ಬ್ರೇಕಿಂಗ್ ನ್ಯೂಸ್
16-12-20 04:48 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕರ್ನಾಟಕದ ದರಿದ್ರ ಬಿಜೆಪಿ ಸರಕಾರ ಪಂಚಾಯತ್ ಚುನಾವಣೆಯನ್ನೂ ಸರಿಯಾಗಿ ನಿರ್ವಹಿಸುತ್ತಿಲ್ಲ. ಮೀಸಲಾತಿ ವಿಚಾರದಲ್ಲಿ ಆಟವಾಡಿದ ಬಿಜೆಪಿ ಈಗ ಕಾಂಗ್ರೆಸ್ ಬೆಂಬಲಿತರನ್ನು ಹೆದರಿಸುವ ಪ್ರಯತ್ನ ಮಾಡುತ್ತಿದೆ. ಹೆದರಿಸಿ, ಬೆದರಿಸಿ ನಾಮಪತ್ರ ಹಿಂಪಡೆಯುವಂತೆ ಮಾಡಿಸಿ, ಕೆಲವು ಕಡೆ ಅವಿರೋಧ ಆಯ್ಕೆ ಆಗಿದೆ. ಹೀಗಾಗಿ ಈ ಬಾರಿ ಪಾರದರ್ಶಕವಾಗಿ ಚುನಾವಣೆ ನಡೆಯುತ್ತದೆ ಎನ್ನುವ ಭರವಸೆ ಇಲ್ಲ. ಪಾರದರ್ಶಕ ಚುನಾವಣೆ ನಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ರಮಾನಾಥ ರೈ, ಬಿಜೆಪಿಯ ಈ ರೀತಿಯ ವರ್ತನೆಗೆ ಈ ಬಾರಿ ಮತದಾರರೇ ತಕ್ಕ ಉತ್ತರ ನೀಡಬೇಕಾಗಿದೆ. ಜನವಿರೋಧಿ ಸರಕಾರದ ವಿರುದ್ಧ ಮತದಾರರು ಮತ ಚಲಾವಣೆಯ ಮೂಲಕ ಉತ್ತರ ನೀಡಬೇಕು. ಆದರೆ, ಇದು ಪಾರದರ್ಶಕ ಚುನಾವಣೆ ನಡೆದರಷ್ಟೇ ಸಾಧ್ಯ ಎಂದು ಹೇಳಿದರು.
ಪರಿಷತ್ತಿನಲ್ಲಿ ಕ್ರಿಯೆಗೆ ಪ್ರತಿಕ್ರಿಯೆ ಅಷ್ಟೇ !
ಇದೇ ವೇಳೆ, ವಿಧಾನ ಪರಿಷತ್ತಿನಲ್ಲಿ ಘಟನೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದಕ್ಕೆ ಬಿಜೆಪಿಯೇ ಕಾರಣ. ಒಂದ್ಕಡೆ ಸಭಾಪತಿಯ ಪೀಠದಲ್ಲಿ ಉಪ ಸಭಾಪತಿಯನ್ನು ಕೂರಿಸಲಾಗಿತ್ತು. ಮತ್ತೊಂದ್ಕಡೆ ಬಿಜೆಪಿಯವರು ಬಾಗಿಲು ಹಾಕಿ ಸಭಾಪತಿಯನ್ನು ತಡೆದಿದ್ದರು. ಹೀಗೆ ತಡೆದಿದ್ದು ಕಾಂಗ್ರೆಸ್ ಸದಸ್ಯರನ್ನು ಪ್ರಚೋದಿಸುವಂತೆ ಮಾಡಿತ್ತು. ಇದರಿಂದ ಕೆರಳಿ, ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿಯವರು ಬಾಗಿಲು ಹಾಕಿದ್ದು ಸರಿಯಾ ಎಂದು ಪ್ರಶ್ನೆ ಮಾಡಿದ್ರು. ಬಿಜೆಪಿಯವರ ಈ ರೀತಿಯ ಕ್ರಿಯೆಗೆ ಆ ರೀತಿಯ ಪ್ರತಿಕ್ರಿಯೆ ಆಗಿದೆ ಅಷ್ಟೇ. ಈ ಹಿಂದೆಯೂ ಯಡಿಯೂರಪ್ಪ ಸರಕಾರ ಇದ್ದಾಗ, ಇಂಥದ್ದೇ ಘಟನೆ ನಡೆದಿತ್ತು. ಬಾಗಿಲು ಹಾಕಿ ಕಲಾಪ ನಡೆಸಿದ್ದರು. ಯಡಿಯೂರಪ್ಪ ಸರಕಾರ ಇರುವಾಗಲೇ ಯಾಕೆ ಇಂಥ ಘಟನೆಗಳಾಗುತ್ತವೆ ಎಂದು ಪ್ರಶ್ನಿಸಿದರು.
Video:
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am