ಬ್ರೇಕಿಂಗ್ ನ್ಯೂಸ್
16-12-20 10:42 pm Headline Karnataka News Network ಕರಾವಳಿ
ಮಂಜೇಶ್ವರ, ಡಿ.16: ಮಂಜೇಶ್ವರ ಬ್ಲಾಕ್ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಯುಡಿಎಫ್ ಸಮಬಲದ ಸಾಧನೆ ಮಾಡಿದ್ದು ಯಾರೇ ಅಧಿಕಾರ ಪಡೆಯಲು ಇತರೇ ಮಂದಿಯನ್ನು ಅವಲಂಬಿಸಬೇಕಾದ ಅನಿವಾರ್ಯತೆಗೆ ಸಿಲುಕಿವೆ.
ಯುಡಿಎಫ್ 6 ಸ್ಥಾನಗಳನ್ನು ಗೆದ್ದರೆ, ಬಿಜೆಪಿಯೂ ಅಷ್ಟೇ ಸ್ಥಾನಗಳನ್ನು ಗೆದ್ದುಕೊಂಡಿದೆ. ಬ್ಲಾಕ್ ಪಂಚಾಯತ್ ನಲ್ಲಿ ಎಲ್ ಡಿಎಫ್ ಅನ್ನು ಹಿಂದಿಕ್ಕಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಇದೇ ಮೊದಲು. ಎಲ್ ಡಿಎಫ್ ಕೇವಲ 2 ಕಡೆ ಗೆಲುವು ಪಡೆದರೆ, ಒಂದು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಗೆಲುವು ಕಂಡಿದ್ದಾರೆ. ಬಡಾಜೆ ಡಿವಿಷನ್ ನಲ್ಲಿ ಸ್ವತಂತ್ರ ಅಭ್ಯರ್ಥಿ ಗೆಲುವು ಪಡೆದಿದ್ದಾರೆ.


ಮುಳಿಗದ್ದೆ , ಪೆರ್ಮುದೆ, ಎಣ್ಮಕಜೆ, ಪೆರ್ಲ, ಮಜಿರ್ಪಳ್ಳ, ಕಡಂಬಾರು ಡಿವಿಷನ್ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇಚ್ಲಾಂಗೋಡು, ಕುಂಜತ್ತೂರು, ಬಂದ್ಯೋಡು, ನಯಾಬಝಾರ್, ಉಪ್ಪಳ, ಮಂಜೇಶ್ವರ ಡಿವಿಷನ್ನಲ್ಲಿ ಯುಡಿಎಫ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ವರ್ಕಾಡಿ ಮತ್ತು ಪುತ್ತಿಗೆ ಡಿವಿಷನ್ನಲ್ಲಿ ಎಲ್ ಡಿಎಫ್ ಗೆಲುವು ಸಾಧಿಸಿದೆ.
ಮಜೀರ್ಪಳ್ಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಈ ಹಿಂದೆ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಹರ್ಷಾದ್ ವರ್ಕಾಡಿ ಅಚ್ಚರಿಯ ಸೋಲು ಕಂಡಿದ್ದಾರೆ. ಕಳೆದ ಬಾರಿ ಅವರು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಗೆಲುವು ಕಂಡಿದ್ದರು. ಹರ್ಷಾದ್ ವಿರುದ್ಧ ಈ ಬಾರಿ ಮೀಯಪದವು ನಿವಾಸಿ, ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಕೆ.ವಿ.ರಾಧಾಕೃಷ್ಣ ಗೆಲುವು ಸಾಧಿಸಿದ್ದಾರೆ. ಕಡಂಬಾರು ಕ್ಷೇತ್ರದಲ್ಲಿ ಬಿಜೆಪಿಯ ಅಶ್ವಿನಿ ಪಜ್ವ ಗೆದ್ದಿದ್ದಾರೆ.
ಅತಿ ಹೆಚ್ಚು ಸ್ಥಾನಗಳಲ್ಲಿ ಜಯ ಕಂಡಿರುವ ಬಿಜೆಪಿ ಮಂಜೇಶ್ವರ ಬ್ಲಾಕ್ ಪಂಚಾಯತ್ ನಲ್ಲಿ ಅಧಿಕಾರ ಪಡೆಯುವತ್ತ ಮುನ್ನುಗ್ಗಿದೆ. ಆದರೆ, ಅಧಿಕಾರ ಗಳಿಸುವುದು ಮಾತ್ರ ಕಷ್ಟದ ಕೆಲಸವೇ ಸರಿ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am