ಬ್ರೇಕಿಂಗ್ ನ್ಯೂಸ್
27-02-25 03:11 pm Mangalore Correspondent ಕರಾವಳಿ
ಬಂಟ್ವಾಳ, ಫೆ.27 : ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ, ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ ಎರಡು ದಿನ ಕಳೆದರೂ ಆತನ ಬಗ್ಗೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆಂದು ಸ್ಥಳೀಯ ಗ್ರಾಮಸ್ಥರು ಫರಂಗಿಪೇಟೆ ಪೊಲೀಸ್ ಹೊರ ಠಾಣೆಗೆ ಗುರುವಾರ ಬೆಳಗ್ಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಈ ಸಂದರ್ಭ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ ಪ್ರತಿಭಟನಕಾರರು ಮುಂದಿನ 24 ಗಂಟೆಯ ಒಳಗಾಗಿ ಬಾಲಕನನ್ನು ಪತ್ತೆ ಮಾಡಬೇಕು, ತಪ್ಪಿದ್ದಲ್ಲಿ ಮತ್ತೆ ಪ್ರತಿಭಟನೆ ನಡೆಸುತ್ತೇವೆ, ಶನಿವಾರ ಫರಂಗಿಪೇಟೆ ಬಂದ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಎಡಿಷನಲ್ ಎಸ್ಪಿ ರಾಜೇಂದ್ರ ಅವರ ಜೊತೆ ಪ್ರತಿಭಟನಕಾರರು ಮಾತುಕತೆ ನಡೆಸಿದರು.



ಬಳಿಕ ಫರಂಗಿಪೇಟೆಯ ಆಂಜನೇಯ ದೇವಸ್ಥಾನದಲ್ಲಿ ಗ್ರಾಮಸ್ಥರು ಸಭೆ ನಡೆಸಿ ಮಾ.1 ರಂದು ಶನಿವಾರ ಬೆಳಗ್ಗಿನಿಂದ ಫರಂಗಿಪೇಟೆಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಗೊಳಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಲಾಯಿತು. ಈ ಪ್ರತಿಭಟನೆ ಯಶಸ್ವಿಯಾಗಲು ಎಲ್ಲಾ ಸಂಘ ಸಂಸ್ಥೆಗಳು, ಸ್ಥಳೀಯ ಆರು ಗ್ರಾಮಗಳ ಗ್ರಾಮಸ್ಥರು, ವ್ಯಾಪಾರಿಗಳು, ಸಹಕಾರ ನೀಡುವಂತೆ ಕೋರಿದರು.
ಈ ಸಂದರ್ಭ ಹಿಂದು ಸಂಘಟನೆಗಳ ಪ್ರಮುಖರಾದ ಭರತ್ ಕುಮ್ಡೇಲು, ಉಮೇಶ್ ಶೆಟ್ಟಿ ಬರ್ಕೆ, ಪ್ರಸಾದ್ ಕುಮಾರ್, ಮನೋಜ್ ಆಚಾರ್ಯ ನಾಣ್ಯ, ಪದ್ಮನಾಭ ಶೆಟ್ಟಿ ಕಿದೆಬೆಟ್ಟು, ಧನರಾಜ್, ಚಂದ್ರಶೇಖರ ಗಾಂಭೀರ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರಿನ ಕಪಿತಾನಿಯೋ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ದಿಗಂತ್(17) ಫೆ.25ರಂದು ಸಂಜೆ ಆಂಜನೇಯ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಬಳಿಕ ನಾಪತ್ತೆಯಾಗಿದ್ದ. ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ಮನೆ ಸಮೀಪದ ರೈಲ್ವೇ ಹಳಿಯಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಪೊಲೀಸರು ಬಾಲಕನ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಪೊಲೀಸ್ ಹೊರ ಠಾಣೆಗೆ ಸ್ಥಳೀಯರು ಮುತ್ತಿಗೆ ಹಾಕಿದ್ದಾರೆ.
Mangalore PUC student missing from Farangipete, residents protest over negligence of police. A 17-year-old student from Farangipete, studying in the second year of a pre-university college in Mangaluru, has gone missing.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm