ಬ್ರೇಕಿಂಗ್ ನ್ಯೂಸ್
16-12-20 10:42 pm Headline Karnataka News Network ಕರಾವಳಿ
ಮಂಜೇಶ್ವರ, ಡಿ.16: ಮಂಜೇಶ್ವರ ಬ್ಲಾಕ್ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಯುಡಿಎಫ್ ಸಮಬಲದ ಸಾಧನೆ ಮಾಡಿದ್ದು ಯಾರೇ ಅಧಿಕಾರ ಪಡೆಯಲು ಇತರೇ ಮಂದಿಯನ್ನು ಅವಲಂಬಿಸಬೇಕಾದ ಅನಿವಾರ್ಯತೆಗೆ ಸಿಲುಕಿವೆ.
ಯುಡಿಎಫ್ 6 ಸ್ಥಾನಗಳನ್ನು ಗೆದ್ದರೆ, ಬಿಜೆಪಿಯೂ ಅಷ್ಟೇ ಸ್ಥಾನಗಳನ್ನು ಗೆದ್ದುಕೊಂಡಿದೆ. ಬ್ಲಾಕ್ ಪಂಚಾಯತ್ ನಲ್ಲಿ ಎಲ್ ಡಿಎಫ್ ಅನ್ನು ಹಿಂದಿಕ್ಕಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಇದೇ ಮೊದಲು. ಎಲ್ ಡಿಎಫ್ ಕೇವಲ 2 ಕಡೆ ಗೆಲುವು ಪಡೆದರೆ, ಒಂದು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಗೆಲುವು ಕಂಡಿದ್ದಾರೆ. ಬಡಾಜೆ ಡಿವಿಷನ್ ನಲ್ಲಿ ಸ್ವತಂತ್ರ ಅಭ್ಯರ್ಥಿ ಗೆಲುವು ಪಡೆದಿದ್ದಾರೆ.


ಮುಳಿಗದ್ದೆ , ಪೆರ್ಮುದೆ, ಎಣ್ಮಕಜೆ, ಪೆರ್ಲ, ಮಜಿರ್ಪಳ್ಳ, ಕಡಂಬಾರು ಡಿವಿಷನ್ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇಚ್ಲಾಂಗೋಡು, ಕುಂಜತ್ತೂರು, ಬಂದ್ಯೋಡು, ನಯಾಬಝಾರ್, ಉಪ್ಪಳ, ಮಂಜೇಶ್ವರ ಡಿವಿಷನ್ನಲ್ಲಿ ಯುಡಿಎಫ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ವರ್ಕಾಡಿ ಮತ್ತು ಪುತ್ತಿಗೆ ಡಿವಿಷನ್ನಲ್ಲಿ ಎಲ್ ಡಿಎಫ್ ಗೆಲುವು ಸಾಧಿಸಿದೆ.
ಮಜೀರ್ಪಳ್ಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಈ ಹಿಂದೆ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಹರ್ಷಾದ್ ವರ್ಕಾಡಿ ಅಚ್ಚರಿಯ ಸೋಲು ಕಂಡಿದ್ದಾರೆ. ಕಳೆದ ಬಾರಿ ಅವರು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಗೆಲುವು ಕಂಡಿದ್ದರು. ಹರ್ಷಾದ್ ವಿರುದ್ಧ ಈ ಬಾರಿ ಮೀಯಪದವು ನಿವಾಸಿ, ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಕೆ.ವಿ.ರಾಧಾಕೃಷ್ಣ ಗೆಲುವು ಸಾಧಿಸಿದ್ದಾರೆ. ಕಡಂಬಾರು ಕ್ಷೇತ್ರದಲ್ಲಿ ಬಿಜೆಪಿಯ ಅಶ್ವಿನಿ ಪಜ್ವ ಗೆದ್ದಿದ್ದಾರೆ.
ಅತಿ ಹೆಚ್ಚು ಸ್ಥಾನಗಳಲ್ಲಿ ಜಯ ಕಂಡಿರುವ ಬಿಜೆಪಿ ಮಂಜೇಶ್ವರ ಬ್ಲಾಕ್ ಪಂಚಾಯತ್ ನಲ್ಲಿ ಅಧಿಕಾರ ಪಡೆಯುವತ್ತ ಮುನ್ನುಗ್ಗಿದೆ. ಆದರೆ, ಅಧಿಕಾರ ಗಳಿಸುವುದು ಮಾತ್ರ ಕಷ್ಟದ ಕೆಲಸವೇ ಸರಿ.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am