ಬ್ರೇಕಿಂಗ್ ನ್ಯೂಸ್
07-02-25 10:13 pm Mangalore Correspondent ಕರಾವಳಿ
ಮಂಗಳೂರು, ಫೆ.7: ಕೋವಿಡ್ ಸೋಂಕು ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮದಿಂದಾಗಿ ಜನಸಾಮಾನ್ಯರಲ್ಲಿ ಹೃದಯ, ನರ ಮತ್ತು ಮೆದುಳು ಸಂಬಂಧಿ ಕಾಯಿಲೆಗಳಿಂದ ಹಠಾತ್ ಸಾವುಗಳು ಸಂಭವಿಸುತ್ತಿವೆ ಎಂಬುದಾಗಿ ಸಾರ್ವಜನಿಕರಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಠಾತ್ ಸಾವುಗಳ ಕುರಿತಾಗಿ ಅಧ್ಯಯನ ನಡೆಸಲು ಆರೋಗ್ಯ ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.
ಹಠಾತ್ ಸಾವುಗಳ ಕುರಿತು ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸುವಂತೆ ಸಿಎಂ ಸೂಚಿಸಿದ್ದು, ಸಮಿತಿಯ ವರದಿ ಆಧರಿಸಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವಜನರಲ್ಲಿ ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಕಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಹಠಾತ್ ಸಾವು ಸಂಭವಿಸುತ್ತಿರುವುದರಿಂದ ಅವಲಂಬಿತ ಕುಟುಂಬಗಳು ಆರ್ಥಿಕ, ಸಾಮಾಜಿಕ ಸಮಸ್ಯೆಗಳಿಗೆ ತುತ್ತಾಗುತ್ತಿದೆ. ಈ ಸಾವುಗಳು ಕೋವಿಡ್ ಸೋಂಕು ಅಥವಾ ಲಸಿಕೆಯ ಅಡ್ಡ ಪರಿಣಾಮದಿಂದ ಕಾರಣಕ್ಕೆ ಉಂಟಾಗುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇಂತಹ ಸಾವುಗಳ ಬಗ್ಗೆ ಅಧ್ಯಯನ ನಡೆಸಿ ಹಠಾತ್ ಸಾವುಗಳನ್ನು ತಡೆಗಟ್ಟುವ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಮೇಲ್ ಸಂದೇಶದ ಮೂಲಕ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ತಜ್ಞರ ಸಮಿತಿಯನ್ನು ರಚಿಸಿ, ವರದಿಯನ್ನು ಆಧರಿಸಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
Karnataka will form an expert committee to study the cause of rising cases of sudden deaths among young people.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm