ಬ್ರೇಕಿಂಗ್ ನ್ಯೂಸ್
01-02-25 07:47 pm Mangalore Correspondent ಕರಾವಳಿ
ಮಂಗಳೂರು, ಫೆ.1: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಧಾನಿ ದೆಹಲಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಪ್ರತಿದಿನ ಸಂಚರಿಸಲಿದೆ. ಫೆ.1ರಿಂದಲೇ ಈ ವಿಮಾನ ಯಾನ ಆರಂಭಗೊಂಡಿದ್ದು, ಬೆಳಗ್ಗೆ 6.40ಕ್ಕೆ ಮಂಗಳೂರಿನಿಂದ ಹೊರಟು 9.35ಕ್ಕೆ ದೆಹಲಿಗೆ ತಲುಪಿದೆ. ಆಮೂಲಕ ಕರಾವಳಿಯಿಂದ ರಾಜಧಾನಿ ದೆಹಲಿಯನ್ನು ಏರ್ ಇಂಡಿಯಾ ಇನ್ನಷ್ಟು ಹತ್ತಿರವಾಗಿಸಿದೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ಐಎಕ್ಸ್ 1552 ಹೆಸರಿನ ವಿಮಾನವು ಮಂಗಳೂರಿನಿಂದ 167 ಪ್ರಯಾಣಿಕರನ್ನು ಹೊತ್ತು ದೆಹಲಿಗೆ ತಲುಪಿದೆ. ಇದೇ ವೇಳೆಗೆ ಪ್ರತಿಯಾಗಿ ದೆಹಲಿಯಿಂದಲೂ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ಮಂಗಳೂರಿಗೆ ವಿಮಾನ ಆಗಮಿಸಿದೆ. ದೆಹಲಿಯಿಂದ ಹೊರಟ ವಿಮಾನವನ್ನು ಕ್ಯಾಪ್ಟನ್ ವಿನೀತ್ ಕುಮಾರ್ ಮತ್ತು ಸಿಬಂದಿ ಮುನ್ನಡೆಸಿದ್ದಾರೆ. ದೆಹಲಿಯಿಂದ ಬಂದ ವಿಮಾನದಲ್ಲಿ 144 ಪ್ರಯಾಣಿಕರು ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರಿನಿಂದ ಹೊರಟ ವಿಮಾನಕ್ಕೆ ಏರೋ ಡ್ರೋಮ್ ರೆಸ್ಕ್ಯು ತಂಡದಿಂದ ನೀರು ಹಾಯಿಸುವ ಮೂಲಕ ಶುಭ ಹಾರೈಕೆ ನೀಡಲಾಯಿತು. ಕಳೆದ ಜನವರಿ 4ರಿಂದ ಪ್ರತಿ ಶನಿವಾರ ಮಂಗಳೂರಿನಿಂದ ಪುಣೆಗೆ ಹೊಸ ವಿಮಾನ ಸಂಚಾರ ಆರಂಭಿಸಿತ್ತು. ಇದರ ಬೆನ್ನಲ್ಲೇ ರಾಜಧಾನಿ ದೆಹಲಿಗೂ ಪ್ರತಿ ದಿನದ ವಿಮಾನ ಸಂಚಾರ ಆರಂಭಿಸಿದೆ. ನೇರ ವಿಮಾನ ಸಂಚಾರದಿಂದ ಮಂಗಳೂರಿನಿಂದ ಬಿಸಿನೆಸ್ ಇನ್ನಿತರ ಉದ್ದೇಶಕ್ಕೆ ದೆಹಲಿಗೆ ಹೋಗುವವರಿಗೆ ಸುಗಮವಾಗಲಿದೆ. ಈಗಾಗಲೇ ಇಂಡಿಗೋ ಸಂಸ್ಥೆಯಿಂದ ದಿನವೂ ಸಂಜೆ ದೆಹಲಿಗೆ ವಿಮಾನ ಸಂಚಾರ ಇದೆ. ಇದರೊಂದಿಗೆ ಬೆಳಗ್ಗೆ, ಸಂಜೆ ಡೈಲಿ ವಿಮಾನ ಸಂಚಾರ ಮಾಡಿದಂತಾಗಿದೆ.
Air India Express commenced a direct flight service between Mangalore and Delhi. The initiative offers a direct daily morning service between the two cities.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm