ಬ್ರೇಕಿಂಗ್ ನ್ಯೂಸ್
16-12-20 01:57 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರಿಗೆ ದುಷ್ಕರ್ಮಿಯೊಬ್ಬ ತಲವಾರಿನಲ್ಲಿ ಕಡಿದು ಪರಾರಿಯಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಮಂಗಳೂರಿನ ರಥಬೀದಿ ಬಳಿಯ ನ್ಯೂ ಚಿತ್ರಾ ಟಾಕೀಸ್ ಮುಂಭಾಗದಲ್ಲಿ ಘಟನೆ ನಡೆದಿದೆ. ಬಂದರು ಠಾಣೆಯ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮತ್ತು ಇಬ್ಬರು ಸಿಬಂದಿ ತಪಾಸಣೆ ನಿರತರಾಗಿದ್ದರು. ಈ ವೇಳೆ, ಬೈಕಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಯೊಬ್ಬ ಮುಖ್ಯ ಪೇದೆ ಗಣೇಶ್ ಕಾಮತ್ ಮೇಲೆ ಹಲ್ಲೆ ಮಾಡಿದ್ದಾನೆ. ಗಣೇಶ್ ಕಾಮತ್ ಕೈಗೆ ತಲವಾರು ಏಟು ಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಮತ್, ಅಪಾಯದಿಂದ ಪಾರಾಗಿದ್ದಾರೆ.
ಬಂದರು ಠಾಣೆ ವ್ಯಾಪ್ತಿಯಲ್ಲೇ ಘಟನೆ ನಡೆದಿದ್ದು ಯಾವುದೋ ದ್ವೇಷದಿಂದ ಹಲ್ಲೆ ನಡೆಸಿರುವ ಸಾಧ್ಯತೆಯಿದೆ. ಆರೋಪಿಯನ್ನು ಪೊಲೀಸರು ಹುಡುಕಾಡುತ್ತಿದ್ದಾರೆ. ಆರೋಪಿ ಸ್ಥಳೀಯನೇ ಆಗಿರುವ ಬಗ್ಗೆ ಶಂಕೆಯಿದೆ.
ಮೂರು ವರ್ಷಗಳ ಹಿಂದೆಯೂ ಹಲ್ಲೆ
ಕರ್ತವ್ಯದಲ್ಲಿದ್ದ ಪೊಲೀಸ್ ಮೇಲೆ ಈ ಹಿಂದೆಯೂ ಹಲ್ಲೆ ನಡೆದಿತ್ತು. 2017, ಎಪ್ರಿಲ್ 5ರಂದು ಉರ್ವಾ ಠಾಣೆಯ ಎಎಸ್ಐ ಐತಪ್ಪ ಎಂಬವರ ಮೇಲೆ ಲೇಡಿಹಿಲ್ ಸರ್ಕಲ್ ನಲ್ಲಿ ಹಲ್ಲೆ ನಡೆದಿತ್ತು. ರಾತ್ರಿ ವೇಳೆ ಕರ್ತವ್ಯದಲ್ಲಿದ್ದ ಐತಪ್ಪ ಅವರಿಗೆ ನಸುಕಿನಲ್ಲಿ ದಾಳಿ ನಡೆದಿತ್ತು. ಬೈಕಿನಲ್ಲಿ ಬಂದಿದ್ದ ಇಬ್ಬರು ಕಬ್ಬಿಣದ ರಾಡ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು.
Video:
A Head Constable of Bunder police station Ganesh Kanath was attacked by a Motor-Cycle Brone miscreant while he was on duty near New Chitra Talkies near cart street in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am