ಬ್ರೇಕಿಂಗ್ ನ್ಯೂಸ್
16-12-20 04:48 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕರ್ನಾಟಕದ ದರಿದ್ರ ಬಿಜೆಪಿ ಸರಕಾರ ಪಂಚಾಯತ್ ಚುನಾವಣೆಯನ್ನೂ ಸರಿಯಾಗಿ ನಿರ್ವಹಿಸುತ್ತಿಲ್ಲ. ಮೀಸಲಾತಿ ವಿಚಾರದಲ್ಲಿ ಆಟವಾಡಿದ ಬಿಜೆಪಿ ಈಗ ಕಾಂಗ್ರೆಸ್ ಬೆಂಬಲಿತರನ್ನು ಹೆದರಿಸುವ ಪ್ರಯತ್ನ ಮಾಡುತ್ತಿದೆ. ಹೆದರಿಸಿ, ಬೆದರಿಸಿ ನಾಮಪತ್ರ ಹಿಂಪಡೆಯುವಂತೆ ಮಾಡಿಸಿ, ಕೆಲವು ಕಡೆ ಅವಿರೋಧ ಆಯ್ಕೆ ಆಗಿದೆ. ಹೀಗಾಗಿ ಈ ಬಾರಿ ಪಾರದರ್ಶಕವಾಗಿ ಚುನಾವಣೆ ನಡೆಯುತ್ತದೆ ಎನ್ನುವ ಭರವಸೆ ಇಲ್ಲ. ಪಾರದರ್ಶಕ ಚುನಾವಣೆ ನಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ರಮಾನಾಥ ರೈ, ಬಿಜೆಪಿಯ ಈ ರೀತಿಯ ವರ್ತನೆಗೆ ಈ ಬಾರಿ ಮತದಾರರೇ ತಕ್ಕ ಉತ್ತರ ನೀಡಬೇಕಾಗಿದೆ. ಜನವಿರೋಧಿ ಸರಕಾರದ ವಿರುದ್ಧ ಮತದಾರರು ಮತ ಚಲಾವಣೆಯ ಮೂಲಕ ಉತ್ತರ ನೀಡಬೇಕು. ಆದರೆ, ಇದು ಪಾರದರ್ಶಕ ಚುನಾವಣೆ ನಡೆದರಷ್ಟೇ ಸಾಧ್ಯ ಎಂದು ಹೇಳಿದರು.
ಪರಿಷತ್ತಿನಲ್ಲಿ ಕ್ರಿಯೆಗೆ ಪ್ರತಿಕ್ರಿಯೆ ಅಷ್ಟೇ !
ಇದೇ ವೇಳೆ, ವಿಧಾನ ಪರಿಷತ್ತಿನಲ್ಲಿ ಘಟನೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದಕ್ಕೆ ಬಿಜೆಪಿಯೇ ಕಾರಣ. ಒಂದ್ಕಡೆ ಸಭಾಪತಿಯ ಪೀಠದಲ್ಲಿ ಉಪ ಸಭಾಪತಿಯನ್ನು ಕೂರಿಸಲಾಗಿತ್ತು. ಮತ್ತೊಂದ್ಕಡೆ ಬಿಜೆಪಿಯವರು ಬಾಗಿಲು ಹಾಕಿ ಸಭಾಪತಿಯನ್ನು ತಡೆದಿದ್ದರು. ಹೀಗೆ ತಡೆದಿದ್ದು ಕಾಂಗ್ರೆಸ್ ಸದಸ್ಯರನ್ನು ಪ್ರಚೋದಿಸುವಂತೆ ಮಾಡಿತ್ತು. ಇದರಿಂದ ಕೆರಳಿ, ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿಯವರು ಬಾಗಿಲು ಹಾಕಿದ್ದು ಸರಿಯಾ ಎಂದು ಪ್ರಶ್ನೆ ಮಾಡಿದ್ರು. ಬಿಜೆಪಿಯವರ ಈ ರೀತಿಯ ಕ್ರಿಯೆಗೆ ಆ ರೀತಿಯ ಪ್ರತಿಕ್ರಿಯೆ ಆಗಿದೆ ಅಷ್ಟೇ. ಈ ಹಿಂದೆಯೂ ಯಡಿಯೂರಪ್ಪ ಸರಕಾರ ಇದ್ದಾಗ, ಇಂಥದ್ದೇ ಘಟನೆ ನಡೆದಿತ್ತು. ಬಾಗಿಲು ಹಾಕಿ ಕಲಾಪ ನಡೆಸಿದ್ದರು. ಯಡಿಯೂರಪ್ಪ ಸರಕಾರ ಇರುವಾಗಲೇ ಯಾಕೆ ಇಂಥ ಘಟನೆಗಳಾಗುತ್ತವೆ ಎಂದು ಪ್ರಶ್ನಿಸಿದರು.
Video:
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 10:20 am
Mangalore Correspondent
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm