ಬ್ರೇಕಿಂಗ್ ನ್ಯೂಸ್
08-03-25 06:37 pm Mangalore Correspondent ಕರಾವಳಿ
ಮಂಗಳೂರು, ಮಾ.8 : ದಿಢೀರ್ ನಾಪತ್ತೆಯಾಗಿ ಕುತೂಹಲ ಮೂಡಿಸಿದ್ದ ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ. ಉಡುಪಿ ಅಜ್ಜರಕಾಡಿನ ಡಿ ಮಾರ್ಟ್ ಒಂದರಲ್ಲಿ ಅಪ್ರಾಪ್ತ ಬಾಲಕ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.





ಮನೆಯವರ ಮಾಹಿತಿ ಪ್ರಕಾರ, ಮಧ್ಯಾಹ್ನ 3.30ರ ವೇಳೆಗೆ ತಾಯಿಗೆ ಒಂದು ಫೋನ್ ಕರೆ ಬಂದಿತ್ತು. ಉಡುಪಿಯ ಡಿಮಾರ್ಟ್ ಮ್ಯಾನೇಜರ್ ಫೋನ್ ಮಾಡಿ ದಿಗಂತ್ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆನಂತರ, ಆತನೂ ತಾಯಿ ಜೊತೆಗೆ ಮಾತನಾಡಿದ್ದು ತನ್ನನ್ನು ಯಾರೋ ಎತ್ತಾಕ್ಕೊಂಡು ಹೋಗಿದ್ದರು ಎಂದು ಹೇಳಿದ್ದಾನೆ.
ನನಗೇನು ತೊಂದರೆಯಾಗಿಲ್ಲ. ನನ್ನನ್ನು ಹೊತ್ತುಕೊಂಡು ಹೋಗಿದ್ದಾರೆ, ನಾನೇ ನಾಪತ್ತೆಯಾಗುವ ಹುಡುಗ ಅಲ್ಲ. ಎಲ್ಲವನ್ನೂ ನಾನು ಬಂದು ಹೇಳುತ್ತೇನೆ ಎಂದು ದಿಗಂತ್ ತನ್ನ ತಾಯಿ ಬಳಿ ಹೇಳಿಕೊಂಡಿದ್ದಾನೆ. ಕೂಡಲೇ ಬಂಟ್ವಾಳ ಪೊಲೀಸರಿಗೆ ಮನೆಯವರು ಮಾಹಿತಿ ನೀಡಿದ್ದಾರೆ. ಆನಂತರ, ಉಡುಪಿ ಪೊಲೀಸರಿಗೆ ಮಾಹಿತಿ ಕೊಟ್ಟು ಕೂಡಲೇ ಆತನನ್ನು ಅಲ್ಲಿಂದ ವಶಕ್ಕೆ ಪಡೆದಿದ್ದಾರೆ.
12 ದಿನಗಳ ಬಳಿಕ ಶ್ವಾನ ತಂದಿದ್ದರು !
ದಿಗಂತ್ ನಾಪತ್ತೆಯಾಗಿ 12 ದಿನ ಕಳೆದರೂ ಸಿಕ್ಕಿಲ್ಲ ಎನ್ನುವುದು ಪೊಲೀಸರಿಗೆ ತೀವ್ರ ಒತ್ತಡ ಉಂಟು ಮಾಡಿತ್ತು. ವಿಚಿತ್ರ ಅಂದರೆ, 12 ದಿನ ಕಳೆದ ಶನಿವಾರ ಬೆಳಗ್ಗೆ 50ಕ್ಕೂ ಹೆಚ್ಚು ಪೊಲೀಸರು ಫರಂಗಿಪೇಟೆ ಆಸುಪಾಸಿನಲ್ಲಿ ಹುಡುಕಾಟ ನಡೆಸಿದ್ದರು. ಗುಡ್ಡದಲ್ಲಿರುವ ಪೊದೆಗಳು, ರೈಲು ಹಳಿಯ ಆಸುಪಾಸಿನಲ್ಲಿ ಹುಡುಕಾಟ ನಡೆಸಿದ್ದು ಇಷ್ಟು ದಿನಗಳ ಬಳಿಕ ಪೊಲೀಸರು ಇಲ್ಲೇನು ಮಾಡುತ್ತಿದ್ದಾರೆ ಎಂದು ಸ್ಥಳೀಯರು ತಮ್ಮಲ್ಲೇ ಪ್ರಶ್ನೆ ಮಾಡಿಕೊಂಡಿದ್ದರು. ಇದಲ್ಲದೆ, ಪೊಲೀಸ್ ನಾಯಿಯನ್ನೂ ಕರೆತಂದು ಮನೆಯಲ್ಲಿದ್ದ ದಿಗಂತ್ ಹಳೆ ಬಟ್ಟೆಯನ್ನು ಮೂಸಿ ತೋರಿಸಿ ಏನಾದರೂ ಸುಳಿವು ಸಿಗುತ್ತಾ ಎಂದು ಪ್ರಯತ್ನ ಪಟ್ಟಿದ್ದರು. ನಾಪತ್ತೆ ತಿಳಿದ ಒಂದೆರಡು ದಿನದಲ್ಲಿ ಮಾಡಬೇಕಾದ ಕೆಲಸವನ್ನು ಪೊಲೀಸರು 12 ದಿನಗಳ ಬಳಿಕ ಮಾಡಿರುವುದು, ಆರಂಭದಲ್ಲಿ ನಿರ್ಲಕ್ಷ್ಯ ಮಾಡಿದ್ದನ್ನು ಎತ್ತಿತೋರಿಸಿದೆ.
Farangipete Diganth Missing Case Solved, Missing student Found Safe in Udupi After 12 Days. Diganth, a student from Kidebettu, Farangipete, who had mysteriously gone missing, was finally located in Udupi on Saturday, March 8, after nearly 10 days. Police are reportedly in the process of bringing him back to Bantwal.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm