ಬ್ರೇಕಿಂಗ್ ನ್ಯೂಸ್
15-02-25 04:59 pm Mangalore Correspondent ಕರಾವಳಿ
ಮಂಗಳೂರು, ಫೆ.15: ಬಿಜೆಪಿಗರ ರಾಜಕೀಯ ಮೇಲಾಟದಲ್ಲಿ ಒಮ್ಮೆ ಉದ್ಘಾಟನೆಯಾಗಿದ್ದ ನಗರದ ಜಪ್ಪಿನಮೊಗರಿನ ಹೊಸ ಆರೋಗ್ಯ ಕೇಂದ್ರವನ್ನು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತೆ ಉದ್ಘಾಟನೆ ಮಾಡಿದ್ದಾರೆ. ಇದೇ ವೇಳೆ, ಸಚಿವರು ಬಿಜೆಪಿ ನಾಯಕರು ಡರ್ಟಿ ಪಾಲಿಟಿಕ್ಸ್ ಮಾಡಿದ್ದಾರೆ. ರಾಜಕೀಯ ವಾತಾವರಣ ಕೆಡಿಸುವ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಉದ್ಘಾಟನೆ ಕಾರ್ಯಕ್ರಮದ ಬಳಿಕ ಸಮಾರಂಭದಲ್ಲಿ ಮಾತನಾಡಿದ ಸಚಿವ ಗುಂಡೂರಾವ್, ನೇರವಾಗಿ ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಕಿಡಿಕಾರಿದರು. ಇವರು ಚೀಪ್ ರಾಜಕೀಯ ಮಾಡುತ್ತಿದ್ದಾರೆ. ನಾವು ಎಲ್ಲರನ್ನು ಕರೆದು ಬೆಂಗಳೂರಿನಲ್ಲಿ ಇನ್ವೆಸ್ಟ್ ಕರ್ನಾಟಕ ಮಾಡಿಲ್ವಾ.. ಅಭಿವೃದ್ಧಿ ವಿಚಾರದಲ್ಲಿ ಈ ರೀತಿ ಡರ್ಟಿ ರಾಜಕೀಯ ಮಾಡೋದಾ.. ಇವರು ತಮ್ಮ ಸ್ವಂತ ದುಡ್ಡಿನಲ್ಲಿ ಮಾಡಿದ್ದಲ್ಲ, ಇವರದೇ ಹಣ, ಭೂಮಿ ಆಗಿರುತ್ತಿದ್ದರೆ ಕೇಳುತ್ತಿರಲಿಲ್ಲ. ನಾನೇನು ವರ್ಷಕ್ಕೊಮ್ಮೆ ಬರುವ ಉಸ್ತುವಾರಿ ಅಲ್ಲ, ತಿಂಗಳಲ್ಲಿ 2-3 ಬಾರಿ ಮಂಗಳೂರಿಗೆ ಬರುತ್ತೇನೆ. ಒಂದು ಫೋನ್ ಮಾಡಬಹುದಿತ್ತಲ್ವಾ.. ಶಾಸಕನ ನಡೆಯಿಂದ ಮುಜುಗರ ಸೃಷ್ಟಿ ಆಗಿದೆ ಎಂದು ಹೇಳಿದರು.




ಉದ್ಘಾಟನೆಯನ್ನು ಸೂಚಿಸುವ ಕಲ್ಲಿನಲ್ಲೂ ಇವರದೇ ಹೆಸರು ಹಾಕಿದ್ದಾರೆ. ಇಷ್ಟೆಲ್ಲ ಆಗುವಾಗ ಅಧಿಕಾರಿಗಳು ಸುಮ್ಮನಿದ್ರಾ.. ಏನೂ ಗೊತ್ತೇ ಆಗಲಿಲ್ವಾ.. ಯಾಕೆ ನನ್ನ ಗಮನಕ್ಕೆ ತಂದಿಲ್ಲ. ಇದಕ್ಕೆ ಯಾರು ಕಾರಣ ಅಂತ ವರದಿ ಕೊಡಬೇಕು ಎಂದು ವೇದಿಕೆಯಲ್ಲಿದ್ದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗೆ ಸೂಚನೆ ನೀಡಿದರು. ಎಂಎಲ್ಸಿ ಐವಾನ್ ಡಿಸೋಜ, ಇಲ್ಲಿನ ಬಿಜೆಪಿ ಶಾಸಕರು ರಾಜಕೀಯದ ಸಣ್ಣತನ ತೋರಿಸಿದ್ದಾರೆ. ಇವತ್ತು ಕೂಡ ನಮ್ಮ ಶಾಸಕರು ಕಾರ್ಯಕ್ರಮಕ್ಕೆ ಬಂದಿಲ್ಲ, ಇದೇನಾ ಇವರು ಸರ್ಕಾರಿ ಕಾರ್ಯಕ್ರಮಕ್ಕೆ ಕೊಡುವ ಗೌರವ ಎಂದು ಪ್ರಶ್ನಿಸಿದರು.
Mangalore Inauguration of development works in Mangaladevi ward, minister Dinesh Gundurao slams Vedavyas Kamath. He said its a cheap politics by BJP to inaugurate the building without my knowledge. He also has instructed chief secretaries to take action against officials who violated the protocol during the inauguration of development works in Mangaladevi ward of the MCC.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm