ಬ್ರೇಕಿಂಗ್ ನ್ಯೂಸ್
23-02-25 03:20 pm Mangalore Correspondent ಕರಾವಳಿ
ಮಂಗಳೂರು, ಫೆ.23: ಪಿಕಪ್ ವಾಹನದ ಧಾವಂತಕ್ಕೆ ಹಿಂಬದಿಗೆ ಡಿಕ್ಕಿಯಾಗಿದ್ದರಿಂದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮೂವರು ಪಾದಚಾರಿಗಳ ಮೇಲೆ ಹರಿದಿದ್ದು ಓರ್ವ ಯುವಕ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿಂಧನೂರಿನ ದೀಪು ಗೌಡ(45) ಸಾವನ್ನಪ್ಪಿದ ವ್ಯಕ್ತಿ. ಘಟನೆಯಲ್ಲಿ ಕೊಪ್ಪಳ ಜಿಲ್ಲೆಯ ಕರಟಗಿಯ ಪ್ರದೀಪ್ ಕೊಲ್ಕಾರ್(35), ಮಂಗಳೂರಿನ ಕೋಡಿಕೆರೆ ನಿವಾಸಿ ನಾಗರಾಜ್(37) ಗಂಭೀರ ಗಾಯಗೊಂಡಿದ್ದಾರೆ. ಕುಳಾಯಿ ಹೆದ್ದಾರಿ ಬದಿಯ ಶಂಕರ ಭವನ ಹೋಟೆಲ್ ನಲ್ಲಿ ಮೂವರು ಊಟ ಮುಗಿಸಿಕೊಂಡು ರಾಹೆ 66 ದಾಟುತ್ತಿದ್ದಾಗ ಕಾರು ಜವರಾಯನಂತೆ ಬಂದೆರಗಿದೆ.

ಉಡುಪಿ ಕಡೆಯಿಂದ ಬಂದ KA-19-AA-0746 ನಂಬರ್ನ ಪಿಕಪ್ ವಾಹನ ಮುಂದಿನಿಂದ ಸಾಗುತ್ತಿದ್ದ ಕಾರಿನ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ರಸ್ತೆಯ ಎಡ ಬದಿಗೆ ತಳ್ಳಲ್ಪಟ್ಟು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ದೀಪು ಗೌಡ, ಪ್ರದೀಪ್ ಮತ್ತು ನಾಗರಾಜ್ ಎಂಬವರಿಗೆ ಡಿಕ್ಕಿಯಾಗಿದೆ. ಈ ವೇಳೆ, ಪ್ರದೀಪ್ ಮತ್ತು ನಾಗರಾಜ್ ರಸ್ತೆಗೆ ಎಸೆಯಲ್ಪಟ್ಟರೆ, ದೀಪು ಗೌಡ ಅವರನ್ನು ಕಾರು ತಳ್ಳಿಕೊಂಡು ಸಾಗಿದೆ. ದೀಪು ಗೌಡ ತಲೆಗೆ ಮತ್ತು ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಪ್ರದೀಪ್ ಮತ್ತು ನಾಗರಾಜ್ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಬಗ್ಗೆ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore accident at surathkal, Pickup van rams over pedestrians, two injured, 45 year old killed. The deceased dhas been identified as Deepu Gowda native of Raichur.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm