ಬ್ರೇಕಿಂಗ್ ನ್ಯೂಸ್
15-02-25 11:01 pm Mangalore Correspondent ಕರಾವಳಿ
ಉಳ್ಳಾಲ, ಫೆ.15: ಹಿಂದೂ ಸಮಾಜದ ಐಕ್ಯತೆ, ಲೋಕ ಕಲ್ಯಾಣಾರ್ಥವಾಗಿ ಮಂಗಳೂರು ವಿಶ್ವ ಹಿಂದೂ ಪರಿಷತ್ ವತಿಯಿಂದ "ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ" ಬೃಹತ್ ಪಾದಯಾತ್ರೆಯನ್ನು ಇದೇ ಮಾರ್ಚ್ 9ರ ಆದಿತ್ಯವಾರ ಬೆಳಗ್ಗೆ 6 ಗಂಟೆಗೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಿಂದ ಕುತ್ತಾರು ಕೊರಗಜ್ಜನ ಆದಿಕ್ಷೇತ್ರಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ವಿಹಿಂಪ ಜಿಲ್ಲಾ ಸಂಪರ್ಕ ಪ್ರಮುಖ್ ಪ್ರವೀಣ್ ಕುತ್ತಾರು ಹೇಳಿದರು.
ಕುತ್ತಾರು ಕೊರಗಜ್ಜನ ಆದಿ ಕ್ಷೇತ್ರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕಳೆದ ನಾಲ್ಕು ವರ್ಷಗಳ ಹಿಂದೆ ಜಿಲ್ಲೆಯಾದ್ಯಂತ ಹಿಂದೂ ಧರ್ಮೀಯರ ನಂಬಿಕೆಯ ಕೊರಗಜ್ಜ ಸೇರಿದಂತೆ ಇತರ ಕಾರಣಿಕ ಕ್ಷೇತ್ರಗಳ ಕಾಣಿಕೆ ಹುಂಡಿಗಳಿಗೆ ಕಿಡಿಗೇಡಿಗಳು ಕಾಂಡೋಮ್ ಗಳನ್ನ ಹಾಕಿ ಅಪವಿತ್ರಗೊಳಿಸಿ ವಿಕೃತಿ ಮೆರೆದಿದ್ದರು. ವಿಕೃತಿ ಮೆರೆದಿದ್ದ ಕಿಡಿಗೇಡಿಗಳಿಗೆ ಕೊರಗಜ್ಜ ದೈವವೇ ಶಿಕ್ಷೆ ನೀಡುವಂತೆ ಸಂಕಲ್ಪ ನಡೆಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಸಹಸ್ರಾರು ಸಂಖ್ಯೆಯ ಭಕ್ತರು ಮಂಗಳೂರಿನ ಕದ್ರಿ ಮಂಜುನಾಥ ಕ್ಷೇತ್ರದಿಂದ ಕೊರಗಜ್ಜನ ಆದಿ ಕ್ಷೇತ್ರಕ್ಕೆ ಪಾದಯಾತ್ರೆ ನಡೆಸಿದ್ದರು. ಪಾದಯಾತ್ರೆ ನಡೆಸಿದ ಹತ್ತೇ ದಿವಸಗಳಲ್ಲಿ ಪವಾಡವೆಂಬಂತೆ ಹಿಂದೂ ಧಾರ್ಮಿಕ ಕ್ಷೇತ್ರಗಳನ್ನ ಮಲಿನಗೊಳಿಸಿದ್ದ ಕಿಡಿಗೇಡಿಗಳು ಸಿಕ್ಕಿ ಬಿದ್ದು ಜೈಲು ಪಾಲಾಗಿದ್ದರು. ದೈವ, ದೇವರುಗಳಿಗೆ ಅಪಚಾರ ಎಸಗಿದ್ದ ಕಿಡಿಗೇಡಿಗಳಲ್ಲಿ ಕೆಲವರು ಸತ್ತರೆ, ಮತ್ತೆ ಕೆಲವರು ಅನಾರೋಗ್ಯ ಪೀಡಿತರಾಗಿದ್ದಾರೆ.
ಈ ಬಾರಿ ಕೊರಗಜ್ಜನ ಆದಿ ಕ್ಷೇತ್ರಕ್ಕೆ ಐದನೇ ವರ್ಷದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಪಾದಯಾತ್ರೆ ಸಾಗಿ ಬರುವ ರಸ್ತೆಯ ನಿಗದಿತ ಪ್ರದೇಶಗಳಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ, ತಂಪು ಪಾನೀಯ, ಲಘು ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಪಾದಯಾತ್ರೆ ನಡೆಸಿ ದನಿದ ಭಕ್ತಾದಿಗಳೆಲ್ಲರಿಗೂ ಕುತ್ತಾರು ಕೊರಗಜ್ಜನ ಕ್ಷೇತ್ರದ ಬಳಿ ಬಿಸಿ ಗಂಜಿ ಊಟದ ವ್ಯವಸ್ಥೆ ಮಾಡಲಾಗಿದೆ.
ಕೊರಗಜ್ಜನ ಕ್ಷೇತ್ರದ ಬಳಿ ನಡೆಯಲಿರುವ ಪಾದಯಾತ್ರೆ ಸಮಾರೋಪದ ಧಾರ್ಮಿಕ ಸಭೆಯಲ್ಲಿ ಖ್ಯಾತ ಅಂಕಣಕಾರ, ಚಿಂತಕ ಚಕ್ರವರ್ತಿ ಸೂಲಿಬೆಲೆಯವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಬೃಹತ್ ಪಾದಯಾತ್ರೆಯಲ್ಲಿ 25,000ಕ್ಕೂ ಮಿಕ್ಕಿದ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ. ಧಾರ್ಮಿಕ ಸಭೆಯ ಬಳಿಕ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಹಾಗೂ ತಂಡದಿಂದ "ಶ್ರೀ ಸ್ವಾಮಿ ಕೊರಗಜ್ಜ" ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದರು.
ಕುತ್ತಾರು ಕೊರಗಜ್ಜನ ಆದಿ ಕ್ಷೇತ್ರದ ಟ್ರಸ್ಟಿ ದೇವಿಪ್ರಸಾದ್ ಶೆಟ್ಟಿ, ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
5th year padayatra to koragajja adisthala kuthar in Mangalore. Chakravarti Sulibele will also be a part of this event.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm