ಬ್ರೇಕಿಂಗ್ ನ್ಯೂಸ್
26-02-25 03:40 pm Mangalore Correspondent ಕರಾವಳಿ
ಮಂಗಳೂರು, ಫೆ.26 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅವಿರತ ಪ್ರಯತ್ನಕ್ಕೆ ಯಶಸ್ಸು ಲಭಿಸಿದ್ದು, ದಶಕಗಳ ಪ್ರಮುಖ ಬೇಡಿಕೆಯಾಗಿರುವ ಮಂಗಳೂರು- ಕಬಕ ಪ್ಯಾಸೆಂಜರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ ರೈಲ್ವೇ ಮಂಡಳಿ ಅನುಮೋದನೆ ನೀಡಿದೆ. ಇದರಿಂದ ಇನ್ನುಮುಂದೆ ಮಂಗಳೂರು-ಪುತ್ತೂರು- ಸುಬ್ರಹ್ಮಣ್ಯ ನಡುವೆ ಪ್ರತಿದಿನ ಸಂಚರಿಸುವ ಪ್ರಯಾಣಿಕರು ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹೋಗುವ ಯಾತ್ರಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.
ಹೊಸ ವೇಳಾಪಟ್ಟಿ ಪ್ರಕಾರ ಮಂಗಳೂರು ಸೆಂಟ್ರಲ್- ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು(56625) ಮುಂಜಾನೆ 4 ಗಂಟೆಗೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಕಬಕ-ಪುತ್ತೂರಿಗೆ ಮುಂಜಾನೆ 5.18ಕ್ಕೆ ತಲುಪಲಿದೆ. ಅಲ್ಲಿ ಅದು 2 ನಿಮಿಷ ನಿಲುಗಡೆಯಾಗಿ ಬೆಳಗ್ಗೆ 6.30ಕ್ಕೆ ಸುಬ್ರಹ್ಮಣ್ಯ ರಸ್ತೆಗೆ ಬಂದು ತಲುಪಲಿದೆ. ಅದೇ ರೀತಿ ಸುಬ್ರಹ್ಮಣ್ಯ- ಮಂಗಳೂರು(56626) ಪ್ಯಾಸೆಂಜರ್ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. ಅಲ್ಲಿ 2 ನಿಮಿಷ ನಿಲುಗಡೆಯಾಗಿ 9.30ಕ್ಕೆ ಮಂಗಳೂರು ಸೆಂಟ್ರಲ್ಗೆ ತಲುಪಲಿದೆ.

ಇನ್ನೊಂದೆಡೆ, ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು(56627) ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. ಬಳಿಕ ಎರಡು ನಿಮಿಷ ನಿಲುಗಡೆಯಾಗಿ ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ರಸ್ತೆಗೆ ತಲುಪಲಿದೆ. ಹಾಗೆಯೇ, ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್ ರೈಲು(56628) ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ ಅಲ್ಲಿ 2 ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ. ನೈಋತ್ಯ ರೈಲ್ವೆ ಹಾಗೂ ದಕ್ಷಿಣ ರೈಲ್ವೇಯು ಅನುಕೂಲತೆ ಪರಿಶೀಲಿಸಿ ಆದಷ್ಟು ಬೇಗ ಈ ರೈಲು ವಿಸ್ತರಣೆ ಸೇವೆಯನ್ನು ಆರಂಭಿಸುವಂತೆ ರೈಲ್ವೆ ಮಂಡಳಿಯು ತನ್ನ ಆದೇಶದಲ್ಲಿ ಸೂಚಿಸಿದೆ.
ಸಂತಸ ವ್ಯಕ್ತಪಡಿಸಿದ ಕ್ಯಾ. ಚೌಟ
ಈ ರೈಲು ವಿಸ್ತರಣೆಗೆ ಮಂಜೂರಾತಿ ಲಭಿಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಂಗಳೂರು ಸೆಂಟ್ರಲ್ -ಕಬಕ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದ ವರೆಗೆ ವಿಸ್ತರಿಸಿರುವುದಕ್ಕೆ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಖ್ಯಾತೆ ಸಚಿವರಾದ ವಿ. ಸೋಮಣ್ಣ ಹಾಗೂ ರೈಲ್ವೆ ಮಂಡಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ಮಂಗಳೂರು- ಪುತ್ತೂರು ಪ್ಯಾಸೆಂಜರ್ ರೈಲು ಸೇವೆಯನ್ನು ಯಾತ್ರಾರ್ಥಿಗಳು ಹಾಗೂ ಸ್ಥಳೀಯ ಜನರು- ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸುಬ್ರಹ್ಮಣ್ಯ ರಸ್ತೆ ಸ್ಟೇಷನ್ಗೆ ವಿಸ್ತರಿಸಬೇಕೆಂಬುದು ಸುಮಾರು ಎರಡು ದಶಕಗಳ ಬೇಡಿಕೆಯಾಗಿತ್ತು. ಸಂಸದನಾದ ಬಳಿಕ ನಡೆದ ಸಂಸತ್ತಿನ ಮೊದಲ ಅಧಿವೇಶನದಲ್ಲೇ ಈ ರೈಲು ವಿಸ್ತರಣೆ ಬೇಡಿಕೆಯನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿ ರೈಲ್ವೆ ಸಚಿವರ ಗಮನಸೆಳೆದಿದ್ದೆ. ಇತ್ತೀಚೆಗಷ್ಟೇ ರೈಲ್ವೆ ಮಂಡಳಿ ಅಧ್ಯಕ್ಷರನ್ನು ಖುದ್ದು ಭೇಟಿಯಾಗಿ ಈ ಪ್ಯಾಸೆಂಜರ್ ರೈಲನ್ನು ಆದಷ್ಟು ಬೇಗ ಸುಬ್ರಹ್ಮಣ್ಯದ ವರೆಗೆ ವಿಸ್ತರಿಸಬೇಕೆಂದು ಮನವಿ ಸಲ್ಲಿಸಿದ್ದೆ. ಇದೀಗ ಕರಾವಳಿ ರೈಲ್ವೇ ಯಾತ್ರಿಕರಿಗೆ ಅನುಕೂಲವಾಗುವಂತೆ ಮಂಗಳೂರು- ಕಬಕ ಪುತ್ತೂರು ಪ್ಯಾಸೆಂಜರ್ ಟ್ರೈನ್ ಅನ್ನು ಸುಬ್ರಹ್ಮಣ್ಯ ರಸ್ತೆ ವರೆಗೆ ವಿಸ್ತರಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಕೂಡ ರೈಲ್ವೇ ಮಂಡಳಿ ಪ್ರಕಟಿಸಿರುವುದು ನಮ್ಮ ಜಿಲ್ಲೆಯ ಜನತೆ ಹಾಗೂ ಸಂಸದನ ನೆಲೆಯಲ್ಲಿ ನಮ್ಮೆಲ್ಲರ ಸಾಂಘಿಕ ಪ್ರಯತ್ನಕ್ಕೆ ಸಂದ ಜಯ ಎಂದು ಕ್ಯಾ. ಚೌಟ ಹೇಳಿದ್ದಾರೆ.
With the relentless efforts of Dakshina Kannada MP Capt Brijesh Chowta, the Railway Board has approved the extension of the Mangaluru-Kabaka Passenger train service to Subrahmanya— a long-standing demand spanning decades.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm