ಬ್ರೇಕಿಂಗ್ ನ್ಯೂಸ್
04-03-25 07:35 pm Mangalore Correspondent ಕರಾವಳಿ
ಮಂಗಳೂರು, ಮಾ.4 : ಪಾವೂರು ಉಳಿಯ, ಆಡಂಕುದ್ರು ಇನ್ನಿತರ ನದಿ ಮಧ್ಯದ ನಡುಗಡ್ಡೆಗಳನ್ನು ಸರಕಾರ ಅವಕಾಶ ಕೊಟ್ಟರೆ ಅತ್ಯುತ್ತಮವಾಗಿ ಪ್ರವಾಸೋದ್ಯಮ ದೃಷ್ಟಿಯಿಂದ ಅಭಿವೃದ್ಧಿ ಪಡಿಸಬಹುದು. ಈ ಹಿಂದೆ ಅಂತಹ ನಡುಗಡ್ಡೆಗಳಲ್ಲಿ ಜಿಲ್ಲಾಧಿಕಾರಿಗಳು ಖಾಸಗಿಯವರಿಗೆ ಒಂದು ಎಕರೆಯಷ್ಟು ಜಾಗವನ್ನು ಅಲಾಟ್ ಮಾಡಿದ್ದರು. ಅವರಿಗೆ ಪರಿಹಾರ ಕೊಟ್ಟು ಜಾಗವನ್ನು ಖಾಸಗಿ ಕಂಪನಿಗಳಿಗೆ ಕೊಟ್ಟರೆ ಒಳ್ಳೆಯದಿತ್ತು. ಸರ್ಕಾರ ಅನುದಾನ ಕೊಡುವುದು ಬೇಡ, ಖಾಸಗಿ ಕಂಪನಿಗಳೇ ಅಲ್ಲಿ ಹೂಡಿಕೆ ಮಾಡಲು ತಯಾರಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ.
ಅಶೋಕ್ ರೈ ಮಾತಿಗೆ ಸ್ಪೀಕರ್ ಯುಟಿ ಖಾದರ್ ಕೂಡ ದನಿಗೂಡಿಸಿದ್ದು, ಪಾವೂರು ಉಳಿಯ ದ್ವೀಪಕ್ಕೆ ತೂಗುಸೇತುವೆ ಪ್ರಸ್ತಾಪ ಇಟ್ಟಿದ್ದೆ. ಆ ಬಗ್ಗೆಯೂ ಸರಕಾರ ಆದ್ಯತೆ ನೀಡಬೇಕು ಎಂದು ಕೇಳಿಕೊಂಡರು. ಇದಕ್ಕುತ್ತರಿಸಿದ ಸಚಿವ ಎಚ್.ಕೆ ಪಾಟೀಲ್, ಶಾಸಕ ಅಶೋಕ್ ರೈಯವರದ್ದು ಉತ್ತಮ ಸಲಹೆ. ನಡುಗಡ್ಡೆಗಳನ್ನು ಅಭಿವೃದ್ಧಿ ಪಡಿಸಿ ಪ್ರವಾಸೋದ್ಯಮ ಬೆಳೆಸಲು ಆದ್ಯತೆ ನೀಡುತ್ತೇನೆ. ಇದಕ್ಕೆ ನಮ್ಮ ಇಲಾಖೆಯ ಕಾರ್ಯದರ್ಶಿಯನ್ನು ಕಳಿಸಿಕೊಟ್ಟು ಜಾಗ ಪರಿಶೀಲನೆ ಮಾಡಿಸುತ್ತೇನೆ, ಜಾಗ ಕೊಟ್ಟರೆ ಕಂಪನಿಯವರು ಅಭಿವೃದ್ಧಿ ಪಡಿಸುವುದಾದರೆ ಉತ್ತಮ ಎಂದು ಹೇಳಿದರು. ಹಾಗೆಯೇ ಪಾವೂರು ಉಳಿಯ ದ್ವೀಪಕ್ಕೆ ತೂಗು ಸೇತುವೆ ರಚಿಸುವ ವಿಚಾರದಲ್ಲಿಯೂ ಗಂಭೀರ ಕ್ರಮ ವಹಿಸುತ್ತೇವೆ ಎಂದರು.
ಗೆಜ್ಜೆಗಿರಿ ಮತ್ತು ನಂದನಬಿತ್ತಿಲು ಅಭಿವೃದ್ಧಿ ಕಾರ್ಯಕ್ಕೂ ಅನುದಾನ ನೀಡಬೇಕು ಎಂದು ಶಾಸಕ ಅಶೋಕ್ ರೈ ಕೇಳಿಕೊಂಡಿದ್ದಾರೆ. ಇದಕ್ಕುತ್ತರಿಸಿದ ಸಚಿವ ಪಾಟೀಲ್, ಮುಂದಿನ ಬಜೆಟ್ ನಲ್ಲಿ ಅದಕ್ಕೆ ಅನುದಾನ ನೀಡುವಂತೆ ಮಾಡುತ್ತೇನೆ ಎಂದರು. ಈಗಾಗಲೇ ಬಿರುಮಲೆ ಬೆಟ್ಟಕ್ಕೆ ಎರಡು ಕೋಟಿ ಅನುದಾನವನ್ನು ಕ್ಷೇತ್ರಾಭಿವೃದ್ಧಿ ಅನುದಾನದಿಂದ ಕೊಟ್ಟಿದ್ದೇನೆ. ಅದರಲ್ಲಿ ಒಂದು ಕೋಟಿ ಅನುದಾನ ಬಿಡುಗಡೆ ಆಗಿದೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಇನ್ನಷ್ಟು ಅನುದಾನದ ಅಗತ್ಯವಿದೆ ಎಂದು ಹೇಳಿದರು.
"MLA Ashok Rai Advocates for Islands to Boost Mangalore Tourism; Minister HK Patil Offers Support"
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm