ಬ್ರೇಕಿಂಗ್ ನ್ಯೂಸ್
28-02-25 06:13 pm Mangalore Correspondent ಕರಾವಳಿ
ಮಂಗಳೂರು, ಫೆ.28: ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ ಎರಡು ದಿನ ಕಳೆದರೂ ಪತ್ತೆಯಾಗಿಲ್ಲ. ಫರಂಗಿಪೇಟೆಯ ಸುತ್ತಮುತ್ತ ಡ್ರಗ್ಸ್, ಗಾಂಜಾ ವ್ಯಸನಿಗಳ ಒಂದು ದೊಡ್ಡ ತಂಡ ಇದೆ ಎಂಬುದು ಅಲ್ಲಿಯ ಅಕ್ಕಪಕ್ಕದ ಜನ ಮಾತನಾಡುತ್ತಿ ದ್ದಾರೆ. ಆದ್ದರಿಂದ ಈ ನಾಪತ್ತೆಯ ಹಿಂದೆ ಹಲವು ಸಂಶಯಗಳು ವ್ಯಕ್ತವಾಗುತ್ತಿದ್ದು ಇದರ ಹಿಂದೆ ಗಾಂಜಾ ವ್ಯಸನಿಗಳ ತಂಡದ ಕೈವಾಡ ಇರಬಹುದು ಎಂಬ ಸಂಶಯವನ್ನು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿ ನಾಪತ್ತೆ ಹಿನ್ನೆಲೆಯಲ್ಲಿ ಹಿಂದು ಸಂಘಟನೆ ಪ್ರಮುಖರ ನಿಯೋಗ, ದಿಗಂತ್ ಮನೆಗೆ ಭೇಟಿ ನೀಡಿ ಗಾಬರಿಗೊಂಡ ಮನೆಯವರಿಗೆ ಸಾಂತ್ವನ ಹೇಳಿತು. ಇದೇ ವೇಳೆ, ದಿಗಂತ್ ನಾಪತ್ತೆಯಾದ ಸಂದರ್ಭ ಮತ್ತು ಅದರ ಹಿಂದಿನ ಘಟನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.


ದಿಗಂತ್ ನಾಪತ್ತೆಯಾದ ಸಮಯದಲ್ಲಿ ಅಪರಿಚಿತ ಕ್ವಾಲಿಸ್ ಕಾರು ಆ ಜಾಗದಲ್ಲಿ ಓಡಾಡಿದ್ದು ಫರಂಗಿಪೇಟೆಯ ಆಂಜನೇಯ ದೇವಸ್ಥಾನದ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಆ ಕಾರು ಯಾರದ್ದು ಮತ್ತು ಅದರಲ್ಲಿ ವಿದ್ಯಾರ್ಥಿಯನ್ನು ಅಪಹರಿಸಲಾಗಿದೆಯೇ ಎಂಬ ಬಗ್ಗೆ ತನಿಖೆ ಮಾಡಬೇಕು. ನಾಪತ್ತೆಯಾದ ವಿದ್ಯಾರ್ಥಿಯನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶ್ವ ಹಿಂದೂ ಪರಿಷದ್ ಆಗ್ರಹಿಸುತ್ತದೆ. ದೇವಸ್ಥಾನಕ್ಕೆಂದು ಹೊರಟವನು ಮನೆಗೆ ಹಿಂದಿರುಗದಿರುವುದರಿಂದ ಮನೆಯವರೆಲ್ಲರೂ ಗಾಬರಿಗೊಂಡಿದ್ದಾರೆ. ಮನೆಯವರ ಪ್ರಶ್ನೆಗಳಿಗೆ ಪೊಲೀಸರು ಉತ್ತರ ನೀಡಬೇಕಾಗಿದೆ ಎಂದು ಶರಣ್ ಪಂಪವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Hindu activist Sharan Pumpwell visits residence of missing student at Farangipete in Mangalore. Hindu organization leader Sharan Pumpwell visited the residence of missing student Diganth at Kidebettu, Farangipete, on Friday, February 28. Diganth, a student, went missing on the evening of Tuesday, February 25, after leaving home to visit a temple.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm