ಬ್ರೇಕಿಂಗ್ ನ್ಯೂಸ್
09-02-25 11:03 pm Mangalore Correspondent ಕರಾವಳಿ
ಮಂಗಳೂರು, ಫೆ.9: 12 ವರ್ಷದ ಬಾಲಕನ ಭುಜದ ಮೂಲಕ ಎದೆಗೆ ಹೊಕ್ಕಿದ್ದ ತೆಂಗಿನ ದಂಟನ್ನು ವೆನ್ಲಾಕ್ ವೈದ್ಯರು ಸಕಾಲಿಕವಾಗಿ ನಡೆಸಿದ ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದಿದ್ದು, ಬಾಲಕನ ಜೀವ ಉಳಿಸಿದ್ದಾರೆ. ಆಮೂಲಕ ಸರಕಾರಿ ಆಸ್ಪತ್ರೆಯಲ್ಲಿಯೂ ಶಸ್ತ್ರಚಿಕಿತ್ಸೆಯಿಂದ ಜನಸಾಮಾನ್ಯರ ಜೀವ ಉಳಿಸಲು ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
ಮಡಿಕೇರಿಯ ಕಾಫಿ ಎಸ್ಟೇಟ್ ಒಂದರಲ್ಲಿ ಅಸ್ಸಾಮ್ ಮೂಲದ ಕಾರ್ಮಿಕ ದಂಪತಿಯ ಪುತ್ರ ಕಮಲ್ ಹುಸೇನ್ (12) ಶಸ್ತ್ರಚಿಕಿತ್ಸೆಗೆ ಒಳಗಾದ ಬಾಲಕ. ಶುಕ್ರವಾರ ಸಂಜೆ ಇವರು ಉಳಿದುಕೊಂಡಿದ್ದ ಮನೆಯ ಬಳಿ ನೇರಳೆ ಹಣ್ಣಿನ ಮರಕ್ಕೆ ಬಾಲಕ ಹತ್ತಿದ್ದು ಅಕಸ್ಮಾತ್ ಮರದಿಂದ ಕೆಳಕ್ಕೆ ಬಿದ್ದಿದ್ದಾನೆ. ಈ ವೇಳೆ, ತೆಂಗಿನ ಗರಿಯ ದಂಟು ಭುಜದ ಮೂಲಕ ಬಾಲಕನ ಎದೆಯ ಭಾಗಕ್ಕೆ ಹೊಕ್ಕಿತ್ತು. ಜೊತೆಗೆ, ಆತನ ಕುತ್ತಿಗೆಯಲ್ಲಿದ್ದ ಸ್ಟೀಲ್ ಚೈನ್ ಕೂಡ ಗಾಯದ ಮೂಲಕ ಒಳಸೇರಿತ್ತು. ಮೂರು ಇಂಚಿನಷ್ಟು ಎದೆಗೆ ಒಳ ಹೋಗಿರುವುದು ಎಕ್ಸ್ ರೇಯಲ್ಲಿ ಕಂಡುಬಂದಿತ್ತು.


ಮಡಿಕೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು ನೇರವಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿತ್ತು. ಶನಿವಾರ ಸಂಜೆ ವೆನ್ಲಾಕ್ ತಲುಪಿದ್ದ ಬಾಲಕನಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಬೇಕಾಗಿತ್ತು. ವೆನ್ಲಾಕ್ ಆಸ್ಪತ್ರೆಯ ಎದೆ ಮತ್ತು ರಕ್ತನಾಳಗಳ ವೈದ್ಯರಾದ ಡಾ.ಸುರೇಶ್ ಪೈ ನೇತೃತ್ವದ ತಂಡವು ಭಾನುವಾರ ನಸುಕಿನ 1.30ರಿಂದ 3.30ರ ವರೆಗೆ ಶಸ್ತ್ರಚಿಕಿತ್ಸೆ ಮಾಡಿದ್ದು, ಯಶಸ್ವಿಯಾಗಿ ತೆಂಗಿನ ಗರಿಯನ್ನು ಮತ್ತು ಸ್ಟೀಲ್ ಚೈನ್ ಅನ್ನು ಹೊರತೆಗೆದಿದೆ. ಸಕಾಲಿಕವಾಗಿ ಸ್ಪಂದಿಸಿರುವ ವೈದ್ಯರ ತಂಡಕ್ಕೆ ವೆನ್ಲಾಕ್ ಆಸ್ಪತ್ರೆಯ ಸುಪರಿಡೆಂಟ್ ಅಭಿನಂದನೆ ವ್ಯಕ್ತಪಡಿಸಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ ಬಾಲಕ ಉಷಾರಾಗಿದ್ದಾನೆ ಎಂದು ಆತನ ಕುಟುಂಬಸ್ಥರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಅಸ್ಸಾಮ್ ಮೂಲದ ಏಳು ಮಂದಿ ಎರಡು ವರ್ಷಗಳ ಹಿಂದೆ ಮಡಿಕೇರಿ ಬಂದು ಕಾಫಿ ಎಸ್ಟೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ಬಾಲಕ ಊರಿನಲ್ಲೇ ಇದ್ದು ಶಾಲೆಗೆ ಹೋಗುತ್ತಿದ್ದ. ಈ ಬಾರಿ ಶಾಲೆಗೆ ಹೋಗದೆ ಹೆತ್ತವರ ಜೊತೆಗೆ ಊರಿಗೆ ಬಂದಿದ್ದ ಎಂದು ಆತನ ಸಂಬಂಧಿಕ ತಸ್ಸಾರ್ ಆಲಿ ಮಾಹಿತಿ ನೀಡಿದ್ದಾರೆ.
Coconut cassava stuck on shoulder operated successfully by Wenlock hospital in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm