ಬ್ರೇಕಿಂಗ್ ನ್ಯೂಸ್
08-03-25 06:37 pm Mangalore Correspondent ಕರಾವಳಿ
ಮಂಗಳೂರು, ಮಾ.8 : ದಿಢೀರ್ ನಾಪತ್ತೆಯಾಗಿ ಕುತೂಹಲ ಮೂಡಿಸಿದ್ದ ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ. ಉಡುಪಿ ಅಜ್ಜರಕಾಡಿನ ಡಿ ಮಾರ್ಟ್ ಒಂದರಲ್ಲಿ ಅಪ್ರಾಪ್ತ ಬಾಲಕ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.





ಮನೆಯವರ ಮಾಹಿತಿ ಪ್ರಕಾರ, ಮಧ್ಯಾಹ್ನ 3.30ರ ವೇಳೆಗೆ ತಾಯಿಗೆ ಒಂದು ಫೋನ್ ಕರೆ ಬಂದಿತ್ತು. ಉಡುಪಿಯ ಡಿಮಾರ್ಟ್ ಮ್ಯಾನೇಜರ್ ಫೋನ್ ಮಾಡಿ ದಿಗಂತ್ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆನಂತರ, ಆತನೂ ತಾಯಿ ಜೊತೆಗೆ ಮಾತನಾಡಿದ್ದು ತನ್ನನ್ನು ಯಾರೋ ಎತ್ತಾಕ್ಕೊಂಡು ಹೋಗಿದ್ದರು ಎಂದು ಹೇಳಿದ್ದಾನೆ.
ನನಗೇನು ತೊಂದರೆಯಾಗಿಲ್ಲ. ನನ್ನನ್ನು ಹೊತ್ತುಕೊಂಡು ಹೋಗಿದ್ದಾರೆ, ನಾನೇ ನಾಪತ್ತೆಯಾಗುವ ಹುಡುಗ ಅಲ್ಲ. ಎಲ್ಲವನ್ನೂ ನಾನು ಬಂದು ಹೇಳುತ್ತೇನೆ ಎಂದು ದಿಗಂತ್ ತನ್ನ ತಾಯಿ ಬಳಿ ಹೇಳಿಕೊಂಡಿದ್ದಾನೆ. ಕೂಡಲೇ ಬಂಟ್ವಾಳ ಪೊಲೀಸರಿಗೆ ಮನೆಯವರು ಮಾಹಿತಿ ನೀಡಿದ್ದಾರೆ. ಆನಂತರ, ಉಡುಪಿ ಪೊಲೀಸರಿಗೆ ಮಾಹಿತಿ ಕೊಟ್ಟು ಕೂಡಲೇ ಆತನನ್ನು ಅಲ್ಲಿಂದ ವಶಕ್ಕೆ ಪಡೆದಿದ್ದಾರೆ.
12 ದಿನಗಳ ಬಳಿಕ ಶ್ವಾನ ತಂದಿದ್ದರು !
ದಿಗಂತ್ ನಾಪತ್ತೆಯಾಗಿ 12 ದಿನ ಕಳೆದರೂ ಸಿಕ್ಕಿಲ್ಲ ಎನ್ನುವುದು ಪೊಲೀಸರಿಗೆ ತೀವ್ರ ಒತ್ತಡ ಉಂಟು ಮಾಡಿತ್ತು. ವಿಚಿತ್ರ ಅಂದರೆ, 12 ದಿನ ಕಳೆದ ಶನಿವಾರ ಬೆಳಗ್ಗೆ 50ಕ್ಕೂ ಹೆಚ್ಚು ಪೊಲೀಸರು ಫರಂಗಿಪೇಟೆ ಆಸುಪಾಸಿನಲ್ಲಿ ಹುಡುಕಾಟ ನಡೆಸಿದ್ದರು. ಗುಡ್ಡದಲ್ಲಿರುವ ಪೊದೆಗಳು, ರೈಲು ಹಳಿಯ ಆಸುಪಾಸಿನಲ್ಲಿ ಹುಡುಕಾಟ ನಡೆಸಿದ್ದು ಇಷ್ಟು ದಿನಗಳ ಬಳಿಕ ಪೊಲೀಸರು ಇಲ್ಲೇನು ಮಾಡುತ್ತಿದ್ದಾರೆ ಎಂದು ಸ್ಥಳೀಯರು ತಮ್ಮಲ್ಲೇ ಪ್ರಶ್ನೆ ಮಾಡಿಕೊಂಡಿದ್ದರು. ಇದಲ್ಲದೆ, ಪೊಲೀಸ್ ನಾಯಿಯನ್ನೂ ಕರೆತಂದು ಮನೆಯಲ್ಲಿದ್ದ ದಿಗಂತ್ ಹಳೆ ಬಟ್ಟೆಯನ್ನು ಮೂಸಿ ತೋರಿಸಿ ಏನಾದರೂ ಸುಳಿವು ಸಿಗುತ್ತಾ ಎಂದು ಪ್ರಯತ್ನ ಪಟ್ಟಿದ್ದರು. ನಾಪತ್ತೆ ತಿಳಿದ ಒಂದೆರಡು ದಿನದಲ್ಲಿ ಮಾಡಬೇಕಾದ ಕೆಲಸವನ್ನು ಪೊಲೀಸರು 12 ದಿನಗಳ ಬಳಿಕ ಮಾಡಿರುವುದು, ಆರಂಭದಲ್ಲಿ ನಿರ್ಲಕ್ಷ್ಯ ಮಾಡಿದ್ದನ್ನು ಎತ್ತಿತೋರಿಸಿದೆ.
Farangipete Diganth Missing Case Solved, Missing student Found Safe in Udupi After 12 Days. Diganth, a student from Kidebettu, Farangipete, who had mysteriously gone missing, was finally located in Udupi on Saturday, March 8, after nearly 10 days. Police are reportedly in the process of bringing him back to Bantwal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm