ್ನಿತರ ಉದ್ದೇಶಕ್ಕೆ ದೆಹಲಿಗೆ ಹೋಗುವವರಿಗೆ ಸುಗಮವಾಗಲಿದೆ. ಈಗಾಗಲೇ ಇಂಡಿಗೋ ಸಂಸ್ಥೆಯಿಂದ ದಿನವೂ ಸಂಜೆ ದೆಹಲಿಗೆ ವಿಮಾನ ಸಂಚಾರ ಇದೆ. ಇದರೊಂದಿಗೆ ಬೆಳಗ್ಗೆ, ಸಂಜೆ ಡೈಲಿ ವಿಮಾನ ಸಂಚಾರ ಮಾಡಿದಂತಾಗಿದೆ.
Air India Express commenced a direct flight service between Mangalore and Delhi. The initiative offers a direct daily morning service between the two cities.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm