ಬ್ರೇಕಿಂಗ್ ನ್ಯೂಸ್
27-02-25 03:11 pm Mangalore Correspondent ಕರಾವಳಿ
ಬಂಟ್ವಾಳ, ಫೆ.27 : ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ, ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ ಎರಡು ದಿನ ಕಳೆದರೂ ಆತನ ಬಗ್ಗೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆಂದು ಸ್ಥಳೀಯ ಗ್ರಾಮಸ್ಥರು ಫರಂಗಿಪೇಟೆ ಪೊಲೀಸ್ ಹೊರ ಠಾಣೆಗೆ ಗುರುವಾರ ಬೆಳಗ್ಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಈ ಸಂದರ್ಭ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ ಪ್ರತಿಭಟನಕಾರರು ಮುಂದಿನ 24 ಗಂಟೆಯ ಒಳಗಾಗಿ ಬಾಲಕನನ್ನು ಪತ್ತೆ ಮಾಡಬೇಕು, ತಪ್ಪಿದ್ದಲ್ಲಿ ಮತ್ತೆ ಪ್ರತಿಭಟನೆ ನಡೆಸುತ್ತೇವೆ, ಶನಿವಾರ ಫರಂಗಿಪೇಟೆ ಬಂದ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಎಡಿಷನಲ್ ಎಸ್ಪಿ ರಾಜೇಂದ್ರ ಅವರ ಜೊತೆ ಪ್ರತಿಭಟನಕಾರರು ಮಾತುಕತೆ ನಡೆಸಿದರು.



ಬಳಿಕ ಫರಂಗಿಪೇಟೆಯ ಆಂಜನೇಯ ದೇವಸ್ಥಾನದಲ್ಲಿ ಗ್ರಾಮಸ್ಥರು ಸಭೆ ನಡೆಸಿ ಮಾ.1 ರಂದು ಶನಿವಾರ ಬೆಳಗ್ಗಿನಿಂದ ಫರಂಗಿಪೇಟೆಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಗೊಳಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಲಾಯಿತು. ಈ ಪ್ರತಿಭಟನೆ ಯಶಸ್ವಿಯಾಗಲು ಎಲ್ಲಾ ಸಂಘ ಸಂಸ್ಥೆಗಳು, ಸ್ಥಳೀಯ ಆರು ಗ್ರಾಮಗಳ ಗ್ರಾಮಸ್ಥರು, ವ್ಯಾಪಾರಿಗಳು, ಸಹಕಾರ ನೀಡುವಂತೆ ಕೋರಿದರು.
ಈ ಸಂದರ್ಭ ಹಿಂದು ಸಂಘಟನೆಗಳ ಪ್ರಮುಖರಾದ ಭರತ್ ಕುಮ್ಡೇಲು, ಉಮೇಶ್ ಶೆಟ್ಟಿ ಬರ್ಕೆ, ಪ್ರಸಾದ್ ಕುಮಾರ್, ಮನೋಜ್ ಆಚಾರ್ಯ ನಾಣ್ಯ, ಪದ್ಮನಾಭ ಶೆಟ್ಟಿ ಕಿದೆಬೆಟ್ಟು, ಧನರಾಜ್, ಚಂದ್ರಶೇಖರ ಗಾಂಭೀರ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರಿನ ಕಪಿತಾನಿಯೋ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ದಿಗಂತ್(17) ಫೆ.25ರಂದು ಸಂಜೆ ಆಂಜನೇಯ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಬಳಿಕ ನಾಪತ್ತೆಯಾಗಿದ್ದ. ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ಮನೆ ಸಮೀಪದ ರೈಲ್ವೇ ಹಳಿಯಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಪೊಲೀಸರು ಬಾಲಕನ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಪೊಲೀಸ್ ಹೊರ ಠಾಣೆಗೆ ಸ್ಥಳೀಯರು ಮುತ್ತಿಗೆ ಹಾಕಿದ್ದಾರೆ.
Mangalore PUC student missing from Farangipete, residents protest over negligence of police. A 17-year-old student from Farangipete, studying in the second year of a pre-university college in Mangaluru, has gone missing.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm