ಬ್ರೇಕಿಂಗ್ ನ್ಯೂಸ್
09-08-20 09:53 am Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 9: ಪುತ್ತೂರಿನ ಬಿರುಮಲೆ ಗುಡ್ಡೆಯಲ್ಲಿ ಅನ್ಯಕೋಮಿನ ಯುವಕರೊಂದಿಗೆ ಮಂಗಳೂರಿನ ಯುವತಿ ಸಿಕ್ಕಿಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಯುವಕರು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಎರಡು ದಿನ ಕೂಡಿಹಾಕಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರಿನ ಕೊಡಿಯಾಲ್ ಬೈಲಿನ 17 ವರ್ಷದ ಯುವತಿಯನ್ನು ಆರೋಪಿ ಯುವಕರು ಸೇರಿ ಅಪಹರಿಸಿದ ಬಗ್ಗೆ ಆಕೆಯ ತಂದೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧಿಸಿ ಪೊಲೀಸರು ಮಹಮ್ಮದ್ ನಯೀಮ್, ಮಹಮ್ಮದ್ ತಾಸೀರ್, ಇಮ್ರಾನ್ ಎಂದು ಮೂವರನ್ನು ಬಂಧಿಸಿದ್ದು ಉಳಿದವರ ಬಂಧನಕ್ಕೆ ಬಲೆಬೀಸಿದ್ದಾರೆ.
ಯುವತಿಯ ತಂದೆಯ ದೂರಿನ ಪ್ರಕಾರ, 17 ವರ್ಷದ ಬಾಲಕಿ ಆಗಸ್ಟ್ 7ರಂದು ಸಂಜೆ 7 ಗಂಟೆಗೆ ತನ್ನ ಮನೆಯಿಂದ ಮಂಗಳೂರಿನ ಎಂಪಾಯರ್ ಮಾಲ್ ಗೆ ಹೋಗಿ ಬರುತ್ತೇನೆಂದು ಹೋದವಳು ರಾತ್ರಿಯಾದರೂ ಮನೆಗೆ ಬಂದಿಲ್ಲ. ಎಲ್ಲೆಡೆ ವಿಚಾರಿಸಿ ಹುಡುಕಿದರೂ ಮಗಳು ಪತ್ತೆಯಾಗಿಲ್ಲ. ಮಗಳ ಹುಡುಕಾಟದಲ್ಲಿ ಇರುವಾಗಲೇ ಆಕೆ ಪುತ್ತೂರಿನ ಬೀರಮಲೆ ಗುಡ್ಡೆಯಲ್ಲಿ ಇರುವುದಾಗಿ ಆಗಸ್ಟ್ 08 ರಂದು ಬೆಳಗ್ಗೆ ಗೊತ್ತಾಗಿದೆ. ಅದರಂತೆ ಮಧ್ಯಾಹ್ನ ಪುತ್ತೂರಿನ ಬೀರಮಲೆಗುಡ್ಡೆಗೆ ಬಂದು ಪರಿಶೀಲಿಸಿದಾಗ ಮಗಳು ಆರೋಪಿಗಳ ಜೊತೆ ಕಾರಿನಲ್ಲಿ (ನಂಬ್ರ ಕೆಎಲ್-57 ಪಿ-4414 ) ಪತ್ತೆಯಾಗಿದ್ದಾಳೆ ಎಂದು ಯುವತಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.
“ರಾತ್ರಿ ಬಿಜೈ ಬಳಿ ಒಂದು ಪ್ಲಾಟ್ ಗೆ ಮಗಳನ್ನು ಒತ್ತಾಯದಿಂದ ಕರೆದುಕೊಂಡು ಹೋಗಿ ಪಾರ್ಟಿ ಮಾಡಿ ರಾತ್ರಿ ಅಲ್ಲೇ ಉಳಿಸಿಕೊಂಡಿದ್ದಾರೆ. ಮರುದಿನ ಬೆಳಗ್ಗೆ 9 ಗಂಟೆಗೆ ಮಗಳು ಮನೆಗೆ ಹೋಗುತ್ತೇನೆಂದರೂ ಬಿಡದೆ ಪುತ್ತೂರಿನಲ್ಲಿ ಸ್ನೇಹಿತೆಯನ್ನು ಭೇಟಿಯಾಗಲಿದೆ ಎಂದು ಹೇಳಿ ಪುಸಲಾಯಿಸಿ ಪುತ್ತೂರಿನ ಪರ್ಲಡ್ಕ ಬಳಿಯ ಬೀರಮಲೆಗುಡ್ಡೆ ಎಂಬಲ್ಲಿಗೆ ಕರೆದುಕೊಂಡು ಹೋಗಿದ್ದಾರೆ ಎಂದು ಯುವತಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.

ಅಪ್ರಾಪ್ತೆ ಎಂದು ತಿಳಿದಿದ್ದರೂ ಲೈಂಗಿಕ ಕಿರುಕುಳ ನೀಡುವ ಉದ್ದೇಶದಿಂದಲೇ ಅಕ್ರಮವಾಗಿ ಕಾರಿನಲ್ಲಿ ಅಪಹರಿಸಿಕೊಂಡು ಪುತ್ತೂರಿನ ಬೀರಮಲೆಗುಡ್ಡೆಗೆ ಕರೆದುಕೊಂಡು ಬಂದಿದ್ದಾರೆ ಎಂದು ಅಪ್ರಾಪ್ತ ಬಾಲಕಿಯ ತಂದೆ ನೀಡಿದ ದೂರಿನಂತೆ ಪುತ್ತೂರಿನ ಮಹಿಳಾ ಠಾಣೆಯ ಪೊಲೀಸರು ಅಪಹರಣ ಹಾಗೂ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರು ಕೇರಳ ಮೂಲದ್ದಾಗಿದ್ದು ಆರೋಪಿಗಳು ಎಲ್ಲಿಯವರೆಂದು ಗೊತ್ತಾಗಿಲ್ಲ. ಆದರೆ, ಆರೋಪಿಗಳು ಬಾಲಕಿಯನ್ನು ಕಿಡ್ನಾಪ್ ಮಾಡಿ ಗ್ಯಾಂಗ್ ರೇಪ್ ಮಾಡಿದ್ದು ಲವ್ ಜಿಹಾದ್ ಗುರಿ ಇರಿಸಿಕೊಂಡೇ ಇಂಥ ಕೃತ್ಯ ನಡೆಸಿದ್ದಾರೆ ಎನ್ನಲಾಗುತ್ತಿದೆ. ಪೊಲೀಸರು ಸಮಗ್ರ ತನಿಖೆ ನಡೆಸಿದರಷ್ಟೇ ಈ ಜಾಲದ ಸತ್ಯಾಸತ್ಯತೆ ಹೊರಬಂದೀತು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm