ಬ್ರೇಕಿಂಗ್ ನ್ಯೂಸ್
12-02-25 06:05 pm Mangalore Correspondent ಕರಾವಳಿ
ಪುತ್ತೂರು, ಫೆ.12: ಕರ್ತವ್ಯ ನಿರತ ಮಹಿಳಾ ಎಸ್ಐಗೆ ದ್ವಿಚಕ್ರ ವಾಹನದ ಸವಾರನೊಬ್ಬ ಬೆದರಿಕೆ ಹಾಕಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಲು ಮುಂದಾದ ಘಟನೆ ಸಂಪ್ಯದಲ್ಲಿ ಪುತ್ತೂರು ಗ್ರಾಮಾಂತರ ಠಾಣೆ ಮುಂಭಾಗ ನಡೆದಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆ ಎಸ್ಐ ಸುಷ್ಮಾ ಭಂಡಾರಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಸಂಪ್ಯ ಠಾಣೆ ಮುಂಭಾಗ ರಿಕ್ಷಾ ಚಾಲಕನಾಗಿ ವೃತ್ತಿ ನಡೆಸುವ, ಕಡಬ ತಾಲೂಕಿನ ಗೊಳಿತೊಟ್ಟು ಗ್ರಾಮದ ಸುಂದರ ಗೌಡ ಎಂಬವರ ಪುತ್ರ ಪ್ರತಾಪ್ ಗೌಡ (35) ಪ್ರಕರಣದ ಆರೋಪಿ. ಈತನ ವಿರುದ್ಧ ಈಗಾಗಲೇ ಮಂಗಳೂರಿನ ಕಾವೂರು ಠಾಣೆಯಲ್ಲಿ ಎರಡು ಪ್ರಕರಣ ಹಾಗೂ ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.
ಕ್ರಿಮಿನಲ್ ಪ್ರಕರಣಗಳಲ್ಲಿ ತೊಡಗಿಸಿರುವ ಈತನಿಗೆ ಪುತ್ತೂರು ಮೂಲದ ಜನಪ್ರತಿನಿಧಿಯೊಬ್ಬರ ಕೃಪಕಟಾಕ್ಷ ಇದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಈ ಜನಪ್ರತಿನಿಧಿಯ ಬೆಂಬಲದಿಂದಲೇ ಈತ ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು , ಉಪ ನಿರೀಕ್ಷಕರಿಗೆ ಆವಾಜ್ ಹಾಕುವ ಮಟ್ಟಕ್ಕೆ ಬೆಳೆದಿರುವುದಾಗಿ ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಫೆ.9ರಂದು ಸಂಜೆ ಗ್ರಾಮಾಂತರ ಠಾಣೆಯ ಉಪ ನಿರೀಕ್ಷಕಿ ಸುಷ್ಮಾ ಜಿ ಭಂಡಾರಿ ತಮ್ಮ ಸಿಬ್ಬಂದಿಗಳ ಜತೆ, ಸಂಪ್ಯ ಠಾಣೆ ಮುಂಭಾಗದ ಮಾಣಿ - ಮೈಸೂರು ಹೆದ್ದಾರಿಯಲ್ಲಿ ವಾಹನ ತಪಾಸಣೆಯಲ್ಲಿ ತೊಡಗಿದ್ದರು. ಈ ವೇಳೆ ಅದೇ ರಸ್ತೆಯಲ್ಲಿ ದ್ವಿಚಕ್ರ ವಾಹನ ಬಂದಿದ್ದು, ಹಿಂಬದಿ ಸವಾರ ಹೆಲ್ಮೆಟ್ ಧರಿಸಿರಲಿಲ್ಲ. ವಾಹನ ನಿಲ್ಲಿಸಿ ದಂಡ ಪಾವತಿಸುವಂತೆ ಸವಾರನಲ್ಲಿ ಪೊಲೀಸರು ತಿಳಿಸಿದ್ದರು. ಇದರಿಂದ ಸಿಟ್ಟುಗೊಂಡ ಹಿಂಬದಿ ಸವಾರ ಪ್ರತಾಪ್ ಗೌಡ ಪೊಲೀಸರ ಮೇಲೆಯೇ ಏರಿ ಹೋಗಿದ್ದಾನೆ.
ಮಹಿಳಾ ಪೊಲೀಸ್ ಅಧಿಕಾರಿಯನ್ನು ಅವಾಚ್ಯವಾಗಿ ನಿಂದಿಸಿದ್ದಲ್ಲದೆ, ಬ್ಯಾರಿಕೇಡ್ ಹಾಕಿ ವಾಹನ ತಪಾಸಣೆ ಮಾಡಲು ನಿಮಗೆ ಅಧಿಕಾರ ಕೊಟ್ಟವರು ಯಾರು? ನೀವು ಜನರಿಗೆ ಹೇಗೆ ಕೇಸ್ ಹಾಕುತ್ತೀರಿ.. ನಿಮ್ಮನ್ನು ನೋಡಿಕೊಳ್ಳುವುದಾಗಿ ಸವಾಲು ಹಾಕಿದ್ದು ಮುಷ್ಟಿ ತೋರಿಸಿ ಹಲ್ಲೆ ಮಾಡಲು ಮುಂದಾಗಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿ ವಿರುದ್ದ ಬಿಎನ್ ಎಸ್ ಸೆಕ್ಷನ್ 132ರಂತೆ ಪ್ರಕರಣ ದಾಖಲಿಸಲಾಗಿದೆ.
Puttur Police Women PSI abused for stopping two wheeler, case filed. Case has been filed against Pratap Gowda for his indicent behaviour with the police personal.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm