ಬ್ರೇಕಿಂಗ್ ನ್ಯೂಸ್
02-03-25 11:01 pm Mangalore Correspondent ಕರಾವಳಿ
ಪುತ್ತೂರು, ಮಾ.2 : ಕೆಎಸ್ ಆರ್ ಟಿಸಿ ಬಸ್ ಬರುತ್ತಿದ್ದಾಗ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದು ರಿಕ್ಷಾದಲ್ಲಿದ್ದ ತಾಯಿ, ಮಗು ಮೃತಪಟ್ಟ ದಾರುಣ ಘಟನೆ ಪುತ್ತೂರು ಪೇಟೆ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದಿದೆ.
ಮೃತರನ್ನು ಕೆದಂಬಾಡಿ ನಿವಾಸಿಗಳಾದ ಜಮೀಲ(49) ಹಾಗೂ ತಪ್ಸಿಬ್(5) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಪುತ್ತೂರಿನತ್ತ ವೇಗವಾಗಿ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ಡಿಕ್ಕಿಯಾಗಿದೆ. ಡಿಕ್ಕಿಯಾದ ದೃಶ್ಯ ಸ್ಥಳೀಯ ಕಟ್ಟಡದ ಸಿಸಿಟಿವಿಯಲ್ಲಿ ದಾಖಲಾಗಿದ್ದು ಆಟೋ ನೇರವಾಗಿ ರಸ್ತೆ ನಡುವೆ ಬಂದಿದ್ದು ಬಸ್ಸನ್ನು ನೋಡಿ ತಪ್ಪಿಸಲೆಂದು ಹೋದಾಗ ಪಲ್ಟಿಯಾಗಿದೆ.
ಕೆದಂಬಾಡಿ ಗ್ರಾಮದ ನಿವಾಸಿ ಆಟೋ ಚಾಲಕ ಮಹಮ್ಮದ್ ಎಂಬವರು ತನ್ನ ಪತ್ನಿ ಮತ್ತು ಮೊಮ್ಮಗನನ್ನು ಕುಳ್ಳಿರಿಸಿಕೊಂಡು ಭಾನುವಾರ ಸಂಜೆ ಮನೆ ಕಡೆಗೆ ಹೋಗುತ್ತಿದ್ದರು. ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗುತ್ತಲೇ ಅದಕ್ಕೆ ಬಸ್ ಡಿಕ್ಕಿಯಾಗಿದ್ದು ಅಪ್ಪಚ್ಚಿಯಾಗಿದೆ. ಅದರಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಮಹಮ್ಮದ್ ಅವರ ಪತ್ನಿ ಜಮೀಲ(52) ಮತ್ತು ಅವರ ಮೊಮ್ಮಗ ತಪ್ಸಿಬ್(5) ಇದರ ನಡುವೆ ಸಿಕ್ಕಿಕೊಂಡು ಮೃತಪಟ್ಟಿದ್ದಾರೆ. ರಿಕ್ಷಾ ಚಾಲಕ ಮಹಮ್ಮದ್ ಗಂಭೀರ ಗಾಯಗೊಂಡಿದ್ದಾರೆ.
ಮಹಮ್ಮದ್ ಅವರು ಪತ್ನಿ, ಮೊಮ್ಮಗನ ಜೊತೆಗೆ ಬಟ್ಟೆ ಖರೀದಿಸಿ ರಿಕ್ಷಾದಲ್ಲಿ ಮನೆಯತ್ತ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Puttur KSRTC bus Auto accident, wife and five year old grandson killed. A devastating accident occurred at puttur when an auto rickshaw lost control and collided with KSRTC bus, resulting in the tragic deaths of a mother and her young child.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm