ಬ್ರೇಕಿಂಗ್ ನ್ಯೂಸ್
16-12-20 01:57 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರಿಗೆ ದುಷ್ಕರ್ಮಿಯೊಬ್ಬ ತಲವಾರಿನಲ್ಲಿ ಕಡಿದು ಪರಾರಿಯಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಮಂಗಳೂರಿನ ರಥಬೀದಿ ಬಳಿಯ ನ್ಯೂ ಚಿತ್ರಾ ಟಾಕೀಸ್ ಮುಂಭಾಗದಲ್ಲಿ ಘಟನೆ ನಡೆದಿದೆ. ಬಂದರು ಠಾಣೆಯ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮತ್ತು ಇಬ್ಬರು ಸಿಬಂದಿ ತಪಾಸಣೆ ನಿರತರಾಗಿದ್ದರು. ಈ ವೇಳೆ, ಬೈಕಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಯೊಬ್ಬ ಮುಖ್ಯ ಪೇದೆ ಗಣೇಶ್ ಕಾಮತ್ ಮೇಲೆ ಹಲ್ಲೆ ಮಾಡಿದ್ದಾನೆ. ಗಣೇಶ್ ಕಾಮತ್ ಕೈಗೆ ತಲವಾರು ಏಟು ಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಮತ್, ಅಪಾಯದಿಂದ ಪಾರಾಗಿದ್ದಾರೆ.
ಬಂದರು ಠಾಣೆ ವ್ಯಾಪ್ತಿಯಲ್ಲೇ ಘಟನೆ ನಡೆದಿದ್ದು ಯಾವುದೋ ದ್ವೇಷದಿಂದ ಹಲ್ಲೆ ನಡೆಸಿರುವ ಸಾಧ್ಯತೆಯಿದೆ. ಆರೋಪಿಯನ್ನು ಪೊಲೀಸರು ಹುಡುಕಾಡುತ್ತಿದ್ದಾರೆ. ಆರೋಪಿ ಸ್ಥಳೀಯನೇ ಆಗಿರುವ ಬಗ್ಗೆ ಶಂಕೆಯಿದೆ.
ಮೂರು ವರ್ಷಗಳ ಹಿಂದೆಯೂ ಹಲ್ಲೆ
ಕರ್ತವ್ಯದಲ್ಲಿದ್ದ ಪೊಲೀಸ್ ಮೇಲೆ ಈ ಹಿಂದೆಯೂ ಹಲ್ಲೆ ನಡೆದಿತ್ತು. 2017, ಎಪ್ರಿಲ್ 5ರಂದು ಉರ್ವಾ ಠಾಣೆಯ ಎಎಸ್ಐ ಐತಪ್ಪ ಎಂಬವರ ಮೇಲೆ ಲೇಡಿಹಿಲ್ ಸರ್ಕಲ್ ನಲ್ಲಿ ಹಲ್ಲೆ ನಡೆದಿತ್ತು. ರಾತ್ರಿ ವೇಳೆ ಕರ್ತವ್ಯದಲ್ಲಿದ್ದ ಐತಪ್ಪ ಅವರಿಗೆ ನಸುಕಿನಲ್ಲಿ ದಾಳಿ ನಡೆದಿತ್ತು. ಬೈಕಿನಲ್ಲಿ ಬಂದಿದ್ದ ಇಬ್ಬರು ಕಬ್ಬಿಣದ ರಾಡ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು.
Video:
A Head Constable of Bunder police station Ganesh Kanath was attacked by a Motor-Cycle Brone miscreant while he was on duty near New Chitra Talkies near cart street in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am