ಬ್ರೇಕಿಂಗ್ ನ್ಯೂಸ್
05-02-25 10:51 pm Mangalore Correspondent ಕರಾವಳಿ
ಮಂಗಳೂರು, ಫೆ.5: ಮಸಾಜ್ ಪಾರ್ಲರ್ ಮೇಲೆ ದಾಳಿ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ್ ಸೇರಿ 11 ಮಂದಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜ.23ರಂದು ನಗರದ ಬಿಜೈ ಕೆಎಸ್ಸಾರ್ಟಿಸಿ ಬಳಿಯ ಆದಿತ್ಯ ಕಾಂಪ್ಲೆಕ್ಸ್ ನಲ್ಲಿ ಕಲರ್ಸ್ ಯೂನಿಸೆಕ್ಸ್ ಸೆಲೂನ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ರಾಮ ಸೇನೆಯ ಕಾರ್ಯಕರ್ತರು ದಾಳಿ ಎಸಗಿದ್ದರು. ಕೃತೃದ ಸಂದರ್ಭದಲ್ಲಿ ಪೀಠೋಪಕರಣಗಳನ್ನು ಧ್ವಂಸ ಮಾಡಿ ಅಲ್ಲಿದ್ದ ಮಹಿಳಾ ಸಿಬಂದಿಗೆ ಜೀವ ಬೆದರಿಕೆ ಹಾಕಿದ್ದರು. ಘಟನೆ ಸಂಬಂಧಿಸಿ ಸೆಲೂನ್ ಮಾಲೀಕ ಸುಧೀರ್ ಶೆಟ್ಟಿ ಬರ್ಕೆ ಠಾಣೆಗೆ ದೂರು ನೀಡಿದ್ದರು.
ಬರ್ಕೆ ಪೊಲೀಸರು ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಬಂಧಿಸಿದ್ದು ಮಂಗಳೂರಿನ 6ನೇ ಜೆಎಂಎಫ್ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಎಲ್ಲ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಗಳ ಪರವಾಗಿ ವಕೀಲ ಮಯೂರ ಕೀರ್ತಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಫೆ.5ರಂದು ಪ್ರಸಾದ್ ಅತ್ತಾವರ್ ಮತ್ತು ಇತರ ಹತ್ತು ಮಂದಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ನಡುವೆ, ಪ್ರಸಾದ್ ಅತ್ತಾವರ್ ಜೈಲು ಪಾಲಾಗಿದ್ದರೂ ಅನಾರೋಗ್ಯ ನೆಪವೊಡ್ಡಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೆ, ಪೊಲೀಸರು ಆತನ ಮೊಬೈಲ್ ತನಿಖೆ ನಡೆಸಿದ ಸಂದರ್ಭದಲ್ಲಿ ವಾಮಾಚಾರ ನಡೆಸಿರುವುದು ಪತ್ತೆಯಾಗಿದ್ದರಿಂದ ಆ ಬಗ್ಗೆ ಮತ್ತೊಂದು ಪ್ರಕರಣವನ್ನು ಬರ್ಕೆ ಠಾಣೆಯಲ್ಲಿ ದಾಖಲಿಸಿದ್ದರು.
Hindu activist Prasad Attavar and 11 others get bail in Saloon Attack case in Mangalore. Prasad Attavar was arrested by police over attack on saloon at bejai.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm