ಬ್ರೇಕಿಂಗ್ ನ್ಯೂಸ್
02-03-25 11:01 pm Mangalore Correspondent ಕರಾವಳಿ
ಪುತ್ತೂರು, ಮಾ.2 : ಕೆಎಸ್ ಆರ್ ಟಿಸಿ ಬಸ್ ಬರುತ್ತಿದ್ದಾಗ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದು ರಿಕ್ಷಾದಲ್ಲಿದ್ದ ತಾಯಿ, ಮಗು ಮೃತಪಟ್ಟ ದಾರುಣ ಘಟನೆ ಪುತ್ತೂರು ಪೇಟೆ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದಿದೆ.
ಮೃತರನ್ನು ಕೆದಂಬಾಡಿ ನಿವಾಸಿಗಳಾದ ಜಮೀಲ(49) ಹಾಗೂ ತಪ್ಸಿಬ್(5) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಪುತ್ತೂರಿನತ್ತ ವೇಗವಾಗಿ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ಡಿಕ್ಕಿಯಾಗಿದೆ. ಡಿಕ್ಕಿಯಾದ ದೃಶ್ಯ ಸ್ಥಳೀಯ ಕಟ್ಟಡದ ಸಿಸಿಟಿವಿಯಲ್ಲಿ ದಾಖಲಾಗಿದ್ದು ಆಟೋ ನೇರವಾಗಿ ರಸ್ತೆ ನಡುವೆ ಬಂದಿದ್ದು ಬಸ್ಸನ್ನು ನೋಡಿ ತಪ್ಪಿಸಲೆಂದು ಹೋದಾಗ ಪಲ್ಟಿಯಾಗಿದೆ.

ಕೆದಂಬಾಡಿ ಗ್ರಾಮದ ನಿವಾಸಿ ಆಟೋ ಚಾಲಕ ಮಹಮ್ಮದ್ ಎಂಬವರು ತನ್ನ ಪತ್ನಿ ಮತ್ತು ಮೊಮ್ಮಗನನ್ನು ಕುಳ್ಳಿರಿಸಿಕೊಂಡು ಭಾನುವಾರ ಸಂಜೆ ಮನೆ ಕಡೆಗೆ ಹೋಗುತ್ತಿದ್ದರು. ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗುತ್ತಲೇ ಅದಕ್ಕೆ ಬಸ್ ಡಿಕ್ಕಿಯಾಗಿದ್ದು ಅಪ್ಪಚ್ಚಿಯಾಗಿದೆ. ಅದರಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಮಹಮ್ಮದ್ ಅವರ ಪತ್ನಿ ಜಮೀಲ(52) ಮತ್ತು ಅವರ ಮೊಮ್ಮಗ ತಪ್ಸಿಬ್(5) ಇದರ ನಡುವೆ ಸಿಕ್ಕಿಕೊಂಡು ಮೃತಪಟ್ಟಿದ್ದಾರೆ. ರಿಕ್ಷಾ ಚಾಲಕ ಮಹಮ್ಮದ್ ಗಂಭೀರ ಗಾಯಗೊಂಡಿದ್ದಾರೆ.
ಮಹಮ್ಮದ್ ಅವರು ಪತ್ನಿ, ಮೊಮ್ಮಗನ ಜೊತೆಗೆ ಬಟ್ಟೆ ಖರೀದಿಸಿ ರಿಕ್ಷಾದಲ್ಲಿ ಮನೆಯತ್ತ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Puttur KSRTC bus Auto accident, wife and five year old grandson killed. A devastating accident occurred at puttur when an auto rickshaw lost control and collided with KSRTC bus, resulting in the tragic deaths of a mother and her young child.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm