ಬ್ರೇಕಿಂಗ್ ನ್ಯೂಸ್
16-12-20 10:42 pm Headline Karnataka News Network ಕರಾವಳಿ
ಮಂಜೇಶ್ವರ, ಡಿ.16: ಮಂಜೇಶ್ವರ ಬ್ಲಾಕ್ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಯುಡಿಎಫ್ ಸಮಬಲದ ಸಾಧನೆ ಮಾಡಿದ್ದು ಯಾರೇ ಅಧಿಕಾರ ಪಡೆಯಲು ಇತರೇ ಮಂದಿಯನ್ನು ಅವಲಂಬಿಸಬೇಕಾದ ಅನಿವಾರ್ಯತೆಗೆ ಸಿಲುಕಿವೆ.
ಯುಡಿಎಫ್ 6 ಸ್ಥಾನಗಳನ್ನು ಗೆದ್ದರೆ, ಬಿಜೆಪಿಯೂ ಅಷ್ಟೇ ಸ್ಥಾನಗಳನ್ನು ಗೆದ್ದುಕೊಂಡಿದೆ. ಬ್ಲಾಕ್ ಪಂಚಾಯತ್ ನಲ್ಲಿ ಎಲ್ ಡಿಎಫ್ ಅನ್ನು ಹಿಂದಿಕ್ಕಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಇದೇ ಮೊದಲು. ಎಲ್ ಡಿಎಫ್ ಕೇವಲ 2 ಕಡೆ ಗೆಲುವು ಪಡೆದರೆ, ಒಂದು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಗೆಲುವು ಕಂಡಿದ್ದಾರೆ. ಬಡಾಜೆ ಡಿವಿಷನ್ ನಲ್ಲಿ ಸ್ವತಂತ್ರ ಅಭ್ಯರ್ಥಿ ಗೆಲುವು ಪಡೆದಿದ್ದಾರೆ.


ಮುಳಿಗದ್ದೆ , ಪೆರ್ಮುದೆ, ಎಣ್ಮಕಜೆ, ಪೆರ್ಲ, ಮಜಿರ್ಪಳ್ಳ, ಕಡಂಬಾರು ಡಿವಿಷನ್ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇಚ್ಲಾಂಗೋಡು, ಕುಂಜತ್ತೂರು, ಬಂದ್ಯೋಡು, ನಯಾಬಝಾರ್, ಉಪ್ಪಳ, ಮಂಜೇಶ್ವರ ಡಿವಿಷನ್ನಲ್ಲಿ ಯುಡಿಎಫ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ವರ್ಕಾಡಿ ಮತ್ತು ಪುತ್ತಿಗೆ ಡಿವಿಷನ್ನಲ್ಲಿ ಎಲ್ ಡಿಎಫ್ ಗೆಲುವು ಸಾಧಿಸಿದೆ.
ಮಜೀರ್ಪಳ್ಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಈ ಹಿಂದೆ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಹರ್ಷಾದ್ ವರ್ಕಾಡಿ ಅಚ್ಚರಿಯ ಸೋಲು ಕಂಡಿದ್ದಾರೆ. ಕಳೆದ ಬಾರಿ ಅವರು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಗೆಲುವು ಕಂಡಿದ್ದರು. ಹರ್ಷಾದ್ ವಿರುದ್ಧ ಈ ಬಾರಿ ಮೀಯಪದವು ನಿವಾಸಿ, ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಕೆ.ವಿ.ರಾಧಾಕೃಷ್ಣ ಗೆಲುವು ಸಾಧಿಸಿದ್ದಾರೆ. ಕಡಂಬಾರು ಕ್ಷೇತ್ರದಲ್ಲಿ ಬಿಜೆಪಿಯ ಅಶ್ವಿನಿ ಪಜ್ವ ಗೆದ್ದಿದ್ದಾರೆ.
ಅತಿ ಹೆಚ್ಚು ಸ್ಥಾನಗಳಲ್ಲಿ ಜಯ ಕಂಡಿರುವ ಬಿಜೆಪಿ ಮಂಜೇಶ್ವರ ಬ್ಲಾಕ್ ಪಂಚಾಯತ್ ನಲ್ಲಿ ಅಧಿಕಾರ ಪಡೆಯುವತ್ತ ಮುನ್ನುಗ್ಗಿದೆ. ಆದರೆ, ಅಧಿಕಾರ ಗಳಿಸುವುದು ಮಾತ್ರ ಕಷ್ಟದ ಕೆಲಸವೇ ಸರಿ.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm