ಬ್ರೇಕಿಂಗ್ ನ್ಯೂಸ್
16-12-20 04:48 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕರ್ನಾಟಕದ ದರಿದ್ರ ಬಿಜೆಪಿ ಸರಕಾರ ಪಂಚಾಯತ್ ಚುನಾವಣೆಯನ್ನೂ ಸರಿಯಾಗಿ ನಿರ್ವಹಿಸುತ್ತಿಲ್ಲ. ಮೀಸಲಾತಿ ವಿಚಾರದಲ್ಲಿ ಆಟವಾಡಿದ ಬಿಜೆಪಿ ಈಗ ಕಾಂಗ್ರೆಸ್ ಬೆಂಬಲಿತರನ್ನು ಹೆದರಿಸುವ ಪ್ರಯತ್ನ ಮಾಡುತ್ತಿದೆ. ಹೆದರಿಸಿ, ಬೆದರಿಸಿ ನಾಮಪತ್ರ ಹಿಂಪಡೆಯುವಂತೆ ಮಾಡಿಸಿ, ಕೆಲವು ಕಡೆ ಅವಿರೋಧ ಆಯ್ಕೆ ಆಗಿದೆ. ಹೀಗಾಗಿ ಈ ಬಾರಿ ಪಾರದರ್ಶಕವಾಗಿ ಚುನಾವಣೆ ನಡೆಯುತ್ತದೆ ಎನ್ನುವ ಭರವಸೆ ಇಲ್ಲ. ಪಾರದರ್ಶಕ ಚುನಾವಣೆ ನಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ರಮಾನಾಥ ರೈ, ಬಿಜೆಪಿಯ ಈ ರೀತಿಯ ವರ್ತನೆಗೆ ಈ ಬಾರಿ ಮತದಾರರೇ ತಕ್ಕ ಉತ್ತರ ನೀಡಬೇಕಾಗಿದೆ. ಜನವಿರೋಧಿ ಸರಕಾರದ ವಿರುದ್ಧ ಮತದಾರರು ಮತ ಚಲಾವಣೆಯ ಮೂಲಕ ಉತ್ತರ ನೀಡಬೇಕು. ಆದರೆ, ಇದು ಪಾರದರ್ಶಕ ಚುನಾವಣೆ ನಡೆದರಷ್ಟೇ ಸಾಧ್ಯ ಎಂದು ಹೇಳಿದರು.
ಪರಿಷತ್ತಿನಲ್ಲಿ ಕ್ರಿಯೆಗೆ ಪ್ರತಿಕ್ರಿಯೆ ಅಷ್ಟೇ !
ಇದೇ ವೇಳೆ, ವಿಧಾನ ಪರಿಷತ್ತಿನಲ್ಲಿ ಘಟನೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದಕ್ಕೆ ಬಿಜೆಪಿಯೇ ಕಾರಣ. ಒಂದ್ಕಡೆ ಸಭಾಪತಿಯ ಪೀಠದಲ್ಲಿ ಉಪ ಸಭಾಪತಿಯನ್ನು ಕೂರಿಸಲಾಗಿತ್ತು. ಮತ್ತೊಂದ್ಕಡೆ ಬಿಜೆಪಿಯವರು ಬಾಗಿಲು ಹಾಕಿ ಸಭಾಪತಿಯನ್ನು ತಡೆದಿದ್ದರು. ಹೀಗೆ ತಡೆದಿದ್ದು ಕಾಂಗ್ರೆಸ್ ಸದಸ್ಯರನ್ನು ಪ್ರಚೋದಿಸುವಂತೆ ಮಾಡಿತ್ತು. ಇದರಿಂದ ಕೆರಳಿ, ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿಯವರು ಬಾಗಿಲು ಹಾಕಿದ್ದು ಸರಿಯಾ ಎಂದು ಪ್ರಶ್ನೆ ಮಾಡಿದ್ರು. ಬಿಜೆಪಿಯವರ ಈ ರೀತಿಯ ಕ್ರಿಯೆಗೆ ಆ ರೀತಿಯ ಪ್ರತಿಕ್ರಿಯೆ ಆಗಿದೆ ಅಷ್ಟೇ. ಈ ಹಿಂದೆಯೂ ಯಡಿಯೂರಪ್ಪ ಸರಕಾರ ಇದ್ದಾಗ, ಇಂಥದ್ದೇ ಘಟನೆ ನಡೆದಿತ್ತು. ಬಾಗಿಲು ಹಾಕಿ ಕಲಾಪ ನಡೆಸಿದ್ದರು. ಯಡಿಯೂರಪ್ಪ ಸರಕಾರ ಇರುವಾಗಲೇ ಯಾಕೆ ಇಂಥ ಘಟನೆಗಳಾಗುತ್ತವೆ ಎಂದು ಪ್ರಶ್ನಿಸಿದರು.
Video:
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am