ಬ್ರೇಕಿಂಗ್ ನ್ಯೂಸ್
01-02-25 07:47 pm Mangalore Correspondent ಕರಾವಳಿ
ಮಂಗಳೂರು, ಫೆ.1: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಧಾನಿ ದೆಹಲಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಪ್ರತಿದಿನ ಸಂಚರಿಸಲಿದೆ. ಫೆ.1ರಿಂದಲೇ ಈ ವಿಮಾನ ಯಾನ ಆರಂಭಗೊಂಡಿದ್ದು, ಬೆಳಗ್ಗೆ 6.40ಕ್ಕೆ ಮಂಗಳೂರಿನಿಂದ ಹೊರಟು 9.35ಕ್ಕೆ ದೆಹಲಿಗೆ ತಲುಪಿದೆ. ಆಮೂಲಕ ಕರಾವಳಿಯಿಂದ ರಾಜಧಾನಿ ದೆಹಲಿಯನ್ನು ಏರ್ ಇಂಡಿಯಾ ಇನ್ನಷ್ಟು ಹತ್ತಿರವಾಗಿಸಿದೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ಐಎಕ್ಸ್ 1552 ಹೆಸರಿನ ವಿಮಾನವು ಮಂಗಳೂರಿನಿಂದ 167 ಪ್ರಯಾಣಿಕರನ್ನು ಹೊತ್ತು ದೆಹಲಿಗೆ ತಲುಪಿದೆ. ಇದೇ ವೇಳೆಗೆ ಪ್ರತಿಯಾಗಿ ದೆಹಲಿಯಿಂದಲೂ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ಮಂಗಳೂರಿಗೆ ವಿಮಾನ ಆಗಮಿಸಿದೆ. ದೆಹಲಿಯಿಂದ ಹೊರಟ ವಿಮಾನವನ್ನು ಕ್ಯಾಪ್ಟನ್ ವಿನೀತ್ ಕುಮಾರ್ ಮತ್ತು ಸಿಬಂದಿ ಮುನ್ನಡೆಸಿದ್ದಾರೆ. ದೆಹಲಿಯಿಂದ ಬಂದ ವಿಮಾನದಲ್ಲಿ 144 ಪ್ರಯಾಣಿಕರು ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರಿನಿಂದ ಹೊರಟ ವಿಮಾನಕ್ಕೆ ಏರೋ ಡ್ರೋಮ್ ರೆಸ್ಕ್ಯು ತಂಡದಿಂದ ನೀರು ಹಾಯಿಸುವ ಮೂಲಕ ಶುಭ ಹಾರೈಕೆ ನೀಡಲಾಯಿತು. ಕಳೆದ ಜನವರಿ 4ರಿಂದ ಪ್ರತಿ ಶನಿವಾರ ಮಂಗಳೂರಿನಿಂದ ಪುಣೆಗೆ ಹೊಸ ವಿಮಾನ ಸಂಚಾರ ಆರಂಭಿಸಿತ್ತು. ಇದರ ಬೆನ್ನಲ್ಲೇ ರಾಜಧಾನಿ ದೆಹಲಿಗೂ ಪ್ರತಿ ದಿನದ ವಿಮಾನ ಸಂಚಾರ ಆರಂಭಿಸಿದೆ. ನೇರ ವಿಮಾನ ಸಂಚಾರದಿಂದ ಮಂಗಳೂರಿನಿಂದ ಬಿಸಿನೆಸ್ ಇನ್ನಿತರ ಉದ್ದೇಶಕ್ಕೆ ದೆಹಲಿಗೆ ಹೋಗುವವರಿಗೆ ಸುಗಮವಾಗಲಿದೆ. ಈಗಾಗಲೇ ಇಂಡಿಗೋ ಸಂಸ್ಥೆಯಿಂದ ದಿನವೂ ಸಂಜೆ ದೆಹಲಿಗೆ ವಿಮಾನ ಸಂಚಾರ ಇದೆ. ಇದರೊಂದಿಗೆ ಬೆಳಗ್ಗೆ, ಸಂಜೆ ಡೈಲಿ ವಿಮಾನ ಸಂಚಾರ ಮಾಡಿದಂತಾಗಿದೆ.
Air India Express commenced a direct flight service between Mangalore and Delhi. The initiative offers a direct daily morning service between the two cities.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm