ಬ್ರೇಕಿಂಗ್ ನ್ಯೂಸ್
08-03-25 02:06 pm Mangalore Correspondent ಕರಾವಳಿ
ಮಂಗಳೂರು, ಮಾ.8 : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಕೆ ಮಾಡಬಾರದೆಂದು 5ಜಿ ಮೇಲ್ದರ್ಜೆಗೇರಿಸಿದ ಜಾಮರ್ ಅಳವಡಿಸಿದ್ದು ಸದ್ರಿ ಉಪಕರಣಗಳನ್ನು ಉಪ್ಪು ಸುರಿದು ನಿಷ್ಕ್ರಿಯಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಕೈದಿಗಳ ವಿರುದ್ದ ಜೈಲು ಅಧೀಕ್ಷಕರು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿಂದೆ 2ಜಿ/3ಜಿ ಮಾದರಿಯ 5 ಮೊಬೈಲ್ ಜಾಮರ್ ಉಪಕರಣಗಳನ್ನು ಜೈಲಿನಲ್ಲಿ ಅಳವಡಿಸಲಾಗಿತ್ತು. ಅದನ್ನು 5ಜಿ ಆಗಿ ಮೇಲ್ದರ್ಜೆಗೇರಿಸಲು ಟಿಐಸಿಎಲ್ ಸಂಸ್ಥೆಗೆ ವಹಿಸಲಾಗಿತ್ತು. ಅದರಂತೆ 5ಜಿ ಜಾಮರ್ ಉಪಕರಣಗಳನ್ನು ಅಳವಡಿಸಿದ್ದು ಅದನ್ನು ಇಲಾಖೆಯ ವಶಕ್ಕೆ ನೀಡಬೇಕಾದ ಕೆಲಸ ಮಾತ್ರ ಬಾಕಿ ಇತ್ತು. ಅಷ್ಟರಲ್ಲಿ ಜೈಲಿನ ಎ ಮತ್ತು ಬಿ ವಿಭಾಗಗಳಲ್ಲಿ ಜಾಮರ್ ಉಪಕರಣಗಳನ್ನು ಉಪ್ಪು ಸುರಿದು ಕೆಡಿಸಲು ಪ್ರಯತ್ನ ಮಾಡಿದ್ದಾರೆ.
ಈ ಬಗ್ಗೆ ಸಂಸ್ಥೆಯವರು ಕಾರಾಗೃಹ ಇಲಾಖೆ ಮಹಾನಿರ್ದೇಶಕರಿಗೆ ವರದಿ ನೀಡಿದ್ದಾರೆ. ವರದಿಯ ಆಧಾರದಲ್ಲಿ ಜೈಲಿನ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ 9 ಮಂದಿ ವಿಚಾರಣಾಧೀನ ಕೈದಿಗಳು ಜಾಮರ್ ಉಪಕರಣವನ್ನು ಕೆಡಿಸಲು ಯತ್ನಿಸಿರುವುದು ಕಂಡು ಬಂದಿದೆ ಎಂದು ಜೈಲು ಅಧೀಕ್ಷಕರು ತಿಳಿಸಿದ್ದಾರೆ. ಜಾಮರ್ ಅಳವಡಿಸಿದ್ದರಿಂದ ಸ್ಥಳೀಯವಾಗಿ ಆಸುಪಾಸಿನಲ್ಲಿ ಮೊಬೈಲ್ ಸೇವೆಯಲ್ಲಿ ವ್ಯತ್ಯಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೈಲಿನಲ್ಲಿ ಮೊಬೈಲ್ ಬಳಕೆಗೆ ಅವಕಾಶ ಇಲ್ಲ. ಆದರೂ, ಕೈದಿಗಳು ಅಕ್ರಮವಾಗಿ ಮೊಬೈಲ್ ಬಳಸುತ್ತಿದ್ದಾರೆ ಎನ್ನುವುದು ಆರೋಪ. ಹೀಗಾಗಿ ಮೊಬೈಲ್ ಮೇಲೆ ಕಡಿವಾಣ ಹಾಕಲು ರೇಂಜ್ ಸಿಗದಂತೆ ಮಾಡಲು ಜೈಲು ಅಧೀಕ್ಷಕರು ಪ್ರಬಲ ಜಾಮರ್ ಹಾಕಲು ಮುಂದಾಗಿದ್ದಾರೆ.
Jammer in Mangalore jail, jail inmates try to destroy jammer, Jai authorities file case at barke station.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm