ಬ್ರೇಕಿಂಗ್ ನ್ಯೂಸ್
08-03-25 02:06 pm Mangalore Correspondent ಕರಾವಳಿ
ಮಂಗಳೂರು, ಮಾ.8 : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಕೆ ಮಾಡಬಾರದೆಂದು 5ಜಿ ಮೇಲ್ದರ್ಜೆಗೇರಿಸಿದ ಜಾಮರ್ ಅಳವಡಿಸಿದ್ದು ಸದ್ರಿ ಉಪಕರಣಗಳನ್ನು ಉಪ್ಪು ಸುರಿದು ನಿಷ್ಕ್ರಿಯಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಕೈದಿಗಳ ವಿರುದ್ದ ಜೈಲು ಅಧೀಕ್ಷಕರು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿಂದೆ 2ಜಿ/3ಜಿ ಮಾದರಿಯ 5 ಮೊಬೈಲ್ ಜಾಮರ್ ಉಪಕರಣಗಳನ್ನು ಜೈಲಿನಲ್ಲಿ ಅಳವಡಿಸಲಾಗಿತ್ತು. ಅದನ್ನು 5ಜಿ ಆಗಿ ಮೇಲ್ದರ್ಜೆಗೇರಿಸಲು ಟಿಐಸಿಎಲ್ ಸಂಸ್ಥೆಗೆ ವಹಿಸಲಾಗಿತ್ತು. ಅದರಂತೆ 5ಜಿ ಜಾಮರ್ ಉಪಕರಣಗಳನ್ನು ಅಳವಡಿಸಿದ್ದು ಅದನ್ನು ಇಲಾಖೆಯ ವಶಕ್ಕೆ ನೀಡಬೇಕಾದ ಕೆಲಸ ಮಾತ್ರ ಬಾಕಿ ಇತ್ತು. ಅಷ್ಟರಲ್ಲಿ ಜೈಲಿನ ಎ ಮತ್ತು ಬಿ ವಿಭಾಗಗಳಲ್ಲಿ ಜಾಮರ್ ಉಪಕರಣಗಳನ್ನು ಉಪ್ಪು ಸುರಿದು ಕೆಡಿಸಲು ಪ್ರಯತ್ನ ಮಾಡಿದ್ದಾರೆ.
ಈ ಬಗ್ಗೆ ಸಂಸ್ಥೆಯವರು ಕಾರಾಗೃಹ ಇಲಾಖೆ ಮಹಾನಿರ್ದೇಶಕರಿಗೆ ವರದಿ ನೀಡಿದ್ದಾರೆ. ವರದಿಯ ಆಧಾರದಲ್ಲಿ ಜೈಲಿನ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ 9 ಮಂದಿ ವಿಚಾರಣಾಧೀನ ಕೈದಿಗಳು ಜಾಮರ್ ಉಪಕರಣವನ್ನು ಕೆಡಿಸಲು ಯತ್ನಿಸಿರುವುದು ಕಂಡು ಬಂದಿದೆ ಎಂದು ಜೈಲು ಅಧೀಕ್ಷಕರು ತಿಳಿಸಿದ್ದಾರೆ. ಜಾಮರ್ ಅಳವಡಿಸಿದ್ದರಿಂದ ಸ್ಥಳೀಯವಾಗಿ ಆಸುಪಾಸಿನಲ್ಲಿ ಮೊಬೈಲ್ ಸೇವೆಯಲ್ಲಿ ವ್ಯತ್ಯಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೈಲಿನಲ್ಲಿ ಮೊಬೈಲ್ ಬಳಕೆಗೆ ಅವಕಾಶ ಇಲ್ಲ. ಆದರೂ, ಕೈದಿಗಳು ಅಕ್ರಮವಾಗಿ ಮೊಬೈಲ್ ಬಳಸುತ್ತಿದ್ದಾರೆ ಎನ್ನುವುದು ಆರೋಪ. ಹೀಗಾಗಿ ಮೊಬೈಲ್ ಮೇಲೆ ಕಡಿವಾಣ ಹಾಕಲು ರೇಂಜ್ ಸಿಗದಂತೆ ಮಾಡಲು ಜೈಲು ಅಧೀಕ್ಷಕರು ಪ್ರಬಲ ಜಾಮರ್ ಹಾಕಲು ಮುಂದಾಗಿದ್ದಾರೆ.
Jammer in Mangalore jail, jail inmates try to destroy jammer, Jai authorities file case at barke station.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm