ಬ್ರೇಕಿಂಗ್ ನ್ಯೂಸ್
04-03-25 07:35 pm Mangalore Correspondent ಕರಾವಳಿ
ಮಂಗಳೂರು, ಮಾ.4 : ಪಾವೂರು ಉಳಿಯ, ಆಡಂಕುದ್ರು ಇನ್ನಿತರ ನದಿ ಮಧ್ಯದ ನಡುಗಡ್ಡೆಗಳನ್ನು ಸರಕಾರ ಅವಕಾಶ ಕೊಟ್ಟರೆ ಅತ್ಯುತ್ತಮವಾಗಿ ಪ್ರವಾಸೋದ್ಯಮ ದೃಷ್ಟಿಯಿಂದ ಅಭಿವೃದ್ಧಿ ಪಡಿಸಬಹುದು. ಈ ಹಿಂದೆ ಅಂತಹ ನಡುಗಡ್ಡೆಗಳಲ್ಲಿ ಜಿಲ್ಲಾಧಿಕಾರಿಗಳು ಖಾಸಗಿಯವರಿಗೆ ಒಂದು ಎಕರೆಯಷ್ಟು ಜಾಗವನ್ನು ಅಲಾಟ್ ಮಾಡಿದ್ದರು. ಅವರಿಗೆ ಪರಿಹಾರ ಕೊಟ್ಟು ಜಾಗವನ್ನು ಖಾಸಗಿ ಕಂಪನಿಗಳಿಗೆ ಕೊಟ್ಟರೆ ಒಳ್ಳೆಯದಿತ್ತು. ಸರ್ಕಾರ ಅನುದಾನ ಕೊಡುವುದು ಬೇಡ, ಖಾಸಗಿ ಕಂಪನಿಗಳೇ ಅಲ್ಲಿ ಹೂಡಿಕೆ ಮಾಡಲು ತಯಾರಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ.
ಅಶೋಕ್ ರೈ ಮಾತಿಗೆ ಸ್ಪೀಕರ್ ಯುಟಿ ಖಾದರ್ ಕೂಡ ದನಿಗೂಡಿಸಿದ್ದು, ಪಾವೂರು ಉಳಿಯ ದ್ವೀಪಕ್ಕೆ ತೂಗುಸೇತುವೆ ಪ್ರಸ್ತಾಪ ಇಟ್ಟಿದ್ದೆ. ಆ ಬಗ್ಗೆಯೂ ಸರಕಾರ ಆದ್ಯತೆ ನೀಡಬೇಕು ಎಂದು ಕೇಳಿಕೊಂಡರು. ಇದಕ್ಕುತ್ತರಿಸಿದ ಸಚಿವ ಎಚ್.ಕೆ ಪಾಟೀಲ್, ಶಾಸಕ ಅಶೋಕ್ ರೈಯವರದ್ದು ಉತ್ತಮ ಸಲಹೆ. ನಡುಗಡ್ಡೆಗಳನ್ನು ಅಭಿವೃದ್ಧಿ ಪಡಿಸಿ ಪ್ರವಾಸೋದ್ಯಮ ಬೆಳೆಸಲು ಆದ್ಯತೆ ನೀಡುತ್ತೇನೆ. ಇದಕ್ಕೆ ನಮ್ಮ ಇಲಾಖೆಯ ಕಾರ್ಯದರ್ಶಿಯನ್ನು ಕಳಿಸಿಕೊಟ್ಟು ಜಾಗ ಪರಿಶೀಲನೆ ಮಾಡಿಸುತ್ತೇನೆ, ಜಾಗ ಕೊಟ್ಟರೆ ಕಂಪನಿಯವರು ಅಭಿವೃದ್ಧಿ ಪಡಿಸುವುದಾದರೆ ಉತ್ತಮ ಎಂದು ಹೇಳಿದರು. ಹಾಗೆಯೇ ಪಾವೂರು ಉಳಿಯ ದ್ವೀಪಕ್ಕೆ ತೂಗು ಸೇತುವೆ ರಚಿಸುವ ವಿಚಾರದಲ್ಲಿಯೂ ಗಂಭೀರ ಕ್ರಮ ವಹಿಸುತ್ತೇವೆ ಎಂದರು.
ಗೆಜ್ಜೆಗಿರಿ ಮತ್ತು ನಂದನಬಿತ್ತಿಲು ಅಭಿವೃದ್ಧಿ ಕಾರ್ಯಕ್ಕೂ ಅನುದಾನ ನೀಡಬೇಕು ಎಂದು ಶಾಸಕ ಅಶೋಕ್ ರೈ ಕೇಳಿಕೊಂಡಿದ್ದಾರೆ. ಇದಕ್ಕುತ್ತರಿಸಿದ ಸಚಿವ ಪಾಟೀಲ್, ಮುಂದಿನ ಬಜೆಟ್ ನಲ್ಲಿ ಅದಕ್ಕೆ ಅನುದಾನ ನೀಡುವಂತೆ ಮಾಡುತ್ತೇನೆ ಎಂದರು. ಈಗಾಗಲೇ ಬಿರುಮಲೆ ಬೆಟ್ಟಕ್ಕೆ ಎರಡು ಕೋಟಿ ಅನುದಾನವನ್ನು ಕ್ಷೇತ್ರಾಭಿವೃದ್ಧಿ ಅನುದಾನದಿಂದ ಕೊಟ್ಟಿದ್ದೇನೆ. ಅದರಲ್ಲಿ ಒಂದು ಕೋಟಿ ಅನುದಾನ ಬಿಡುಗಡೆ ಆಗಿದೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಇನ್ನಷ್ಟು ಅನುದಾನದ ಅಗತ್ಯವಿದೆ ಎಂದು ಹೇಳಿದರು.
"MLA Ashok Rai Advocates for Islands to Boost Mangalore Tourism; Minister HK Patil Offers Support"
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm