ಬ್ರೇಕಿಂಗ್ ನ್ಯೂಸ್
08-03-25 02:06 pm Mangalore Correspondent ಕರಾವಳಿ
ಮಂಗಳೂರು, ಮಾ.8 : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಕೆ ಮಾಡಬಾರದೆಂದು 5ಜಿ ಮೇಲ್ದರ್ಜೆಗೇರಿಸಿದ ಜಾಮರ್ ಅಳವಡಿಸಿದ್ದು ಸದ್ರಿ ಉಪಕರಣಗಳನ್ನು ಉಪ್ಪು ಸುರಿದು ನಿಷ್ಕ್ರಿಯಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಕೈದಿಗಳ ವಿರುದ್ದ ಜೈಲು ಅಧೀಕ್ಷಕರು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿಂದೆ 2ಜಿ/3ಜಿ ಮಾದರಿಯ 5 ಮೊಬೈಲ್ ಜಾಮರ್ ಉಪಕರಣಗಳನ್ನು ಜೈಲಿನಲ್ಲಿ ಅಳವಡಿಸಲಾಗಿತ್ತು. ಅದನ್ನು 5ಜಿ ಆಗಿ ಮೇಲ್ದರ್ಜೆಗೇರಿಸಲು ಟಿಐಸಿಎಲ್ ಸಂಸ್ಥೆಗೆ ವಹಿಸಲಾಗಿತ್ತು. ಅದರಂತೆ 5ಜಿ ಜಾಮರ್ ಉಪಕರಣಗಳನ್ನು ಅಳವಡಿಸಿದ್ದು ಅದನ್ನು ಇಲಾಖೆಯ ವಶಕ್ಕೆ ನೀಡಬೇಕಾದ ಕೆಲಸ ಮಾತ್ರ ಬಾಕಿ ಇತ್ತು. ಅಷ್ಟರಲ್ಲಿ ಜೈಲಿನ ಎ ಮತ್ತು ಬಿ ವಿಭಾಗಗಳಲ್ಲಿ ಜಾಮರ್ ಉಪಕರಣಗಳನ್ನು ಉಪ್ಪು ಸುರಿದು ಕೆಡಿಸಲು ಪ್ರಯತ್ನ ಮಾಡಿದ್ದಾರೆ.
ಈ ಬಗ್ಗೆ ಸಂಸ್ಥೆಯವರು ಕಾರಾಗೃಹ ಇಲಾಖೆ ಮಹಾನಿರ್ದೇಶಕರಿಗೆ ವರದಿ ನೀಡಿದ್ದಾರೆ. ವರದಿಯ ಆಧಾರದಲ್ಲಿ ಜೈಲಿನ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ 9 ಮಂದಿ ವಿಚಾರಣಾಧೀನ ಕೈದಿಗಳು ಜಾಮರ್ ಉಪಕರಣವನ್ನು ಕೆಡಿಸಲು ಯತ್ನಿಸಿರುವುದು ಕಂಡು ಬಂದಿದೆ ಎಂದು ಜೈಲು ಅಧೀಕ್ಷಕರು ತಿಳಿಸಿದ್ದಾರೆ. ಜಾಮರ್ ಅಳವಡಿಸಿದ್ದರಿಂದ ಸ್ಥಳೀಯವಾಗಿ ಆಸುಪಾಸಿನಲ್ಲಿ ಮೊಬೈಲ್ ಸೇವೆಯಲ್ಲಿ ವ್ಯತ್ಯಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೈಲಿನಲ್ಲಿ ಮೊಬೈಲ್ ಬಳಕೆಗೆ ಅವಕಾಶ ಇಲ್ಲ. ಆದರೂ, ಕೈದಿಗಳು ಅಕ್ರಮವಾಗಿ ಮೊಬೈಲ್ ಬಳಸುತ್ತಿದ್ದಾರೆ ಎನ್ನುವುದು ಆರೋಪ. ಹೀಗಾಗಿ ಮೊಬೈಲ್ ಮೇಲೆ ಕಡಿವಾಣ ಹಾಕಲು ರೇಂಜ್ ಸಿಗದಂತೆ ಮಾಡಲು ಜೈಲು ಅಧೀಕ್ಷಕರು ಪ್ರಬಲ ಜಾಮರ್ ಹಾಕಲು ಮುಂದಾಗಿದ್ದಾರೆ.
Jammer in Mangalore jail, jail inmates try to destroy jammer, Jai authorities file case at barke station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm