ಬ್ರೇಕಿಂಗ್ ನ್ಯೂಸ್
26-02-25 10:15 pm Mangalore Correspondent ಕರಾವಳಿ
ಮಂಗಳೂರು, ಫೆ.26: ಎರಡು ದಿನಗಳ ಹಿಂದೆ ಫೆ.24ರಂದು ಕುತ್ತಾರಿನಲ್ಲಿ ಕೆಲಸ ಇದೆಯೆಂದು ಹೇಳಿ ಕೋಣಾಜೆ ಗ್ರಾಮದ ತನ್ನ ಮನೆಯಿಂದ ತೆರಳಿದ್ದ ಮಹಮ್ಮದ್ ಆಸಿಫ್ (38) ಎಂಬವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಕೋಣಾಜೆ ಠಾಣೆಗೆ ದೂರು ನೀಡಲಾಗಿದೆ.
ಮಹಮ್ಮದ್ ಆಸಿಫ್ ಈ ಹಿಂದೆ ಮೂರು ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯ ಸಿದ್ಲಿಪುರ ಎಂಬಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು. ಎಂಟು ತಿಂಗಳ ಹಿಂದೆ ಇವರಿಗೆ ಮದುವೆಯಾಗಿತ್ತು. ಶಿವಮೊಗ್ಗದಲ್ಲಿ ಮಂಗಳೂರು ಮೂಲದ ಅಬ್ದುಲ್ ಅಜೀಜ್ ಎಂಬವರಿಗೆ ಸೇರಿದ ಕೆಐ ಕನೆಕ್ಷನ್ ಎಂಬವರ ಕಂಪನಿಯಲ್ಲಿ ಕಟ್ಟಡ ಕೆಲಸ ಮಾಡಿಕೊಂಡಿದ್ದರು. ಇತ್ತೀಚೆಗೆ ಇವರಿಗೆ ಮದುವೆಯಾಗಿ ಅಲ್ಲಿ ಹೋಗಿ ಬರುವುದಕ್ಕೆ ಸಮಸ್ಯೆ ಆಗಿದ್ದರಿಂದ ಕುತ್ತಾರಿನಲ್ಲಿ ಇದೇ ಕಂಪನಿಯ ಕಟ್ಟಡ ಕೆಲಸ ಇದ್ದುದರಿಂದ ಅಲ್ಲಿ ದುಡಿಯುವುದಕ್ಕೆ ಸೂಚಿಸಲಾಗಿತ್ತು.
ಅದರಂತೆ, ಹತ್ತು ದಿನಗಳಿಂದ ಕುತ್ತಾರಿನಲ್ಲಿ ಕೆಲಸಕ್ಕೆ ಹೋಗಿ ಬರುತ್ತಿದ್ದರು. ಆದರೆ ಫೆ.24ರಂದು ಬೆಳಗ್ಗೆ ಕುತ್ತಾರಿಗೆ ಕೆಲಸಕ್ಕೆಂದು ತೆರಳಿದವರು ಮರಳಿ ಬಂದಿಲ್ಲ. ಹೀಗಾಗಿ ಈತನ ತಮ್ಮ ಕೋಣಾಜೆ ಠಾಣೆಗೆ ಬಂದು ನಾಪತ್ತೆ ದೂರು ನೀಡಿದ್ದಾರೆ. ಪೊಲೀಸರು ಮೊಬೈಲ್ ಲೊಕೇಶನ್ ನೋಡಿದಾಗ, ಕೊನೆಯ ಬಾರಿಗೆ ಶಿವಮೊಗ್ಗದಲ್ಲಿ ಕಾಣಿಸಿದ್ದು ಆನಂತರ ಸ್ವಿಚ್ ಆಫ್ ಆಗಿದೆ. ಹೀಗಾಗಿ ಯಾರಾದರೂ ಮಹಮ್ಮದ್ ಆಸಿಫ್ ನನ್ನು ನೋಡಿದರೆ 0824-2220800, 220536 ಅಥವಾ 9480802350 ನಂಬರಿಗೆ ಕರೆ ಮಾಡಿ ತಿಳಿಸಲು ಕೋಣಾಜೆ ಪೊಲೀಸರು ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ
ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ (17) ನಾಪತ್ತೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿ. ಫೆ.25ರಂದು ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ದೇವಸ್ಥಾನಕ್ಕೂ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ. ಬಳಿಕ ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ರೈಲ್ವೇ ಹಳಿಯಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
The Mangalore Police are seeking public assistance in locating two missing individuals: Mohammad Asif (38 years old) - Last seen in Konaje. Diganth (17 years old) - A student pursuing his PUC, last seen in Farangipete.
If you have any information regarding their whereabouts, please contact the authorities.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm