ಬ್ರೇಕಿಂಗ್ ನ್ಯೂಸ್
09-03-25 02:31 pm Mangaluru Correspondent ಕರಾವಳಿ
ಮಂಗಳೂರು, ಮಾ.9: ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದಲ್ಲಿ ಪೊಲೀಸರು ಕಡೆಗೂ ನಿಟ್ಟುಸಿರು ಬಿಟ್ಟಿದ್ದಾರೆ. ಹನ್ನೆರಡು ದಿನಗಳಿಂದ ಪೊಲೀಸರನ್ನೇ ದಿಕ್ಕೆಡುವಂತೆ ಮಾಡಿದ್ದ 17 ವರ್ಷದ ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ತಾನು ದ್ವಿತೀಯ ಪಿಯುಸಿ ಪರೀಕ್ಷೆಗೆ ಹೆದರಿ ಮನೆ ಬಿಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ.
ಪ್ರಕರಣ ಸಂಬಂಧಿಸಿ ದಕ್ಷಿಣ ಕನ್ನಡ ಎಸ್ಪಿ ಎನ್. ಯತೀಶ್ ಸುದ್ದಿಗೋಷ್ಟಿ ನಡೆಸಿ, ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಫೆಬ್ರವರಿ 25ರಂದು ಸಂಜೆ ವೇಳೆಗೆ ಮನೆಯಿಂದ ತೆರಳಿದ್ದ ದಿಗಂತ್ ರೈಲು ಹಳಿಯಲ್ಲಿ ತನ್ನ ಚಪ್ಪಲಿ ಮತ್ತು ಮೊಬೈಲನ್ನು ಬಿಟ್ಟು ರಸ್ತೆಯಲ್ಲಿ ನಡೆದುಕೊಂಡು ಹೋಗಿದ್ದಾನೆ. ಅರ್ಕುಳದಲ್ಲಿ ಬೈಕ್ ಒಂದರಲ್ಲಿ ಲಿಫ್ಟ್ ಪಡೆದು ಅಲ್ಲಿಂದ ಮಂಗಳೂರಿಗೆ ಬಸ್ ನಿಲ್ದಾಣಕ್ಕೆ ಬಂದಿದ್ದಾನೆ. ಮಂಗಳೂರಿನಿಂದ ಶಿವಮೊಗ್ಗ ತೆರಳುವ ಬಸ್ ಹತ್ತಿದ್ದು, ಆನಂತರ ಮೈಸೂರಿಗೆ ಬಸ್ಸಿನಲ್ಲಿ ಹೋಗಿದ್ದಾನೆ. ಅಲ್ಲಿಂದ ಬೆಂಗಳೂರಿನ ಕೆಂಗೇರಿ, ಆಬಳಿಕ ನಂದಿ ಹಿಲ್ಸ್ ತೆರಳಿ ಅಲ್ಲಿನ ರೆಸಾರ್ಟ್ ಒಂದರಲ್ಲಿ ಹಣಕ್ಕಾಗಿ ಕೆಲಸಕ್ಕೆ ಸೇರಿದ್ದಾನೆ. ಮೂರು ದಿನ ಕೆಲಸ ಮಾಡಿ ಸಂಬಳ ಪಡೆದು ಮತ್ತೆ ಮೈಸೂರಿಗೆ ಹೋಗಿದ್ದಾನೆ. ಅಲ್ಲಿಂದ ಮುರ್ಡೇಶ್ವರ ಎಕ್ಸ್ ಪ್ರೆಸ್ ರೈಲು ಹತ್ತಿದ್ದು, ಉಡುಪಿಗೆ ಬಂದು ಇಳಿದಿದ್ದಾನೆ. ರೈಲು ಶನಿವಾರ ಬೆಳಗ್ಗೆ 7.30ರ ವೇಳೆಗೆ ಫರಂಗಿಪೇಟೆಯ ಆತನ ಮನೆ ಮುಂದೆಯೇ ಹೋಗಿದ್ದು, ಪೊಲೀಸರ ಹುಡುಕಾಟವನ್ನೂ ನೋಡಿದ್ದಾನೆ.

ಮನೆಯಿಂದ ತೆರಳುವಾಗ 500 ರೂ. ಕೈಯಲ್ಲಿತ್ತು. ಮೂರು ದಿನ ಕೆಲಸ ಮಾಡಿದ ಸಂಬಳವೂ ಉಡುಪಿಗೆ ತಲುಪಿದಾಗ ಮುಗಿದು ಹೋಗಿತ್ತು. ಉಡುಪಿಯಲ್ಲಿ ಮಳಿಗೆಯೊಂದಕ್ಕೆ ಹೋಗಿ ಸಣ್ಣ ಪುಟ್ಟ ತಿನಿಸು ತಗೊಂಡು ತಪ್ಪಿಸಿಕೊಂಡು ಹೋಗಲು ಟ್ರೈ ಮಾಡಿದ್ದಾನೆ. ಅಷ್ಟರಲ್ಲಿ ಅಲ್ಲಿನ ಸಿಬಂದಿ ಹಿಡಿದು ವಿಚಾರಣೆ ನಡೆಸಿದ್ದಾರೆ. ಪಾದದಲ್ಲಿ ರಕ್ತ ಗಾಯ ಇದ್ದುದರಿಂದ ಅದರಿಂದ ಬಿದ್ದ ರಕ್ತ ಚಪ್ಪಲಿಗೆ ಅಂಟಿತ್ತು ಎಂದು ಹೇಳಿದ್ದಾನೆ. ಆತನಿಗೆ ಊಟ, ಬಟ್ಟೆ ಕೊಟ್ಟು ಉಪಚಾರ ಮಾಡಿದ್ದೇವೆ. ಈಗ ರಿಮ್ಯಾಂಡ್ ಹೋಮಲ್ಲಿ ಇರಿಸಿದ್ದು, ಹೆಬಿಯಸ್ ಕಾರ್ಪಸ್ ಹಾಕಿರುವುದರಿಂದ ಹೈಕೋರ್ಟಿನಲ್ಲಿ ಹಾಜರುಪಡಿಸಬೇಕಾಗಿದೆ ಎಂದರು ಎಸ್ಪಿ.

ವಿಚಾರಣೆ ವೇಳೆ ಮಾ.3ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಇದ್ದುದರಿಂದ ಸಾಕಷ್ಟು ತಯಾರಿ ಮಾಡಿಕೊಂಡಿಲ್ಲ ಎಂಬ ಭಯದಿಂದ ಮನೆ ಬಿಟ್ಟು ಹೋಗಿದ್ದಾಗಿ ತಿಳಿಸಿದ್ದಾನೆ. ನಾವು ಏಳು ತಂಡಗಳನ್ನು ರಚಿಸಿ ಹುಡುಕಾಟ ನಡೆಸಿದ್ದೇವೆ, ಸ್ಥಳೀಯ ಸಿಸಿ ಕ್ಯಾಮರಾಗಳನ್ನು ಚೆಕ್ ಮಾಡಿದ್ದೇವೆ. ನದಿಯಲ್ಲೂ ಹುಡುಕಾಡಿದ್ದು, ಡ್ರೋಣ್ ಬಳಸಿಯೂ ಸರ್ಚ್ ಮಾಡಿಸಿದ್ದೇವೆ. ಫರಂಗಿಪೇಟೆ ಆಸುಪಾಸಿನಲ್ಲಿ 2-3 ಬಾರಿ ಹುಡುಕಾಡಿದ್ದೆವು. ಆತನಿಗೆ ಯಾರಾದ್ರೂ ಕಾಂಟ್ಯಾಕ್ಟ್ ಮಾಡುತ್ತಾರೆಯೇ ಅಥವಾ ಆತ ಮನೆಯವರನ್ನು ಸಂಪರ್ಕ ಮಾಡುತ್ತಾನೆಯೇ ಎಂದು ಕಣ್ಣಿಟ್ಟಿದ್ದೆವು. ಉಡುಪಿಯಲ್ಲಿ ಡಿಮಾರ್ಟ್ ಮಳಿಗೆಯವರು ಆತನನ್ನು ಹಿಡಿದು ಮನೆಯವರಿಗೆ ಫೋನ್ ಮಾಡಿದ್ದಾರೆ ಎಂದು ಎಸ್ಪಿ ಯತೀಶ್ ತಿಳಿಸಿದ್ದಾರೆ.
ತನ್ನ ಮೊಬೈಲ್ ಮತ್ತು ಚಪ್ಪಲಿಯನ್ನು ರೈಲು ಹಳಿಯಲ್ಲಿ ಬಿಟ್ಟು ಹೋಗಿದ್ದು ಮನೆಯವರು ಮತ್ತು ಪೊಲೀಸರನ್ನು ಯಾಮಾರಿಸಲು ಮಾಡಿರುವಂತೆ ಕಾಣುತ್ತಿದೆ. ಆತನನ್ನು ಇನ್ನಷ್ಟು ವಿಚಾರಣೆ ಮಾಡಬೇಕಾಗಿದೆ. ಸದ್ಯಕ್ಕೆ ರಿಮ್ಯಾಂಡ್ ಹೋಮಿನಲ್ಲಿ ಇರಿಸಲಾಗಿದೆ. ಬೇರೆ ಯಾರಾದ್ರೂ ಆತನಿಗೆ ಸಹಾಯ ಮಾಡಿದ್ದಾರೆಯೇ ಎಂಬ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಎಸ್ಪಿ ತಿಳಿಸಿದ್ದಾರೆ. ಎಎಸ್ಪಿ ರಾಜೇಂದ್ರ ಡಿ.ಎಸ್, ಬಂಟ್ವಾಳ ಡಿವೈಎಸ್ಪಿ ವಿಜಯಪ್ರಸಾದ್ ಉಪಸ್ಥಿತರಿದ್ದರು.
Farangipete Diganth missing case, Dk Sp Yathish revelas how Diganth was found. Fearing exams, Diganth, 17, a II PU PCMB student who had been missing since February 25, was traced to Udupi on Saturday. He had traveled to multiple locations, said Dakshina Kannada Superintendent of Police Yathish N.Addressing the media on Sunday, the SP stated that, based on the teenager’s preliminary statement, he had left home due to fear of his upcoming exams in the first week of March, for which he felt unprepared.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm